AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು
ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್
ಆಯೇಷಾ ಬಾನು
| Edited By: |

Updated on: Jan 06, 2021 | 5:53 PM

Share

ಬೆಂಗಳೂರು: ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಲಾಷ ತ್ರಿವೇಣಿ (30) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್ ಇಬ್ಬರದ್ದೂ ಇದು ಎರಡನೇ ಮದುವೆ. ಇಬ್ಬರಿಗೂ ಈ ಹಿಂದೆ ಪ್ರತ್ಯೇಕ ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದರು. ಎರಡು ವರ್ಷದ ಹಿಂದೆ ಪರಸ್ಪರ ಪರಿಚಯವಾಗಿ ಪ್ರೀತಿಸಿ ವಿವಾಹವಾಗಿದ್ರು. ಆದರೆ ಇವರ ಜೀವನದಲ್ಲಿ ಅನುಮಾನ ಎಂಬ ಭೂತದ ಛಾಯೆ ಹೆಚ್ಚಿತ್ತು.

ಪತಿ ಶಶಿಕುಮಾರ್ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಬಹುತೇಕ ಬಾರಿ ನೈಟ್ ಶಿಫ್ಟ್ ನೆಪ ಹೇಳಿ ಗೆಳತಿ ಮನೆಗೆ ಹೋಗುತ್ತಿದ್ದ. ಹಾಗೂ ಒಮ್ಮೆ ರಾತ್ರಿ 10 ಗಂಟೆಯ ಸಮಯದಲ್ಲಿ ಶಶಿಕುಮಾರ್, ಮಹಿಳೆಯ ಜೊತೆ ವಿಡಿಯೋ ಕಾಲ್​ನಲ್ಲಿದ್ದದನ್ನು ತ್ರಿವೇಣಿ ನೋಡಿ ಅಂದು ಮನೆಯಲ್ಲಿ ದೊಡ್ಡ ರಂಪವೇ ಆಗಿತ್ತು.

ಇದೇ ರೀತಿ ಹೊಸ ವರ್ಷದ ದಿನವೂ ರಾತ್ರಿ ಶಶಿಕುಮಾರ್​ಗೆ ಕರೆ ಬಂದಿರುತ್ತೆ. ಆಗ ಆತ ನನಗೆ ಕೆಲಸ ಇದೆ ಎಂದು ಮನೆಯಿಂದ ಎದ್ದು ಹೋಗಿದ್ದ. ಅನುಮಾನಗೊಂಡ ತ್ರಿವೇಣಿ ತನ್ನ ಪತಿಯನ್ನೇ ಹಿಂಬಾಲಿಸುತ್ತಾಳೆ. ಬಳಿಕ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿಯಲ್ಲಿ ಭಾಗಿಯಾಗಿರುವುದನ್ನು ನೋಡಿದ್ದಾಳೆ.

ಪತಿ ಶಶಿಕುಮಾರ್ ಅನೈತಿಕ ಸಂಬಂಧದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತ್ರಿವೇಣಿ ಕುಟುಂಬಸ್ಥರ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಶ್ರೀರಾಂಪುರ ಪೊಲೀಸರು ಪತಿ ಶಶಿಕುಮಾರ್​ನನ್ನು ಬಂಧಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್