AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಬಳಿಕ ಬರದ ಬರೆ: ಜೀವಪಣಕ್ಕಿಟ್ರೆ ಮಾತ್ರವೇ ಜೀವಜಲ!

ಚಿಕ್ಕೋಡಿ: ಕಳೆದ ವರ್ಷವಷ್ಟೇ ಭೀಕರ ಜಲಪ್ರವಾಹಕ್ಕೆ ಸಿಲುಕಿ ನಲುಗಿಹೋಗಿದ್ದ ನಾಡಲ್ಲೀಗ ಬರದ ಕಾರ್ಮೋಡ ಆವರಿಸಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಹನಿ ನೀರಿಗಾಗಿ ನಿತ್ಯ ಮೂರು ಕಿಲೋ ಮೀಟರ್ ನಡೆಯುವಂತ ದುಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ವಡ್ರಾಳ ಗ್ರಾಮಸ್ಥರು ಜೀವಭಯದಲ್ಲೇ ಕುಡಿಯುವ ನೀರು ತರುತ್ತಿದ್ದಾರೆ. ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಪ್ರತಿನಿಧಿಸುವ ಕ್ಷೇತ್ರದಲ್ಲಿ ಜನರ ಗೋಳು ಕೇಳುವವರೇ ಇಲ್ಲ ಎಂಬಂತಾಗಿದೆ. ನಿತ್ಯವೂ ಮೂರು ಕಿಲೋ ಮೀಟರ್ ನಡೆದುಕೊಂಡು ಹೋಗಿ ಬಾವಿಯಲ್ಲಿ ನೀರು ತರುವ […]

ನೆರೆ ಬಳಿಕ ಬರದ ಬರೆ: ಜೀವಪಣಕ್ಕಿಟ್ರೆ ಮಾತ್ರವೇ ಜೀವಜಲ!
ಸಾಧು ಶ್ರೀನಾಥ್​
|

Updated on:Feb 29, 2020 | 10:47 AM

Share

ಚಿಕ್ಕೋಡಿ: ಕಳೆದ ವರ್ಷವಷ್ಟೇ ಭೀಕರ ಜಲಪ್ರವಾಹಕ್ಕೆ ಸಿಲುಕಿ ನಲುಗಿಹೋಗಿದ್ದ ನಾಡಲ್ಲೀಗ ಬರದ ಕಾರ್ಮೋಡ ಆವರಿಸಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಹನಿ ನೀರಿಗಾಗಿ ನಿತ್ಯ ಮೂರು ಕಿಲೋ ಮೀಟರ್ ನಡೆಯುವಂತ ದುಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ವಡ್ರಾಳ ಗ್ರಾಮಸ್ಥರು ಜೀವಭಯದಲ್ಲೇ ಕುಡಿಯುವ ನೀರು ತರುತ್ತಿದ್ದಾರೆ.

ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಪ್ರತಿನಿಧಿಸುವ ಕ್ಷೇತ್ರದಲ್ಲಿ ಜನರ ಗೋಳು ಕೇಳುವವರೇ ಇಲ್ಲ ಎಂಬಂತಾಗಿದೆ. ನಿತ್ಯವೂ ಮೂರು ಕಿಲೋ ಮೀಟರ್ ನಡೆದುಕೊಂಡು ಹೋಗಿ ಬಾವಿಯಲ್ಲಿ ನೀರು ತರುವ ಕೆಲಸ ಮಾಡುತ್ತಿದ್ದಾರೆ. 50 ಅಡಿ ಆಳದ ಬಾವಿಗೆ ಇಳಿದು ಮಹಿಳೆಯರು ನೀರು ತರುತ್ತಿದ್ದಾರೆ. ಸ್ವಲ್ಪ ಯಾಮಾರಿ ಕಾಲು ಜಾರಿದ್ರೂ ಸಾವು ಕಟ್ಟಿಟ್ಟಬುತ್ತಿಯಾಗಿದೆ. ಹಲವು ವರ್ಷಗಳಿಂದ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ರೂ ನೀರಿನ ಗೋಳು ತಪ್ಪಿಲ್ಲ.

ನೀರಿನ ವ್ಯವಸ್ಥೆ ಕಲ್ಪಿಸುತ್ತೇವೆ: ವಡ್ರಾಳ ಗ್ರಾಮಕ್ಕೆ ತಾತ್ಕಾಲಿಕ ನೀರಿನ ವ್ಯವಸ್ಥೆ ಮಾಡುತ್ತೇವೆ. ಸದ್ಯ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡ್ತೇವೆ. ಶಾಶ್ವತ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಟಿವಿ9ಗೆ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ಪ್ರತಿಕ್ರಿಯೆ ನೀಡಿದ್ದಾರೆ.

https://www.facebook.com/Tv9Kannada/videos/142754976934200/

Published On - 10:36 am, Sat, 29 February 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್