AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ರೈತ ನಿರ್ಮಿಸಿದ ದೇಸೀ ಜಲ ವಿದ್ಯುದಾಗಾರ.. ಕ್ರಿಕೆಟಿಗ VVS ಲಕ್ಷ್ಮಣ್ ಹೃದಯತುಂಬಿ ಶ್ಲಾಘನೆ!

ನರಗುಂದ ಸಮೀಪದ ಬಂಡೆಮ್ಮನಗರ ನಿವಾಸಿ ಸಿದ್ದಪ್ಪ ಹುಲಜೋಗಿ ಎಂಬುವವರು ತಯಾರಿಸಿದ್ದ ಜಲವಿದ್ಯುತ್‌ಗಾರದ ಛಾಯಾಚಿತ್ರ ವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ರೈತನ ವಿನೂತನ ಪ್ರಯತ್ನಕ್ಕೆ ಟ್ವಿಟರ್​ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ಗದಗ ರೈತ ನಿರ್ಮಿಸಿದ ದೇಸೀ ಜಲ ವಿದ್ಯುದಾಗಾರ.. ಕ್ರಿಕೆಟಿಗ VVS ಲಕ್ಷ್ಮಣ್ ಹೃದಯತುಂಬಿ ಶ್ಲಾಘನೆ!
ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡುವ ಮೂಲಕ ಗದಗ ರೈತನ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
shruti hegde
|

Updated on:Jan 05, 2021 | 12:17 PM

Share

ಗದಗ: ಬಂಡಾಯದ ನಾಡು ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಈಗ ಭಾರೀ ಸದ್ದು ಮಾಡಿದ್ದಾರೆ. ಹಲವು ವರ್ಷಗಳ ಹಿಂದೆ ತಯಾರಿಸಿದ್ದ ಜಲ ವಿದ್ಯುದಾಗಾರದ ಫೋಟೋವನ್ನು ಖ್ಯಾತ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ನರಗುಂದ ಸಮೀಪದ ಬಂಡೆಮ್ಮನಗರ ನಿವಾಸಿ ಸಿದ್ದಪ್ಪ ಹುಲಜೋಗಿ ಎಂಬುವವರು ತಯಾರಿಸಿದ್ದ ಜಲ ವಿದ್ಯುದಾಗಾರದ ಛಾಯಾಚಿತ್ರ ವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ರೈತನ ವಿನೂತನ ಪ್ರಯತ್ನಕ್ಕೆ ಟ್ವಿಟರ್​ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ಕೇವಲ ಐದೇ ಸಾವಿರ ರೂ ವೆಚ್ಚದಲ್ಲಿ 150 ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿರುವ ರೈತ ಸಿದ್ದಪ್ಪ! ಕೇವಲ 5 ಸಾವಿರ ರೂಪಾಯಿ ವೆಚ್ಚದಲ್ಲಿ ರೈತ ಸಿದ್ದಪ್ಪ, 150 ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದ್ದಾರೆ. ಕೆಲವೇ ತಿಂಗಳು ಹರಿಯುವ ಕಾಲುವೆ ನೀರಿನಿಂದ ರೈತರು ವಿದ್ಯುತ್ ತಯಾರಿಸಿ, ವರ್ಷವಿಡೀ ನೀರು ಹರಿದರೆ ಇಡೀ ಗ್ರಾಮಕ್ಕೆ ವಿದ್ಯುತ್ ಪೂರೈಸಬಹುದು. ಹೆಚ್ಚಿನ ಸಂಪನ್ಮೂಲವಿಲ್ಲದೇ ಗ್ರಾಮೀಣ ಭಾಗದಲ್ಲಿ ಬಹುದೊಡ್ಡ ಬದಲಾವಣೆ ತರಲು ಸಿದ್ದಪ್ಪ ಅವರ ಪ್ರಯತ್ನ ಮಾದರಿಯಾಗಿದೆ ಎಂದು ವಿವಿಎಸ್ ಲಕ್ಷ್ಮಣ್ ಶ್ಲಾಘಿಸಿದ್ದಾರೆ.

ರೈತ ಸಿದ್ದಪ್ಪರ ಮೊದಲ ಪ್ರಯೋಗ: 2011-12ರಲ್ಲಿ ಜಲ ವಿದ್ಯುತ್‌ಗಾರವನ್ನು ಸಿದ್ಧಪಡಿಸಿದ್ದ ಸಿದ್ದಪ್ಪ, ಮಲಪ್ರಭಾ ಬಲದಂಡೆ ಕಾಲುವೆಯಲ್ಲಿ ಮೊದಲ ಬಾರಿಗೆ ಪ್ರಯೋಗ ಕೈಗೊಂಡಿದ್ದರು. ಪ್ಲಾಸ್ಟಿಕ್ ಬುಟ್ಟಿಗಳನ್ನು ಅಳವಡಿಸಿದ ಚಕ್ರ ತಿರುಗುವುದರಿಂದ ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ಈ ವಿದ್ಯುತ್‌ ನ್ನು ಬಂಡೆಮ್ಮನಗರದ ತೋಟದ ಮನೆಗೆ ಬಳಕೆ ಮಾಡುತ್ತಿದ್ದರು.

ಆದರೆ, ಕಾಲುವೆಯಲ್ಲಿ ನೀರಿನ ಕೊರತೆ ಹಾಗೂ ಹೆಸ್ಕಾಂ ಲೈನ್ ಬಂದಿದ್ದರಿಂದ ವಿದ್ಯುತ್ ಉತ್ಪಾದನೆಯನ್ನು ಕೈಬಿಟ್ಟಿದ್ದರು. ರೈತರು ಹಾಗೂ ಗ್ರಾಮೀಣ ಜನರ ಅನುಕೂಲಕ್ಕಾಗಿ ಇದರಲ್ಲಿ ಮತ್ತಷ್ಟು ಸುಧಾರಣೆ ತಂದು, ಹೊಸ ಮಾದರಿಯಲ್ಲಿ ವಿದ್ಯುತ್ ಉತ್ಪಾದನಾ ಉಪಕರಣಗಳನ್ನು ಆವಿಷ್ಕರಿಸುವ ಆಲೋಚನೆಯನ್ನು ಮೊದಲು ಸಿದ್ದಪ್ಪ ಹೊಂದಿದ್ದರು.

ರಾಜ್ಯದ ವಿದ್ಯುತ್​ ಬೇಡಿಕೆಯಲ್ಲಿ ಗಣನೀಯ ಏರಿಕೆ: ಶಕ್ತಿನಗರ, YTPSನಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ

Published On - 12:12 pm, Tue, 5 January 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ