ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಅಪಾರ ನೀರು ಪೋಲು

ಗದಗ: ಕುಡಿಯುವ ನೀರಿನ ಪೈಪ್ ಒಡೆದು ಅಪಾರ ನೀರು ಪೋಲಾಗುತ್ತಿರುವ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಪೈಪ್‌ ಒಡೆದು ನೀರು ಪೋಲಾಗುತ್ತಿದೆ. ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆಯಾಗುವುದು ಇದೇ ಪೈಪ್​ ಮೂಲಕವಾಗಿದೆ. ಪೈಪ್ ಒಡೆದು ನೀರಿನ ರಭಸಕ್ಕೆ ಕಾರಂಜಿಯಂತೆ ಚಿಮ್ಮುತ್ತಿದೆ. ಇಷ್ಟಾದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ಮುಂದಿನ ಕ್ರಮ ಕೈಗೊಳ್ಳದೆ, ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಹಮ್ಮಿಗಿ ಬ್ಯಾರೇಜ್ ನಿಂದ ಗದಗ-ಬೆಟಗೇರಿ ಅವಳಿ ನಗರಕ್ಕೆ ಇಲ್ಲಿಂದ ನೀರು ಸರಬರಾಜು ಆಗುತ್ತದೆ.

ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಅಪಾರ ನೀರು ಪೋಲು
ಸಾಧು ಶ್ರೀನಾಥ್​

Updated on: Oct 19, 2020 | 11:25 AM

ಗದಗ: ಕುಡಿಯುವ ನೀರಿನ ಪೈಪ್ ಒಡೆದು ಅಪಾರ ನೀರು ಪೋಲಾಗುತ್ತಿರುವ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಪೈಪ್‌ ಒಡೆದು ನೀರು ಪೋಲಾಗುತ್ತಿದೆ.
ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆಯಾಗುವುದು ಇದೇ ಪೈಪ್​ ಮೂಲಕವಾಗಿದೆ.

ಪೈಪ್ ಒಡೆದು ನೀರಿನ ರಭಸಕ್ಕೆ ಕಾರಂಜಿಯಂತೆ ಚಿಮ್ಮುತ್ತಿದೆ. ಇಷ್ಟಾದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ಮುಂದಿನ ಕ್ರಮ ಕೈಗೊಳ್ಳದೆ, ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಹಮ್ಮಿಗಿ ಬ್ಯಾರೇಜ್ ನಿಂದ ಗದಗ-ಬೆಟಗೇರಿ ಅವಳಿ ನಗರಕ್ಕೆ ಇಲ್ಲಿಂದ ನೀರು ಸರಬರಾಜು ಆಗುತ್ತದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us