ವಾಯುವಿಹಾರಕ್ಕೆ ತೆರಳಿದ್ದ ದಂಪತಿಯನ್ನ ತಿವಿದು, ಪರಾರಿಯಾದ ಕಾಡಾನೆ!

ದಾವಣಗೆರೆ: ವಾಯುವಿಹಾರಕ್ಕೆ ತೆರಳಿದ್ದ ದಂಪತಿಗೆ ಕಾಡಾನೆ ತಿವಿದಿರುವ ಘಟನೆ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಶೈಲೇಂದ್ರ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ ಇದೇ ಕಾಡಾನೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ ಪ್ರತ್ಯಕ್ಷವಾಗಿತ್ತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ತಿಪ್ಪೇಸ್ವಾಮಿ ಗೆ ತಿವಿದಿತ್ತು. ಒಂದೇ ರಾತ್ರಿ 30 ಕಿಲೋಮೀಟರ್ ಪ್ರಯಾಣಿಸಿ ಕೋಗಲೂರಿನಲ್ಲಿ ದಂಪತಿಗೆ ತಿವಿದಿದೆ. ಕೋಗಲೂರು ಸಮೀಪ ಇರುವ ಜಮೀನಿನಲ್ಲಿ ಆನೆ ಓಡಾಡುತ್ತಿತ್ತು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು […]

ವಾಯುವಿಹಾರಕ್ಕೆ ತೆರಳಿದ್ದ ದಂಪತಿಯನ್ನ ತಿವಿದು, ಪರಾರಿಯಾದ ಕಾಡಾನೆ!
ಸಾಧು ಶ್ರೀನಾಥ್​

Updated on: Feb 13, 2020 | 1:05 PM

ದಾವಣಗೆರೆ: ವಾಯುವಿಹಾರಕ್ಕೆ ತೆರಳಿದ್ದ ದಂಪತಿಗೆ ಕಾಡಾನೆ ತಿವಿದಿರುವ ಘಟನೆ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಶೈಲೇಂದ್ರ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ ಇದೇ ಕಾಡಾನೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ ಪ್ರತ್ಯಕ್ಷವಾಗಿತ್ತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ತಿಪ್ಪೇಸ್ವಾಮಿ ಗೆ ತಿವಿದಿತ್ತು.

ಒಂದೇ ರಾತ್ರಿ 30 ಕಿಲೋಮೀಟರ್ ಪ್ರಯಾಣಿಸಿ ಕೋಗಲೂರಿನಲ್ಲಿ ದಂಪತಿಗೆ ತಿವಿದಿದೆ. ಕೋಗಲೂರು ಸಮೀಪ ಇರುವ ಜಮೀನಿನಲ್ಲಿ ಆನೆ ಓಡಾಡುತ್ತಿತ್ತು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಆನೆ ಬೆದರಿಸಿ ಕಾಡಾನೆಯನ್ನು ಊರಿಂದ ಹೊರ ಅಟ್ಟಿದ್ದಾರೆ.

ಈ ಕಾಡಾನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ವನ್ಯಜೀವಿಧಾಮದಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈಗ ದಾವಣಗೆರೆ ತಾಲೂಕಿನ ಮಾಯಕೊಂಡ ಮಾರ್ಗವಾಗಿ ಚಿತ್ರದುರ್ಗ ಜಿಲ್ಲೆಗೆ ಹೋಗಿರುವ ಅನುಮಾನ ವ್ಯಕ್ತವಾಗಿದ್ದು, ಚನ್ನಗಿರಿ ವಲಯ ಅರಣ್ಯಾಧಿಕಾರಿಗಳ ನೇತ್ರತ್ವದಲ್ಲಿ ಕಾಡಾನೆಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

Published On - 11:40 am, Thu, 13 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us