AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು
ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್
ಆಯೇಷಾ ಬಾನು
| Edited By: |

Updated on: Jan 06, 2021 | 5:53 PM

Share

ಬೆಂಗಳೂರು: ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಲಾಷ ತ್ರಿವೇಣಿ (30) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್ ಇಬ್ಬರದ್ದೂ ಇದು ಎರಡನೇ ಮದುವೆ. ಇಬ್ಬರಿಗೂ ಈ ಹಿಂದೆ ಪ್ರತ್ಯೇಕ ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದರು. ಎರಡು ವರ್ಷದ ಹಿಂದೆ ಪರಸ್ಪರ ಪರಿಚಯವಾಗಿ ಪ್ರೀತಿಸಿ ವಿವಾಹವಾಗಿದ್ರು. ಆದರೆ ಇವರ ಜೀವನದಲ್ಲಿ ಅನುಮಾನ ಎಂಬ ಭೂತದ ಛಾಯೆ ಹೆಚ್ಚಿತ್ತು.

ಪತಿ ಶಶಿಕುಮಾರ್ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಬಹುತೇಕ ಬಾರಿ ನೈಟ್ ಶಿಫ್ಟ್ ನೆಪ ಹೇಳಿ ಗೆಳತಿ ಮನೆಗೆ ಹೋಗುತ್ತಿದ್ದ. ಹಾಗೂ ಒಮ್ಮೆ ರಾತ್ರಿ 10 ಗಂಟೆಯ ಸಮಯದಲ್ಲಿ ಶಶಿಕುಮಾರ್, ಮಹಿಳೆಯ ಜೊತೆ ವಿಡಿಯೋ ಕಾಲ್​ನಲ್ಲಿದ್ದದನ್ನು ತ್ರಿವೇಣಿ ನೋಡಿ ಅಂದು ಮನೆಯಲ್ಲಿ ದೊಡ್ಡ ರಂಪವೇ ಆಗಿತ್ತು.

ಇದೇ ರೀತಿ ಹೊಸ ವರ್ಷದ ದಿನವೂ ರಾತ್ರಿ ಶಶಿಕುಮಾರ್​ಗೆ ಕರೆ ಬಂದಿರುತ್ತೆ. ಆಗ ಆತ ನನಗೆ ಕೆಲಸ ಇದೆ ಎಂದು ಮನೆಯಿಂದ ಎದ್ದು ಹೋಗಿದ್ದ. ಅನುಮಾನಗೊಂಡ ತ್ರಿವೇಣಿ ತನ್ನ ಪತಿಯನ್ನೇ ಹಿಂಬಾಲಿಸುತ್ತಾಳೆ. ಬಳಿಕ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿಯಲ್ಲಿ ಭಾಗಿಯಾಗಿರುವುದನ್ನು ನೋಡಿದ್ದಾಳೆ.

ಪತಿ ಶಶಿಕುಮಾರ್ ಅನೈತಿಕ ಸಂಬಂಧದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತ್ರಿವೇಣಿ ಕುಟುಂಬಸ್ಥರ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಶ್ರೀರಾಂಪುರ ಪೊಲೀಸರು ಪತಿ ಶಶಿಕುಮಾರ್​ನನ್ನು ಬಂಧಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ