AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿವಿಧೆಡೆ ಮುಂದುವರಿದ ಕಾಡಾನೆ ಉಪಟಳ: ರೈತರ ಬೆಳೆ ಹಾನಿ

ಮಡಿಕೇರಿ: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಕಾಡಾನೆಗಳು ತಮ್ಮ ಹಾವಳಿಯನ್ನು ಮುಂದುವರಿಸಿವೆ. ರೈತರ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸಿವೆ. ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ತೋಟದಲ್ಲಿನ ಬೆಳೆಗಳನ್ನು ನಾಶಪಡಿಸಿದೆ. ಕಳೆದ ಮೂರು ತಿಂಗಳಿನಿಂದ ಗ್ರಾಮದ ತೋಟಗಳಲ್ಲೇ ಕಾಡಾನೆ ಬೀಡು ಬಿಟ್ಟಿದ್ದು, ಕಾಡಾನೆ ಹಾವಳಿಗೆ ಕಟ್ಟೆಪುರ ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ. ಹಗಲು ರಾತ್ರಿ ಎನ್ನದೆ ಜನವಸತಿ ಪ್ರದೇಶದಲ್ಲಿ ಆನೆ ವಾಕ್ ಮಾಡುತ್ತಿದ್ದು, ಕಾಡಾನೆ ವಾಕಿಂಗ್‌ಗೆ ಗ್ರಾಮದ ಜನತೆ ಹೈರಾಣಾಗಿದ್ದಾರೆ. ಮೂರು ತಿಂಗಳಾದರೂ ಇತ್ತ ಬರದ […]

ರಾಜ್ಯದ ವಿವಿಧೆಡೆ ಮುಂದುವರಿದ ಕಾಡಾನೆ ಉಪಟಳ: ರೈತರ ಬೆಳೆ ಹಾನಿ
ಸಾಧು ಶ್ರೀನಾಥ್​
|

Updated on: Mar 02, 2020 | 12:46 PM

Share

ಮಡಿಕೇರಿ: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಕಾಡಾನೆಗಳು ತಮ್ಮ ಹಾವಳಿಯನ್ನು ಮುಂದುವರಿಸಿವೆ. ರೈತರ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸಿವೆ. ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ತೋಟದಲ್ಲಿನ ಬೆಳೆಗಳನ್ನು ನಾಶಪಡಿಸಿದೆ. ಕಳೆದ ಮೂರು ತಿಂಗಳಿನಿಂದ ಗ್ರಾಮದ ತೋಟಗಳಲ್ಲೇ ಕಾಡಾನೆ ಬೀಡು ಬಿಟ್ಟಿದ್ದು, ಕಾಡಾನೆ ಹಾವಳಿಗೆ ಕಟ್ಟೆಪುರ ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ.

ಹಗಲು ರಾತ್ರಿ ಎನ್ನದೆ ಜನವಸತಿ ಪ್ರದೇಶದಲ್ಲಿ ಆನೆ ವಾಕ್ ಮಾಡುತ್ತಿದ್ದು, ಕಾಡಾನೆ ವಾಕಿಂಗ್‌ಗೆ ಗ್ರಾಮದ ಜನತೆ ಹೈರಾಣಾಗಿದ್ದಾರೆ. ಮೂರು ತಿಂಗಳಾದರೂ ಇತ್ತ ಬರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಡಿಯಲ್ಲೂ ಮುಂದುವರಿದ ಕಾಡಾನೆಗಳ ಹಾವಳಿ: ಕೋಲಾರ: ಜಿಲ್ಲೆಯ ಗಡಿಯಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಮಾಲೂರು ತಾಲೂಕಿನ ಎಳೇಸಂದ್ರ ಗ್ರಾಮದ ಬಳಿ ರೈತರ ಬೆಳೆ ನಾಶಪಡಿಸಿವೆ. ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳು ದಾಳಿ ನಡೆಸಿ 2 ಎಕರೆಯಲ್ಲಿ ಬೆಳೆದಿದ್ದ ವಿವಿಧ ಬೆಳೆಗಳನ್ನು ನಾಶಪಡಿಸಿವೆ. ಕಾಡಾನೆಗಳ ದಾಳಿಯಿಂದ ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರು, ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲೆನಾಡು ಭಾಗದಲ್ಲೂ ಒಂಟಿ ಸಲಗ ಉಪಟಳ: ಹಾಸನ: ಮಲೆನಾಡು ಭಾಗದಲ್ಲೂ ಕಾಡಾನೆ ಉಪಟಳ ಹೆಚ್ಚಾಗಿದ್ದು, ಸಕಲೇಶಪುರ ತಾಲೂಕಿನ ಹೆಗ್ಗೋವೆ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ಹಾಕಿದ್ದ ಶೀಟ್​ಗಳನ್ನೇ ಒಂಟಿ ಸಲಗ ಧ್ವಂಸಗೊಳಿಸಿದೆ. ಪ್ರತಿನಿತ್ಯ ಮನೆಯ ಆವರಣಕ್ಕೆ ಬಂದು ಕಾಡಾನೆಗಳು ಆತಂಕ ಸೃಷ್ಟಿಸುತ್ತಿವೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಆನೆ ದಾಳಿಯ ಸಮಸ್ಯೆ ಪರಿಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು