AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿವಿಧೆಡೆ ಮುಂದುವರಿದ ಕಾಡಾನೆ ಉಪಟಳ: ರೈತರ ಬೆಳೆ ಹಾನಿ

ಮಡಿಕೇರಿ: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಕಾಡಾನೆಗಳು ತಮ್ಮ ಹಾವಳಿಯನ್ನು ಮುಂದುವರಿಸಿವೆ. ರೈತರ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸಿವೆ. ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ತೋಟದಲ್ಲಿನ ಬೆಳೆಗಳನ್ನು ನಾಶಪಡಿಸಿದೆ. ಕಳೆದ ಮೂರು ತಿಂಗಳಿನಿಂದ ಗ್ರಾಮದ ತೋಟಗಳಲ್ಲೇ ಕಾಡಾನೆ ಬೀಡು ಬಿಟ್ಟಿದ್ದು, ಕಾಡಾನೆ ಹಾವಳಿಗೆ ಕಟ್ಟೆಪುರ ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ. ಹಗಲು ರಾತ್ರಿ ಎನ್ನದೆ ಜನವಸತಿ ಪ್ರದೇಶದಲ್ಲಿ ಆನೆ ವಾಕ್ ಮಾಡುತ್ತಿದ್ದು, ಕಾಡಾನೆ ವಾಕಿಂಗ್‌ಗೆ ಗ್ರಾಮದ ಜನತೆ ಹೈರಾಣಾಗಿದ್ದಾರೆ. ಮೂರು ತಿಂಗಳಾದರೂ ಇತ್ತ ಬರದ […]

ರಾಜ್ಯದ ವಿವಿಧೆಡೆ ಮುಂದುವರಿದ ಕಾಡಾನೆ ಉಪಟಳ: ರೈತರ ಬೆಳೆ ಹಾನಿ
ಸಾಧು ಶ್ರೀನಾಥ್​
|

Updated on: Mar 02, 2020 | 12:46 PM

Share

ಮಡಿಕೇರಿ: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಕಾಡಾನೆಗಳು ತಮ್ಮ ಹಾವಳಿಯನ್ನು ಮುಂದುವರಿಸಿವೆ. ರೈತರ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸಿವೆ. ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ತೋಟದಲ್ಲಿನ ಬೆಳೆಗಳನ್ನು ನಾಶಪಡಿಸಿದೆ. ಕಳೆದ ಮೂರು ತಿಂಗಳಿನಿಂದ ಗ್ರಾಮದ ತೋಟಗಳಲ್ಲೇ ಕಾಡಾನೆ ಬೀಡು ಬಿಟ್ಟಿದ್ದು, ಕಾಡಾನೆ ಹಾವಳಿಗೆ ಕಟ್ಟೆಪುರ ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ.

ಹಗಲು ರಾತ್ರಿ ಎನ್ನದೆ ಜನವಸತಿ ಪ್ರದೇಶದಲ್ಲಿ ಆನೆ ವಾಕ್ ಮಾಡುತ್ತಿದ್ದು, ಕಾಡಾನೆ ವಾಕಿಂಗ್‌ಗೆ ಗ್ರಾಮದ ಜನತೆ ಹೈರಾಣಾಗಿದ್ದಾರೆ. ಮೂರು ತಿಂಗಳಾದರೂ ಇತ್ತ ಬರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಡಿಯಲ್ಲೂ ಮುಂದುವರಿದ ಕಾಡಾನೆಗಳ ಹಾವಳಿ: ಕೋಲಾರ: ಜಿಲ್ಲೆಯ ಗಡಿಯಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಮಾಲೂರು ತಾಲೂಕಿನ ಎಳೇಸಂದ್ರ ಗ್ರಾಮದ ಬಳಿ ರೈತರ ಬೆಳೆ ನಾಶಪಡಿಸಿವೆ. ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳು ದಾಳಿ ನಡೆಸಿ 2 ಎಕರೆಯಲ್ಲಿ ಬೆಳೆದಿದ್ದ ವಿವಿಧ ಬೆಳೆಗಳನ್ನು ನಾಶಪಡಿಸಿವೆ. ಕಾಡಾನೆಗಳ ದಾಳಿಯಿಂದ ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರು, ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲೆನಾಡು ಭಾಗದಲ್ಲೂ ಒಂಟಿ ಸಲಗ ಉಪಟಳ: ಹಾಸನ: ಮಲೆನಾಡು ಭಾಗದಲ್ಲೂ ಕಾಡಾನೆ ಉಪಟಳ ಹೆಚ್ಚಾಗಿದ್ದು, ಸಕಲೇಶಪುರ ತಾಲೂಕಿನ ಹೆಗ್ಗೋವೆ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ಹಾಕಿದ್ದ ಶೀಟ್​ಗಳನ್ನೇ ಒಂಟಿ ಸಲಗ ಧ್ವಂಸಗೊಳಿಸಿದೆ. ಪ್ರತಿನಿತ್ಯ ಮನೆಯ ಆವರಣಕ್ಕೆ ಬಂದು ಕಾಡಾನೆಗಳು ಆತಂಕ ಸೃಷ್ಟಿಸುತ್ತಿವೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಆನೆ ದಾಳಿಯ ಸಮಸ್ಯೆ ಪರಿಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್