DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು […]

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ
ಸಾಧು ಶ್ರೀನಾಥ್​

Updated on: Jul 17, 2020 | 7:27 PM

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು ಗಮನಿಸಿ ಬಾಗಿಲು ತೆರೆದು ನೋಡಿದಾಗ ಆತ ಸತ್ತಿರುವುದು ದೃಢ‌ ಪಟ್ಟಿದೆ.

ತಕ್ಷಣ ಸ್ಥಳೀಯರು ಆತನ ಹೆಂಡತಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಹೆಂಡತಿಗೆ ಯಾರೂ ಸಹಾಯ ಮಾಡದ ಕಾರಣ ಆಕೆ ಮತ್ತು ಆಕೆಯ ಮಗ ಇಬ್ಬರೂ ಸೇರಿ ಕೂಲಿಯವನಿಗೆ 500 ರೂ. ಹಣ ಕೊಟ್ಟು ತಳ್ಳುವ ಗಾಡಿಯಲ್ಲಿ ಶವ ತೆಗೆದುಕೊಂಡು ಹೋಗಿ ಅಥಣಿ ಪಟ್ಟಣದ ಹೊರ ವಲಯದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us