AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಮೂರ್ತಿ ವ್ಯಾಪಾರಿಗಳು, ಅಧಿಕಾರಿಗಳ ಮಧ್ಯೆ ಜಟಾಪಟಿ!

ಬೆಂಗಳೂರು: ಗಣೇಶ ಹಬ್ಬದ ಸಂಭ್ರಮದಲ್ಲಿರುವಾಗಲೇ ಗಣೇಶ ಮೂರ್ತಿ ವ್ಯಾಪಾರಿಗಳು ಮತ್ತು ಅಧಿಕಾರಿಗಳ ಮಧ್ಯೆ ಜಟಾಪಟಿ ನಡೆದಿದೆ. ಟ್ಯಾನರಿ ರಸ್ತೆಯ ಅಶೋಕ್ ಟಾಕೀಸ್ ಬಳಿ ಇರುವ ಅಂಗಡಿಗಳಿಗೆ ದಾಳಿ ನಡೆಸಿದ ಅಧಿಕಾರಿಗಳು ಪಿಒಪಿ ಗಣೇಶ ಮೂರ್ತಿ ಮಾರಾಟ ಮಾಡದಂತೆ ತಡೆ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಗಣೇಶ ಮೂರ್ತಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ರು. ಪಿಒಪಿ ನಿಷೇಧ ಮಾಡಿ ಈ ಬಾರಿ ಆದೇಶವನ್ನು ಹೊರಡಿಸಿಲ್ಲ. ಈಗ ನೀವು ಏಕಾಏಕಿ ಇಲ್ಲಿಗೆ ಬಂದು ಅಡ್ಡಿಪಡಿಸಿದರೆ ಹೇಗೆ? ನಾವು ಈಗ ಎಲ್ಲಿಗೆ ಹೋಗಬೇಕೆಂದು ಅಧಿಕಾರಿಗಳಿಗೆ […]

ಗಣೇಶ ಮೂರ್ತಿ ವ್ಯಾಪಾರಿಗಳು, ಅಧಿಕಾರಿಗಳ ಮಧ್ಯೆ ಜಟಾಪಟಿ!
ಆಯೇಷಾ ಬಾನು
|

Updated on: Aug 22, 2020 | 3:14 PM

Share

ಬೆಂಗಳೂರು: ಗಣೇಶ ಹಬ್ಬದ ಸಂಭ್ರಮದಲ್ಲಿರುವಾಗಲೇ ಗಣೇಶ ಮೂರ್ತಿ ವ್ಯಾಪಾರಿಗಳು ಮತ್ತು ಅಧಿಕಾರಿಗಳ ಮಧ್ಯೆ ಜಟಾಪಟಿ ನಡೆದಿದೆ. ಟ್ಯಾನರಿ ರಸ್ತೆಯ ಅಶೋಕ್ ಟಾಕೀಸ್ ಬಳಿ ಇರುವ ಅಂಗಡಿಗಳಿಗೆ ದಾಳಿ ನಡೆಸಿದ ಅಧಿಕಾರಿಗಳು ಪಿಒಪಿ ಗಣೇಶ ಮೂರ್ತಿ ಮಾರಾಟ ಮಾಡದಂತೆ ತಡೆ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಗಣೇಶ ಮೂರ್ತಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ರು.

ಪಿಒಪಿ ನಿಷೇಧ ಮಾಡಿ ಈ ಬಾರಿ ಆದೇಶವನ್ನು ಹೊರಡಿಸಿಲ್ಲ. ಈಗ ನೀವು ಏಕಾಏಕಿ ಇಲ್ಲಿಗೆ ಬಂದು ಅಡ್ಡಿಪಡಿಸಿದರೆ ಹೇಗೆ? ನಾವು ಈಗ ಎಲ್ಲಿಗೆ ಹೋಗಬೇಕೆಂದು ಅಧಿಕಾರಿಗಳಿಗೆ ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ನಮ್ಮ ಪಾಡಿಗೆ ನಮಗೆ ವ್ಯಾಪಾರ ಮಾಡುವುದಕ್ಕೆ ಬಿಡಿ. 4 ಅಡಿಗೂ ಎತ್ತರದ ಮೂರ್ತಿ ಮಾರಾಟ ಮಾಡದಂತೆ ಸರ್ಕಾರದಿಂದ ಸೂಚನೆ ನೀಡಲಾಗಿತ್ತು. ಅದರಂತೆ ನಾವು ಗಣೇಶ ಮೂರ್ತಿ ಮಾರಾಟ ಮಾಡುತ್ತಿದ್ದೇವೆ ಎಂದಿದ್ದಾರೆ. ವ್ಯಾಪಾರಸ್ಥರ ಮಾತಿಗೆ ಅಧಿಕಾರಿಗಳು ಕೂಡ ಗರಂ ಆಗಿದ್ದಾರೆ.

ಪಿಒಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡುವಂತಿಲ್ಲ. ಸರ್ಕಾರದ ಆದೇಶವೇ ಇದೆ. ತಕ್ಷಣ ಅಂಗಡಿ ಮುಚ್ಚಿ ಇಲ್ಲದಿದ್ರೆ ಸೀಜ್ ಮಾಡುತ್ತೇವೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ರು. ಈ ವೇಳೆ ಅಂಗಡಿಯನ್ನು ಮುಚ್ಚಲ್ಲವೆಂದು ವ್ಯಾಪಾರಿಗಳು ಪಟ್ಟು ಹಿಡಿದ್ರು. ನಮಗೆ ಮೊದಲೇ ನೋಟಿಸ್ ಕೊಡಬೇಕಿತ್ತು. ದಿಢೀರ್ ಅಂತ ಬಂದು ಗಣೇಶ್ ಎತ್ತಂಗಡಿ‌ ಮಾಡಿದ್ರೆ ಹೇಗೆ. ನಮಗೆ ಯಾರು ಬಂಡವಾಳವನ್ನು ಕೊಡುತ್ತಾರೆಂದು ಅಧಿಕಾರಿಗಳು ಮತ್ತು ವ್ಯಾಪಾರಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ