ಮಹಾರಾಷ್ಟ್ರದಲ್ಲಿ ನಾವು ಅಧಿಕಾರ ಕಳೆದುಕೊಂಡಿಲ್ಲ, ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಲಾಗುತ್ತಿದೆ: ಸಿದ್ದರಾಮಯ್ಯ

Edited By: ಅರುಣ್​ ಕುಮಾರ್​ ಬೆಳ್ಳಿ

Updated on: Jun 27, 2022 | 2:56 PM

ಇಂದಿರಾಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ ಇಟ್ಟರು ಅಂತ ಬಿಜೆಪಿಯವರು ಹೇಳುತ್ತಾರೆ. ಪ್ರಜಾಪ್ರಭುತ್ವದ ಅವಸ್ಥೆಯನ್ನು ಆಪರೇಷನ್ ಕಮಲ ಇವರೇನು ಮಾಡುತ್ತಿದ್ದಾರೆ ಅಂತ ನಾವೆಲ್ಲ ನೋಡುತ್ತಿದ್ದೇವೆ ಅಂತ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳ:  ಸಿಂಧೂನೂರಿನಲ್ಲಿ ಮಸ್ಕಿ ಶಾಸಕ ಬಸನಗೌಡ ತುರವೀಹಾಳ (Basangouda Thurvihal) ಅವರ ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ಸೋಮವಾರ ಕೊಪ್ಪಳಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಮಾಧ್ಯಮದವರೊಂದಿಗೆ ಜಾಲಿ ಮೂಡ್ ನಲ್ಲಿ ಮಾತಾಡಿದರು. ಮಹಾರಾಷ್ಟ್ರದಲ್ಲಿ (Maharashtra) ಸಮ್ಮಿಶ್ರ ಸರ್ಕಾರ ಬಿದ್ದುಹೋಗಿಲ್ಲ, ಅದರೆ ಕೇಂದ್ರ ಸರ್ಕಾರ ಅದನ್ನು ಬೀಳಿಸುವ ಪ್ರಯತ್ನ ಮಾಡುತ್ತಿದೆ. ಇಂದಿರಾಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ ಇಟ್ಟರು ಅಂತ ಬಿಜೆಪಿಯವರು ಹೇಳುತ್ತಾರೆ. ಪ್ರಜಾಪ್ರಭುತ್ವದ ಅವಸ್ಥೆಯನ್ನು ಆಪರೇಷನ್ ಕಮಲ ಇವರೇನು ಮಾಡುತ್ತಿದ್ದಾರೆ ಅಂತ ನಾವೆಲ್ಲ ನೋಡುತ್ತಿದ್ದೇವೆ ಅಂತ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:   Siddaramaiah: ಭ್ರಷ್ಟಾಚಾರದ ಹಣ ಬಳಸಿ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ: ಸಿದ್ದರಾಮಯ್ಯ ಟೀಕೆ

Follow Us
Web contact

TV9 Kannada

Read More