AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಕ್ಸ್​ವೆಲ್​ರನ್ನು ಯಾಕೆ ಆಡಿಸುತ್ತಿದ್ದಾರೆ ಅಂತ ಅರ್ಥವಾಗುತ್ತಿಲ್ಲ: ಕೆವಿನ್ ಪೀಟರ್ಸನ್

ಸತತ ನಾಲ್ಕು ಸೋಲುಗಳಿಂದ ಧೃತಿಗೆಟ್ಟಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆ ಸ್ಥಾನದಿಂದ ಮೇಲೇಳಲಾಗದೆ ಒದ್ದಾಡುತ್ತಿದೆ. ಶುಕ್ರವಾರದಂದು ಹೈದರಾಬಾದ್ ತಂಡದ ವಿರುದ್ಧ ಆಡಿದ ಪಂದ್ಯದಲ್ಲಿ ನಿಕೊಲಾಸ್ ಪೂರನ್ ಅವರನ್ನು ಬಿಟ್ಟರೆ ಪಂಜಾಬ್​ನ ಎಲ್ಲ ಬ್ಯಾಟ್ಸ್​ಮನ್​ಗಳು ವಿಫಲರಾದರು. ಪಂಜಾಬಿನ ಓವರ್​ಸೀಸ್ ಆಟಗಾರರಲ್ಲಿ ಒಬ್ಬರಾಗಿರುವ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಆಡಿದ ಎಲ್ಲ ಪಂದ್ಯಗಳಲ್ಲೂ ವಿಫಲರಾಗಿರುವುದು ಟೀಮ್ ಮ್ಯಾನೇಜ್ಮೆಂಟ್ ಮತ್ತು ನಾಯಕ ಕೆ ಎಲ್ ರಾಹುಲ್​ಗೆ ದೊಡ್ಡ ತಲೆನೋವಿನ ವಿಷಯವಾಗಿರಬಹುದು. ಪ್ರೀಟಿ ಜಿಂಟಾಳ ಪಂಜಾಬ್ ಫ್ರಾಂಚೈಸಿ ಮ್ಯಾಕ್ಸ್​ವೆಲ್​ರನ್ನು […]

ಮ್ಯಾಕ್ಸ್​ವೆಲ್​ರನ್ನು ಯಾಕೆ ಆಡಿಸುತ್ತಿದ್ದಾರೆ ಅಂತ ಅರ್ಥವಾಗುತ್ತಿಲ್ಲ: ಕೆವಿನ್ ಪೀಟರ್ಸನ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 09, 2020 | 9:09 PM

Share

ಸತತ ನಾಲ್ಕು ಸೋಲುಗಳಿಂದ ಧೃತಿಗೆಟ್ಟಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆ ಸ್ಥಾನದಿಂದ ಮೇಲೇಳಲಾಗದೆ ಒದ್ದಾಡುತ್ತಿದೆ. ಶುಕ್ರವಾರದಂದು ಹೈದರಾಬಾದ್ ತಂಡದ ವಿರುದ್ಧ ಆಡಿದ ಪಂದ್ಯದಲ್ಲಿ ನಿಕೊಲಾಸ್ ಪೂರನ್ ಅವರನ್ನು ಬಿಟ್ಟರೆ ಪಂಜಾಬ್​ನ ಎಲ್ಲ ಬ್ಯಾಟ್ಸ್​ಮನ್​ಗಳು ವಿಫಲರಾದರು.

ಪಂಜಾಬಿನ ಓವರ್​ಸೀಸ್ ಆಟಗಾರರಲ್ಲಿ ಒಬ್ಬರಾಗಿರುವ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಆಡಿದ ಎಲ್ಲ ಪಂದ್ಯಗಳಲ್ಲೂ ವಿಫಲರಾಗಿರುವುದು ಟೀಮ್ ಮ್ಯಾನೇಜ್ಮೆಂಟ್ ಮತ್ತು ನಾಯಕ ಕೆ ಎಲ್ ರಾಹುಲ್​ಗೆ ದೊಡ್ಡ ತಲೆನೋವಿನ ವಿಷಯವಾಗಿರಬಹುದು. ಪ್ರೀಟಿ ಜಿಂಟಾಳ ಪಂಜಾಬ್ ಫ್ರಾಂಚೈಸಿ ಮ್ಯಾಕ್ಸ್​ವೆಲ್​ರನ್ನು ಹೆಚ್ಚು ಕಡಿಮೆ ರೂ. 11 ಕೋಟಿಗಳನ್ನು ನೀಡಿ ಖರೀದಿಸಿದೆ. ಅವರ ಮೇಲೆ ಟೀಮು ಹೆಚ್ಚಿನ ನಿರೀಕ್ಷೆಗಳನ್ನಿಟ್ಟರುವುದು ಸಹಜವೇ.

ಐಪಿಎಲ್ 13ನೇ ಆವೃತಿಯ ಕಾಮೆಂಟ್ರಿ ಪ್ಯಾನೆಲ್​ನಲ್ಲಿರುವ ಇಂಗ್ಲೆಂಡ್​ನ ಮಾಜಿ ಆಟಗಾರ ಕೆವಿನ್ ಪೀಟರ್ಸನ್, ಸರಣಿ ವೈಫಲ್ಯಗಳ ಹೊರತಾಗಿಯೂ ಅಸ್ಟ್ರೇಲಿಯಾದ ಆಟಗಾರನ್ನು ಆಡುವ ಇಲೆವೆನ್ ಉಳಿಸಿಕೊಳ್ಳುತ್ತಿರುವ ಬಗ್ಗೆ ಸೋಜಿಗರಾಗಿದ್ದಾರೆ.

‘‘ಪಂಜಾಬ್ ತಂಡದವರು, ಗ್ಲೆನ್ ವಿಷಯದಲ್ಲಿ ಆದಷ್ಟು ಬೇಗ ಒಂದು ತೀರ್ಮಾನಕ್ಕೆ ಬರಬೇಕಿದೆ. ಓವರ್​ಸೀಸ್ ಆಟಗಾರನನ್ನು ಹಾಗೆ ಉಳಿಸಿಕೊಳ್ಳವುದು ಎಷ್ಟು ಮಾತ್ರಕ್ಕೂ ಸರಿಯಲ್ಲ. ಈ ಬಾರಿಯ ಐಪಿಎಲ್ ಸೀಸನ್​ನಲ್ಲಿ ಮ್ಯಾಕ್ಸ್​ವೆಲ್ ರನ್ ಗಳಿಸಲು ಪದೇಪದೆ ವಿಫಲರಾಗಿದ್ದಾರೆ. ನಾಯಕ ರಾಹುಲ್​ಗೆ ತನ್ನ ಟೀಮಿನ ವಿದೇಶಿ ಆಟಗಾರರಿಂದ ಬೆಂಬಲವೇ ಸಿಗುತ್ತಿಲ್ಲ. ಶುಕ್ರವಾರದ ಪಂದ್ಯದಲ್ಲಿ ನಿಕೊಲಾಸ್ ಪೂರನ್ ರನ್ ಗಳಿಸಿದ್ದು ನಿಜ, ಆದರೆ ಮ್ಯಾಕ್ಸ್​ವೆಲ್​ನಿಂದ ಯಾವ ಕಾಂಟ್ರಿಬ್ಯೂಷನ್ ಸಿಗುತ್ತಿದೆ? ಒಂದೋ ಅವರನ್ನು ಆಡುವ ಇಲೆವೆನ್​ನಿಂದ ಡ್ರಾಪ್ ಮಾಡಬೇಕು ಅಥವಾ ಮತ್ತೊಂದು ಅವಕಾಶ ನೀಡಿ ಇದೇ ನಿನ್ನ ಕೊನೆಯ ಚಾನ್ಸ್ ಎಂದು ಹೇಳಬೇಕು,’’ ಎಂದು ಪೀಟರ್ಸನ್ ಹೇಳಿದ್ದಾರೆ.

ಅಸಲಿಗೆ, ಶುಕ್ರವಾರದ ಪಂದ್ಯಕ್ಕೆ ಮ್ಯಾಕ್ಸ್​ವೆಲ್​ರನ್ನು ಡ್ರಾಪ್ ಮಾಡುವ ಇರಾದೆ ಟೀಮ್ ಮ್ಯಾನೆಜ್ಮೆಂಟ್​ಗಿತ್ತಂತೆ. ಅವರ ಸ್ಥಾನದಲ್ಲಿ ಕ್ರಿಸ್ ಗೇಲ್ ಅವರನ್ನು ಆಡಿಸುವ ನಿರ್ಧಾರವೂ ಮಾಡಿಯಾಗಿತ್ತು. ಆದರೆ, ಗೇಲ್​ಗೆ ಫುಡ್ ಪಾಯಿಸನಿಂಗ್ ಅಗಿದ್ದರಿಂದ ಮ್ಯಾಕ್ಸ್​ವೆಲ್​ರನ್ನು ಮುಂದುವರಿಸಲಾಯಿತೆಂದು ಪಂಜಾಬ್ ಟೀಮಿನ ಮೆಂಟರ್ ಅನಿಲ್ ಕುಂಬ್ಳೆ ಹೇಳಿದರು.

‘‘ಮ್ಯಾಕ್ಸ್​ವೆಲ್ ಸ್ಥಾನದಲ್ಲಿ ಗೇಲ್ ಅವರನ್ನು ಆಡಿಸುವುದು ಉತ್ತಮ ನಿರ್ಧಾರವೇ. ಆದರೆ ಅವರನ್ನು ಯಾವ ಕ್ರಮಾಂಕದಲ್ಲಿ ಆಡಿಸುತ್ತಾರೆ? ರಾಹುಲ್ ಮತ್ತು ಮಾಯಾಂಕ್ ಅವರ ಓಪನಿಂಗ್ ಜೋಡಿಯನ್ನು ಬೇರ್ಪಡಿಸುವುದು ಸರಿಯಲ್ಲ. ಗೇಲ್ ಈಗ ವಿಕೆಟ್ ಮಧ್ಯೆ ಚುರುಕಾಗಿ ಓಡಲು ಸಾಧ್ಯವಾಗದ ಕಾರಣ ಕೆಳಗಡೆ ಅಂದರೆ 3 ಅಥವಾ 4ನೇ ಕ್ರಮಾಂಕದಲ್ಲಿ ಆಡಿಸಿ ಪ್ರಯೋಜನವಿಲ್ಲ. ಓಪನರ್ ಆಗಿ ಆಡಿಸಿದರೆ, ಮಾಯಾಂಕ್ ಮೂರನೇ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ,’’ ಎಂದು ಪೀಟರ್ಸನ್ ಹೇಳಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ