AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR ಪೇಟೆಯನ್ನ ಶಿಕಾರಿಪುರದಂತೆ ಅಭಿವೃದ್ಧಿ ಮಾಡುವೆ -ಯಡಿಯೂರಪ್ಪ ಆಶ್ವಾಸನೆ

ಮಂಡ್ಯ:ಡಿಸೆಂಬರ್ 5ರಂದು ನಡೆಯುವ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಿದರೆ, ಮಾದರಿ ಕ್ಷೇತ್ರವಾಗಿ ಮಾಡುವೆ ಎಂದು ಕಿಕ್ಕೇರಿ ಗ್ರಾಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ನಾಲ್ಕು ಬಾರಿ ಸಿಎಂ ಆದರೂ ನನಗೊಂದು ಕೊರಗು ಇದೆ. ನನ್ನ ಜನ್ಮ ಸ್ಥಾನ ಕೆ ಆರ್​ ಪೇಟೆ. ಮಂಡ್ಯ ಜಿಲ್ಲೆಯಿಂದ ಒಂದೇ ಒಂದು ಸ್ಥಾನ ಬಿಜೆಪಿ ಗೆದ್ದಿಲ್ಲ. ಈಗ ಕಾಲ ಕೂಡಿಬಂದಿದೆ. ನಾರಾಯಣಗೌಡರಂಥಾ ಪ್ರಾಮಾಣಿಕ ಹೋರಾಟಗಾರ ಸಿಗುವುದು ಅಪರೂಪ. ಹಾಗಾಗಿ ಈ ಅವಕಾಶ ಬಳಸಿಕೊಂಡು ಅವ್ರನ್ನ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿರಿ […]

KR ಪೇಟೆಯನ್ನ ಶಿಕಾರಿಪುರದಂತೆ ಅಭಿವೃದ್ಧಿ ಮಾಡುವೆ -ಯಡಿಯೂರಪ್ಪ ಆಶ್ವಾಸನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 25, 2019 | 4:36 PM

Share

ಮಂಡ್ಯ:ಡಿಸೆಂಬರ್ 5ರಂದು ನಡೆಯುವ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಿದರೆ, ಮಾದರಿ ಕ್ಷೇತ್ರವಾಗಿ ಮಾಡುವೆ ಎಂದು ಕಿಕ್ಕೇರಿ ಗ್ರಾಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ನಾಲ್ಕು ಬಾರಿ ಸಿಎಂ ಆದರೂ ನನಗೊಂದು ಕೊರಗು ಇದೆ. ನನ್ನ ಜನ್ಮ ಸ್ಥಾನ ಕೆ ಆರ್​ ಪೇಟೆ. ಮಂಡ್ಯ ಜಿಲ್ಲೆಯಿಂದ ಒಂದೇ ಒಂದು ಸ್ಥಾನ ಬಿಜೆಪಿ ಗೆದ್ದಿಲ್ಲ. ಈಗ ಕಾಲ ಕೂಡಿಬಂದಿದೆ. ನಾರಾಯಣಗೌಡರಂಥಾ ಪ್ರಾಮಾಣಿಕ ಹೋರಾಟಗಾರ ಸಿಗುವುದು ಅಪರೂಪ. ಹಾಗಾಗಿ ಈ ಅವಕಾಶ ಬಳಸಿಕೊಂಡು ಅವ್ರನ್ನ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿರಿ ಎಂದು ಯಡಿಯೂರಪ್ಪ ಮತದಾರರಲ್ಲಿ ಮನವಿ ಮಾಡಿದರು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಮಾತನಾಡಿದ ಅವರು ಕೆ.ಆರ್.ಪೇಟೆಯನ್ನು ಶಿಕಾರಿಪುರದಂತೆ ಅಭಿವೃದ್ಧಿ ಮಾಡುವೆ. ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ವಾತಾವರಣ ಚೆನ್ನಾಗಿದೆ. ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಗೆಲುವು ನಿಶ್ಚಿತ. 20ರಿಂದ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ. ಇವಾಗ ಯಾವುದೇ ಬೇಡಿಕೆಗಳ ಪಟ್ಟಿ ಮಾಡಿಕೊಡುವ ಅವಶ್ಯಕತೆ ಇಲ್ಲ. ಮುಂದೆ ನೀವೇ ಸಚಿವರಾಗ್ತೀರಿ, ಎಲ್ಲವನ್ನೂ ನೀವೇ ಮಾಡಿ ಎಂದು ಅಭ್ಯರ್ಥಿ ನಾರಾಯಣ ಗೌಡಗೆ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಪೂರ್ವಕ ಸಲಹೆ ನೀಡಿದರು.

Published On - 4:35 pm, Mon, 25 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ