AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ.. ನುಂಗಿಬಿಡ್ತು ನೇಕಾರನ ಪ್ರಾಣ, ಪತ್ನಿ 4 ದಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು

ದೊಡ್ಡಬಳ್ಳಾಪುರ: ಕೊರೊನಾ ಮಹಾಮಾರಿ ದೇಶದಲ್ಲಿ ಹಲವಾರು ಸೋಂಕಿತರನ್ನ ನೇರವಾಗಿ ಬಲಿ ಪಡೆಯುತ್ತಿದ್ದರೆ ಇನ್ನೊಂದೆಡೆ ಅದರಿಂದ ಎದುರಾಗಿರುವ ಆರ್ಥಿಕ ಸಂಕಷ್ಟಗಳಿಂದ ಹಲವಾರು ಜನ ಪ್ರಾಣ ಬಿಡುವಂಥ ದುಃಸ್ಥಿತಿ ಉಂಟಾಗಿದೆ. ಇಂಥದ್ದೇ ಒಂದು ಘಟನೆ ನಡೆದಿರೋದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ. ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ ದೊಡ್ಡಬಳ್ಳಾಪುರದ ಭುವನೇಶ್ವರಿ ನಗರದಲ್ಲಿ ವಾಸವಾಗಿದ್ದ 45 ವರ್ಷದ ನಾರಾಯಣ ಎಂಬುವವರು ಬಾಡಿಗೆಗೆ ಮಗ್ಗ ಪಡೆದು ನೇಕಾರಿಕೆ ಮಾಡುತ್ತಿದ್ದರು. ಹೇಗೋ ಬದುಕು ಸಾಗಿಸುತ್ತಿದ್ದ ಅವರಿಗೆ ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ. ವ್ಯಾಪಾರ ವಹಿವಾಟು […]

ಕೊರೊನಾ.. ನುಂಗಿಬಿಡ್ತು ನೇಕಾರನ ಪ್ರಾಣ, ಪತ್ನಿ 4 ದಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು
KUSHAL V
| Edited By: |

Updated on: Jun 23, 2020 | 6:06 PM

Share

ದೊಡ್ಡಬಳ್ಳಾಪುರ: ಕೊರೊನಾ ಮಹಾಮಾರಿ ದೇಶದಲ್ಲಿ ಹಲವಾರು ಸೋಂಕಿತರನ್ನ ನೇರವಾಗಿ ಬಲಿ ಪಡೆಯುತ್ತಿದ್ದರೆ ಇನ್ನೊಂದೆಡೆ ಅದರಿಂದ ಎದುರಾಗಿರುವ ಆರ್ಥಿಕ ಸಂಕಷ್ಟಗಳಿಂದ ಹಲವಾರು ಜನ ಪ್ರಾಣ ಬಿಡುವಂಥ ದುಃಸ್ಥಿತಿ ಉಂಟಾಗಿದೆ. ಇಂಥದ್ದೇ ಒಂದು ಘಟನೆ ನಡೆದಿರೋದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ.

ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ ದೊಡ್ಡಬಳ್ಳಾಪುರದ ಭುವನೇಶ್ವರಿ ನಗರದಲ್ಲಿ ವಾಸವಾಗಿದ್ದ 45 ವರ್ಷದ ನಾರಾಯಣ ಎಂಬುವವರು ಬಾಡಿಗೆಗೆ ಮಗ್ಗ ಪಡೆದು ನೇಕಾರಿಕೆ ಮಾಡುತ್ತಿದ್ದರು. ಹೇಗೋ ಬದುಕು ಸಾಗಿಸುತ್ತಿದ್ದ ಅವರಿಗೆ ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ. ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡು ಜೀವನ ನಡೆಸುವುದೇ ಕಷ್ಟವಾಗಿಬಿಡ್ತು. ಒಂದು ಕಡೆ ಮಗ್ಗದ ಬಾಡಿಗೆ ಮತ್ತು ಕರೆಂಟ್​ ಬಿಲ್​ನ ಹೊಡೆತ ಮತ್ತೊಂದ್ಕಡೆ ಸಾಲಬಾಧೆ. ಇವೆರಡರ ಮಧ್ಯೆ ಸಿಕ್ಕಿಹಾಕಿಕೊಂಡು ಪರದಾಡುತ್ತಿದ್ದರು.

ಪತ್ನಿ 4 ದಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಇತ್ತ ಮನೆಯಲ್ಲಿ ಕುಟುಂಬದ ನಿರ್ವಹಣೆ ಮಾಡಲಾಗದೆ ಅವರ ಪತ್ನಿ ಮಂಜುಳಾ ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವೆಲ್ಲವುದರಿಂದ ಬೇಸತ್ತ ನಾರಾಯಣ ಇಂದು ನೇಣಿಗೆ ಶರಣಾಗಿದ್ದಾರೆ.

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ