AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು
ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 06, 2021 | 5:53 PM

Share

ಬೆಂಗಳೂರು: ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಲಾಷ ತ್ರಿವೇಣಿ (30) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್ ಇಬ್ಬರದ್ದೂ ಇದು ಎರಡನೇ ಮದುವೆ. ಇಬ್ಬರಿಗೂ ಈ ಹಿಂದೆ ಪ್ರತ್ಯೇಕ ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದರು. ಎರಡು ವರ್ಷದ ಹಿಂದೆ ಪರಸ್ಪರ ಪರಿಚಯವಾಗಿ ಪ್ರೀತಿಸಿ ವಿವಾಹವಾಗಿದ್ರು. ಆದರೆ ಇವರ ಜೀವನದಲ್ಲಿ ಅನುಮಾನ ಎಂಬ ಭೂತದ ಛಾಯೆ ಹೆಚ್ಚಿತ್ತು.

ಪತಿ ಶಶಿಕುಮಾರ್ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಬಹುತೇಕ ಬಾರಿ ನೈಟ್ ಶಿಫ್ಟ್ ನೆಪ ಹೇಳಿ ಗೆಳತಿ ಮನೆಗೆ ಹೋಗುತ್ತಿದ್ದ. ಹಾಗೂ ಒಮ್ಮೆ ರಾತ್ರಿ 10 ಗಂಟೆಯ ಸಮಯದಲ್ಲಿ ಶಶಿಕುಮಾರ್, ಮಹಿಳೆಯ ಜೊತೆ ವಿಡಿಯೋ ಕಾಲ್​ನಲ್ಲಿದ್ದದನ್ನು ತ್ರಿವೇಣಿ ನೋಡಿ ಅಂದು ಮನೆಯಲ್ಲಿ ದೊಡ್ಡ ರಂಪವೇ ಆಗಿತ್ತು.

ಇದೇ ರೀತಿ ಹೊಸ ವರ್ಷದ ದಿನವೂ ರಾತ್ರಿ ಶಶಿಕುಮಾರ್​ಗೆ ಕರೆ ಬಂದಿರುತ್ತೆ. ಆಗ ಆತ ನನಗೆ ಕೆಲಸ ಇದೆ ಎಂದು ಮನೆಯಿಂದ ಎದ್ದು ಹೋಗಿದ್ದ. ಅನುಮಾನಗೊಂಡ ತ್ರಿವೇಣಿ ತನ್ನ ಪತಿಯನ್ನೇ ಹಿಂಬಾಲಿಸುತ್ತಾಳೆ. ಬಳಿಕ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿಯಲ್ಲಿ ಭಾಗಿಯಾಗಿರುವುದನ್ನು ನೋಡಿದ್ದಾಳೆ.

ಪತಿ ಶಶಿಕುಮಾರ್ ಅನೈತಿಕ ಸಂಬಂಧದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತ್ರಿವೇಣಿ ಕುಟುಂಬಸ್ಥರ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಶ್ರೀರಾಂಪುರ ಪೊಲೀಸರು ಪತಿ ಶಶಿಕುಮಾರ್​ನನ್ನು ಬಂಧಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ