ಆನೆ ದಾಳಿ: ಅರಣ್ಯ ಇಲಾಖೆಯ ಗೂಡ್ಸ್ ಟೆಂಪೋ ಜಖಂ, ಡ್ರೇವರ್​ ಬಚಾವ್!

ಮೈಸೂರು: ಅರಣ್ಯ ಇಲಾಖೆಗೆ ಸೇರಿದ ಗೂಡ್ಸ್ ಟೆಂಪೋ ಮೇಲೆ ಆನೆ ದಾಳಿ ಮಾಡಿರುವ ಘಟನೆ ಹಣಸೂರು ತಾಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ರೇಂಜ್​ನ ರಸ್ತೆಯಲ್ಲಿ ಆನೆ ದಾಳಿ ಮಾಡಿ ವಾಹನವನ್ನು ಜಖಂಗೊಳಿಸಿದೆ. ಆನೆ ಬರುತ್ತಿದ್ದಂತೆ ಚಾಲಕ ವಾಹನವನ್ನು ಹಿಂಬದಿಯಾಗಿ ಚಲಾಯಿಸಿದ್ದಾನೆ. ಆದ್ರೂ ಸಹ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಆನೆಯ ಹಿಂಭಾಗದಲ್ಲಿ ಹೊಗೆ ಸಹ ಕಾಣಿಸಿಕೊಂಡಿದೆ. ಈ ಕಾರಣದಿಂದ ಆನೆ ದಾಳಿ ಮಾಡಿರಬಹುದು ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆನೆ ದಾಳಿಯ ವಿಡಿಯೋ […]

ಆನೆ ದಾಳಿ: ಅರಣ್ಯ ಇಲಾಖೆಯ ಗೂಡ್ಸ್ ಟೆಂಪೋ ಜಖಂ, ಡ್ರೇವರ್​ ಬಚಾವ್!
ಸಾಧು ಶ್ರೀನಾಥ್​

Updated on: Jan 17, 2020 | 11:00 AM

ಮೈಸೂರು: ಅರಣ್ಯ ಇಲಾಖೆಗೆ ಸೇರಿದ ಗೂಡ್ಸ್ ಟೆಂಪೋ ಮೇಲೆ ಆನೆ ದಾಳಿ ಮಾಡಿರುವ ಘಟನೆ ಹಣಸೂರು ತಾಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ರೇಂಜ್​ನ ರಸ್ತೆಯಲ್ಲಿ ಆನೆ ದಾಳಿ ಮಾಡಿ ವಾಹನವನ್ನು ಜಖಂಗೊಳಿಸಿದೆ.

ಆನೆ ಬರುತ್ತಿದ್ದಂತೆ ಚಾಲಕ ವಾಹನವನ್ನು ಹಿಂಬದಿಯಾಗಿ ಚಲಾಯಿಸಿದ್ದಾನೆ. ಆದ್ರೂ ಸಹ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಆನೆಯ ಹಿಂಭಾಗದಲ್ಲಿ ಹೊಗೆ ಸಹ ಕಾಣಿಸಿಕೊಂಡಿದೆ. ಈ ಕಾರಣದಿಂದ ಆನೆ ದಾಳಿ ಮಾಡಿರಬಹುದು ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆನೆ ದಾಳಿಯ ವಿಡಿಯೋ ವೈರಲ್ ಆಗಿದೆ.



Published On - 9:44 am, Fri, 17 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us