AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ರೈತ ನಿರ್ಮಿಸಿದ ದೇಸೀ ಜಲ ವಿದ್ಯುದಾಗಾರ.. ಕ್ರಿಕೆಟಿಗ VVS ಲಕ್ಷ್ಮಣ್ ಹೃದಯತುಂಬಿ ಶ್ಲಾಘನೆ!

ನರಗುಂದ ಸಮೀಪದ ಬಂಡೆಮ್ಮನಗರ ನಿವಾಸಿ ಸಿದ್ದಪ್ಪ ಹುಲಜೋಗಿ ಎಂಬುವವರು ತಯಾರಿಸಿದ್ದ ಜಲವಿದ್ಯುತ್‌ಗಾರದ ಛಾಯಾಚಿತ್ರ ವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ರೈತನ ವಿನೂತನ ಪ್ರಯತ್ನಕ್ಕೆ ಟ್ವಿಟರ್​ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ಗದಗ ರೈತ ನಿರ್ಮಿಸಿದ ದೇಸೀ ಜಲ ವಿದ್ಯುದಾಗಾರ.. ಕ್ರಿಕೆಟಿಗ VVS ಲಕ್ಷ್ಮಣ್ ಹೃದಯತುಂಬಿ ಶ್ಲಾಘನೆ!
ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡುವ ಮೂಲಕ ಗದಗ ರೈತನ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
shruti hegde
|

Updated on:Jan 05, 2021 | 12:17 PM

Share

ಗದಗ: ಬಂಡಾಯದ ನಾಡು ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಈಗ ಭಾರೀ ಸದ್ದು ಮಾಡಿದ್ದಾರೆ. ಹಲವು ವರ್ಷಗಳ ಹಿಂದೆ ತಯಾರಿಸಿದ್ದ ಜಲ ವಿದ್ಯುದಾಗಾರದ ಫೋಟೋವನ್ನು ಖ್ಯಾತ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ನರಗುಂದ ಸಮೀಪದ ಬಂಡೆಮ್ಮನಗರ ನಿವಾಸಿ ಸಿದ್ದಪ್ಪ ಹುಲಜೋಗಿ ಎಂಬುವವರು ತಯಾರಿಸಿದ್ದ ಜಲ ವಿದ್ಯುದಾಗಾರದ ಛಾಯಾಚಿತ್ರ ವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ರೈತನ ವಿನೂತನ ಪ್ರಯತ್ನಕ್ಕೆ ಟ್ವಿಟರ್​ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ಕೇವಲ ಐದೇ ಸಾವಿರ ರೂ ವೆಚ್ಚದಲ್ಲಿ 150 ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿರುವ ರೈತ ಸಿದ್ದಪ್ಪ! ಕೇವಲ 5 ಸಾವಿರ ರೂಪಾಯಿ ವೆಚ್ಚದಲ್ಲಿ ರೈತ ಸಿದ್ದಪ್ಪ, 150 ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದ್ದಾರೆ. ಕೆಲವೇ ತಿಂಗಳು ಹರಿಯುವ ಕಾಲುವೆ ನೀರಿನಿಂದ ರೈತರು ವಿದ್ಯುತ್ ತಯಾರಿಸಿ, ವರ್ಷವಿಡೀ ನೀರು ಹರಿದರೆ ಇಡೀ ಗ್ರಾಮಕ್ಕೆ ವಿದ್ಯುತ್ ಪೂರೈಸಬಹುದು. ಹೆಚ್ಚಿನ ಸಂಪನ್ಮೂಲವಿಲ್ಲದೇ ಗ್ರಾಮೀಣ ಭಾಗದಲ್ಲಿ ಬಹುದೊಡ್ಡ ಬದಲಾವಣೆ ತರಲು ಸಿದ್ದಪ್ಪ ಅವರ ಪ್ರಯತ್ನ ಮಾದರಿಯಾಗಿದೆ ಎಂದು ವಿವಿಎಸ್ ಲಕ್ಷ್ಮಣ್ ಶ್ಲಾಘಿಸಿದ್ದಾರೆ.

ರೈತ ಸಿದ್ದಪ್ಪರ ಮೊದಲ ಪ್ರಯೋಗ: 2011-12ರಲ್ಲಿ ಜಲ ವಿದ್ಯುತ್‌ಗಾರವನ್ನು ಸಿದ್ಧಪಡಿಸಿದ್ದ ಸಿದ್ದಪ್ಪ, ಮಲಪ್ರಭಾ ಬಲದಂಡೆ ಕಾಲುವೆಯಲ್ಲಿ ಮೊದಲ ಬಾರಿಗೆ ಪ್ರಯೋಗ ಕೈಗೊಂಡಿದ್ದರು. ಪ್ಲಾಸ್ಟಿಕ್ ಬುಟ್ಟಿಗಳನ್ನು ಅಳವಡಿಸಿದ ಚಕ್ರ ತಿರುಗುವುದರಿಂದ ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ಈ ವಿದ್ಯುತ್‌ ನ್ನು ಬಂಡೆಮ್ಮನಗರದ ತೋಟದ ಮನೆಗೆ ಬಳಕೆ ಮಾಡುತ್ತಿದ್ದರು.

ಆದರೆ, ಕಾಲುವೆಯಲ್ಲಿ ನೀರಿನ ಕೊರತೆ ಹಾಗೂ ಹೆಸ್ಕಾಂ ಲೈನ್ ಬಂದಿದ್ದರಿಂದ ವಿದ್ಯುತ್ ಉತ್ಪಾದನೆಯನ್ನು ಕೈಬಿಟ್ಟಿದ್ದರು. ರೈತರು ಹಾಗೂ ಗ್ರಾಮೀಣ ಜನರ ಅನುಕೂಲಕ್ಕಾಗಿ ಇದರಲ್ಲಿ ಮತ್ತಷ್ಟು ಸುಧಾರಣೆ ತಂದು, ಹೊಸ ಮಾದರಿಯಲ್ಲಿ ವಿದ್ಯುತ್ ಉತ್ಪಾದನಾ ಉಪಕರಣಗಳನ್ನು ಆವಿಷ್ಕರಿಸುವ ಆಲೋಚನೆಯನ್ನು ಮೊದಲು ಸಿದ್ದಪ್ಪ ಹೊಂದಿದ್ದರು.

ರಾಜ್ಯದ ವಿದ್ಯುತ್​ ಬೇಡಿಕೆಯಲ್ಲಿ ಗಣನೀಯ ಏರಿಕೆ: ಶಕ್ತಿನಗರ, YTPSನಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ

Published On - 12:12 pm, Tue, 5 January 21

Follow Us
shruti hegde
shruti hegde
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ