AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR ಪೇಟೆಯನ್ನ ಶಿಕಾರಿಪುರದಂತೆ ಅಭಿವೃದ್ಧಿ ಮಾಡುವೆ -ಯಡಿಯೂರಪ್ಪ ಆಶ್ವಾಸನೆ

ಮಂಡ್ಯ:ಡಿಸೆಂಬರ್ 5ರಂದು ನಡೆಯುವ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಿದರೆ, ಮಾದರಿ ಕ್ಷೇತ್ರವಾಗಿ ಮಾಡುವೆ ಎಂದು ಕಿಕ್ಕೇರಿ ಗ್ರಾಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ನಾಲ್ಕು ಬಾರಿ ಸಿಎಂ ಆದರೂ ನನಗೊಂದು ಕೊರಗು ಇದೆ. ನನ್ನ ಜನ್ಮ ಸ್ಥಾನ ಕೆ ಆರ್​ ಪೇಟೆ. ಮಂಡ್ಯ ಜಿಲ್ಲೆಯಿಂದ ಒಂದೇ ಒಂದು ಸ್ಥಾನ ಬಿಜೆಪಿ ಗೆದ್ದಿಲ್ಲ. ಈಗ ಕಾಲ ಕೂಡಿಬಂದಿದೆ. ನಾರಾಯಣಗೌಡರಂಥಾ ಪ್ರಾಮಾಣಿಕ ಹೋರಾಟಗಾರ ಸಿಗುವುದು ಅಪರೂಪ. ಹಾಗಾಗಿ ಈ ಅವಕಾಶ ಬಳಸಿಕೊಂಡು ಅವ್ರನ್ನ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿರಿ […]

KR ಪೇಟೆಯನ್ನ ಶಿಕಾರಿಪುರದಂತೆ ಅಭಿವೃದ್ಧಿ ಮಾಡುವೆ -ಯಡಿಯೂರಪ್ಪ ಆಶ್ವಾಸನೆ
ಸಾಧು ಶ್ರೀನಾಥ್​
|

Updated on:Nov 25, 2019 | 4:36 PM

Share

ಮಂಡ್ಯ:ಡಿಸೆಂಬರ್ 5ರಂದು ನಡೆಯುವ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಿದರೆ, ಮಾದರಿ ಕ್ಷೇತ್ರವಾಗಿ ಮಾಡುವೆ ಎಂದು ಕಿಕ್ಕೇರಿ ಗ್ರಾಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ನಾಲ್ಕು ಬಾರಿ ಸಿಎಂ ಆದರೂ ನನಗೊಂದು ಕೊರಗು ಇದೆ. ನನ್ನ ಜನ್ಮ ಸ್ಥಾನ ಕೆ ಆರ್​ ಪೇಟೆ. ಮಂಡ್ಯ ಜಿಲ್ಲೆಯಿಂದ ಒಂದೇ ಒಂದು ಸ್ಥಾನ ಬಿಜೆಪಿ ಗೆದ್ದಿಲ್ಲ. ಈಗ ಕಾಲ ಕೂಡಿಬಂದಿದೆ. ನಾರಾಯಣಗೌಡರಂಥಾ ಪ್ರಾಮಾಣಿಕ ಹೋರಾಟಗಾರ ಸಿಗುವುದು ಅಪರೂಪ. ಹಾಗಾಗಿ ಈ ಅವಕಾಶ ಬಳಸಿಕೊಂಡು ಅವ್ರನ್ನ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿರಿ ಎಂದು ಯಡಿಯೂರಪ್ಪ ಮತದಾರರಲ್ಲಿ ಮನವಿ ಮಾಡಿದರು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಮಾತನಾಡಿದ ಅವರು ಕೆ.ಆರ್.ಪೇಟೆಯನ್ನು ಶಿಕಾರಿಪುರದಂತೆ ಅಭಿವೃದ್ಧಿ ಮಾಡುವೆ. ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ವಾತಾವರಣ ಚೆನ್ನಾಗಿದೆ. ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಗೆಲುವು ನಿಶ್ಚಿತ. 20ರಿಂದ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ. ಇವಾಗ ಯಾವುದೇ ಬೇಡಿಕೆಗಳ ಪಟ್ಟಿ ಮಾಡಿಕೊಡುವ ಅವಶ್ಯಕತೆ ಇಲ್ಲ. ಮುಂದೆ ನೀವೇ ಸಚಿವರಾಗ್ತೀರಿ, ಎಲ್ಲವನ್ನೂ ನೀವೇ ಮಾಡಿ ಎಂದು ಅಭ್ಯರ್ಥಿ ನಾರಾಯಣ ಗೌಡಗೆ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಪೂರ್ವಕ ಸಲಹೆ ನೀಡಿದರು.

Published On - 4:35 pm, Mon, 25 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ