AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope; ವಾರ ಭವಿಷ್ಯ | ಈ ವಾರ ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ?; ಒಂದು ವಾರದ ಭವಿಷ್ಯ

ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

Weekly Horoscope; ವಾರ ಭವಿಷ್ಯ | ಈ ವಾರ ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ?; ಒಂದು ವಾರದ ಭವಿಷ್ಯ
ವಾರ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Feb 28, 2021 | 8:32 AM

Share

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

ತಾ.01-03-2021 ರಿಂದ ತಾ.07-03-2021 ರವರೆಗೆ, ದ್ವಾದಶ ರಾಶಿಗಳ ಫಲ

ಮೇಷ: ಕೈಗೆ ಬಂದ ಅವಕಾಶಗಳನ್ನು ತಾನಾಗಿಯೇ ಕೈ ಚೆಲ್ಲಬೇಡಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭ ಪಡೆಯುವ ಅವಕಾಶವಿದೆ. ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭಸಂಖ್ಯೆ: 4

ವೃಷಭ: ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಸಲಹೆ ಪಡೆಯಿರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಮೇಲಿನ ಹಂತಕ್ಕೆ ಏರುವ ಅವಕಾಶ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಶುಭಸಂಖ್ಯೆ: 6

ಮಿಥುನ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಾರ್ಯಸಾಧನೆಯಾಗಬೇಕಾದರೆ ಓಡಾಟ ನಡೆಸಬೇಕಾಗುತ್ತದೆ. ಸರಕಾರಿ ದಾಖಲೆ ಪತ್ರಗಳನ್ನು ಎಚ್ಚರಿಕೆಯಿಂದ ಸಂರಕ್ಷಿಸಿ. ಭೂಮಿ, ಮನೆ ಖರೀದಿಗೆ ಸಕಾಲ. ಆದಾಯಕ್ಕೆ ಕೊರತೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ಶುಭಸಂಖ್ಯೆ:3

ಕರ್ಕಟಕ: ನಿರುದ್ಯೋಗಿಗಳು ಬಹುದಿನಗಳಿಂದ ಆಸೆಪಡುತ್ತಿದ್ದ ಉದ್ಯೋಗಾವಕಾಶ ಸಿಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಶುಭಸಂಖ್ಯೆ: 1

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ಯಾರೂ ತಡೆಯಲಾಗದು. ಹಿತಶತ್ರುಗಳ ವಂಚನೆ ಬೆಳಕಿಗೆ ಬರಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಗಳಿಸುವ ಯೋಗ. ವಿದ್ಯಾರ್ಥಿಗಳು ನಿರೀಕ್ಷಿತ ಫಲ ಪಡೆಯಲಿದ್ದಾರೆ. ಮನಸ್ಸಿಗೆ ಸಂತಸವಾಗಲಿದೆ. ಶುಭಸಂಖ್ಯೆ: 9

ಕನ್ಯಾ: ಎಷ್ಟೋ ದಿನದಿಂದ ಅಂದುಕೊಂಡಿದ್ದ ಕೆಲಸಗಳನ್ನು ಇಂದು ನೆರವೇರಿಸಲು ಮುಂದಾಗುವಿರಿ. ಅನಿರೀಕ್ಷಿತವಾಗಿ ಹಳೆಯ ಸ್ನೇಹಿತರ ಭೇಟಿಯಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಶುಭಸಂಖ್ಯೆ: 5

ತುಲಾ: ಅರ್ಧಕ್ಕೇ ನಿಂತ ಕೆಲಸಗಳಿಗೆ ಮರುಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಹಂತ ಹಂತವಾಗಿ ಸುಧಾರಣೆ ಕಂಡುಬರಲಿದೆ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಅನಗತ್ಯ ಚಿಂತೆಗಳಿಗೆ ಕಡಿವಾಣವಿರಲಿ. ಶುಭಸಂಖ್ಯೆ: 8

ವೃಶ್ಚಿಕ: ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ಸಾಹ ಭಂಗ ತರುವ ಘಟನೆಗಳು ಎದುರಾದೀತು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ದೂರ ಮಾಡಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯನಿಮಿತ್ತ ಕೆಲವು ಪ್ರಮುಖರ ಭೇಟಿ ಸಂಭವ. ಶುಭಸಂಖ್ಯೆ: 4

ಧನು: ಮಕ್ಕಳ ವಿಚಾರದಲ್ಲಿ ಅನಗತ್ಯ ಚಿಂತೆ ಮಾಡಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹೆಚ್ಚು ಪರಿಶ್ರಮ ಪಡಬೇಕಾಗಬಹುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಶುಭಸಂಖ್ಯೆ: 3

ಮಕರ: ವೃತ್ತಿರಂಗದಲ್ಲಿ ನಿಮ್ಮ ಯಶಸ್ಸಿಗೆ ತೊಡಕುಂಟುಮಾಡುವವರ ಬಗ್ಗೆ ಎಚ್ಚರವಿರಲಿ. ಆತ್ಮವಿಶ್ವಾಸವೇ ನಿಮಗೆ ಶ್ರೀರಕ್ಷೆಯಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಭೇಟೆಗೆ ಅಲೆದಾಟ ತಪ್ಪದು. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಶುಭಸಂಖ್ಯೆ: 6

ಕುಂಭ: ನಿಮ್ಮ ಕೆಲಸ ಕಾರ್ಯದ ಬಗ್ಗೆ ಮಾತ್ರ ಗಮನಹರಿಸಿದರೆ ಸಾಕು. ಬೇಡದ ವಿಚಾರಗಳಲ್ಲಿ ಮೂಗು ತೂರಿಸಲು ಹೋದರೆ ಅವಮಾನ ಎದುರಿಸಬೇಕಾದೀತು. ಯಂತ್ರೋಪಕರಣ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ. ಶುಭಸಂಖ್ಯೆ: 2

ಮೀನ: ಒಳ್ಳೆಯ ಕೆಲಸ ಆರಂಭಿಸಲು ಹಿಂದೆ ಮುಂದೆ ನೋಡುತ್ತಾ ಕೂರಬೇಡಿ. ನಿಮ್ಮ ನೇರ ನುಡಿ ಕೆಲವರಿಗೆ ಇಷ್ಟವಾಗದೇ ಹೋಗಬಹುದು. ಆದರೆ ಚಿಂತೆ ಮಾಡಬೇಡಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಶುಭಸಂಖ್ಯೆ: 7

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:26 am, Sun, 28 February 21

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್