AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಬಾಧೆ: ಮನನೊಂದ ನೇಕಾರ ಮಗ್ಗದ ಮುಂದೆಯೇ ಆತ್ಮಹತ್ಯೆಗೆ ಶರಣು, ಎಲ್ಲಿ?

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ. ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ. ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. […]

ಸಾಲಬಾಧೆ: ಮನನೊಂದ ನೇಕಾರ ಮಗ್ಗದ ಮುಂದೆಯೇ ಆತ್ಮಹತ್ಯೆಗೆ ಶರಣು, ಎಲ್ಲಿ?
ಆಯೇಷಾ ಬಾನು
| Edited By: |

Updated on: Oct 01, 2020 | 3:28 PM

Share

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ.

ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ. ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಮೃತ ಸಂತೋಷ್​ಗೆ ಐದು ವರ್ಷದ ಗಂಡು ಮಗು ಹಾಗೂ ಮೂರು ವರ್ಷದ ಹೆಣ್ಣು ಮಗುವಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More