ಕ್ವಾರಂಟೈನ್​ಗೆ ವಿರೋಧ: ಪೊಲೀಸರು, ಅಧಿಕಾರಿಗಳ ಜತೆ ಗ್ರಾಮಸ್ಥರ ವಾಗ್ವಾದ

ಚಿತ್ರದುರ್ಗ: ಕೊರೊನಾ ವೈರಸ್ ದೇಶವನ್ನು ಆವರಿಸಿದೆ. ಕೊರೊನಾ ಶಂಕಿತರಿಗೆ ಅಥವಾ ಬೇರೆ ದೇಶದಿಂದ ಬಂದ ಜನರಿಗೆ ಕ್ವಾರಂಟೈನ್ ಮಾಡುವುದಕ್ಕೆ ರಾಜ್ಯದ ಹಲವೆಡೆ ವಿರೋಧ ವ್ಯಕ್ತವಾಗುತ್ತಿದೆ. ಅದೇ ರೀತಿ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ತಂಡಗ ಗ್ರಾಮದ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ಗೆ ವಿರೋಧ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ 20 ಜನರ ಕ್ವಾರಂಟೈನ್‌ಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಕ್ವಾರಂಟೈನ್‌ಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ದೊಡ್ಡಸಿದ್ದವ್ವನಹಳ್ಳಿಯಲ್ಲಿ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡ್ತು. ಆದರೆ ಅಲ್ಲೂ ಕೂಡ ಕ್ವಾರಂಟೈನ್‌ಗೆ ವಿರೋಧ ಉಂಟಾಗಿದೆ. […]

ಕ್ವಾರಂಟೈನ್​ಗೆ  ವಿರೋಧ: ಪೊಲೀಸರು, ಅಧಿಕಾರಿಗಳ ಜತೆ ಗ್ರಾಮಸ್ಥರ ವಾಗ್ವಾದ
ಸಾಧು ಶ್ರೀನಾಥ್​

Updated on: May 12, 2020 | 7:22 AM

ಚಿತ್ರದುರ್ಗ: ಕೊರೊನಾ ವೈರಸ್ ದೇಶವನ್ನು ಆವರಿಸಿದೆ. ಕೊರೊನಾ ಶಂಕಿತರಿಗೆ ಅಥವಾ ಬೇರೆ ದೇಶದಿಂದ ಬಂದ ಜನರಿಗೆ ಕ್ವಾರಂಟೈನ್ ಮಾಡುವುದಕ್ಕೆ ರಾಜ್ಯದ ಹಲವೆಡೆ ವಿರೋಧ ವ್ಯಕ್ತವಾಗುತ್ತಿದೆ. ಅದೇ ರೀತಿ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ತಂಡಗ ಗ್ರಾಮದ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ಗೆ ವಿರೋಧ ವ್ಯಕ್ತವಾಗಿದೆ.

ಹಾಸ್ಟೆಲ್‌ನಲ್ಲಿ 20 ಜನರ ಕ್ವಾರಂಟೈನ್‌ಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಕ್ವಾರಂಟೈನ್‌ಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ದೊಡ್ಡಸಿದ್ದವ್ವನಹಳ್ಳಿಯಲ್ಲಿ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡ್ತು.

ಆದರೆ ಅಲ್ಲೂ ಕೂಡ ಕ್ವಾರಂಟೈನ್‌ಗೆ ವಿರೋಧ ಉಂಟಾಗಿದೆ. ಸಾಮಾಜಿಕ ಅಂತರವನ್ನು ಮರೆತು ಕ್ವಾರಂಟೈನ್‌ಗೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರೆ. ಪೊಲೀಸರು, ಅಧಿಕಾರಿಗಳ ಜತೆ ಗ್ರಾಮಸ್ಥರು ವಾಗ್ವಾದಕ್ಕೆ ಇಳಿದಿದ್ದಾರೆ.

Published On - 7:22 am, Tue, 12 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us