ಸರ್ಕಾಕ್ಕೆ ಶುರುವಾಯ್ತು ಮತ್ತೊಂದು ತಲೆನೋವು: ಸಿದ್ದರಾಮಯ್ಯಗೆ ಓಟ್ ಹಾಕಿದ್ದೀವಿ, ಲೋನ್ ಕಟ್ಟಲ್ಲ ಎನ್ನುಯತ್ತಿರುವ ಜನ

ಕೋಲಾರದಲ್ಲಿ ಜನರು ಲೋನ್​ ಕಟ್ಟಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ವೋಟ್​ ಹಾಕಿದ್ದೇವೆ. ಹಾಗಾಗಿ ಲೋನ್ ಕಟ್ಟಲ್ಲ ಎಂದು ಮಹಿಳೆಯರು ಪಟ್ಟು ಹಿಡಿದಿದ್ದಾರೆ.

ಕೋಲಾರ: ಚುನಾವಣೆಗೈ ಮುನ್ನ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿ ಭರವಸೆಗಳನ್ನು ಇದೀಗ ಸಿದ್ದರಾಮಯ್ಯನವರ ಸರ್ಕಾರ ಜಾರಿ ಮಾಡಿದೆ. ಆದ್ರೆ, ಕೆಲ ಯೋಜನೆಗಳಿಗೆ ನಾನಾ ಷರತ್ತುಗಳು ವಿಧಿಸಲಾಗಿದ್ದು, ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಗೃಹಜ್ಯೋತಿ ಯೋಜನೆ ಸಂಬಂಧ ಜನರು ವಿದ್ಯುತ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಈ ಐದು ಗ್ಯಾರಂಟಿಗಳಿಂದ ಒಂದಲ್ಲ ಒಂದು ರೀತಿಯಾಗಿ ರಾಜ್ಯದಲ್ಲಿ ಕಿರಿಕ್​ಗಳು ಆಗುತ್ತಿವೆ. ಇದೀಗ ಕೋಲಾರದಲ್ಲಿ ಜನರು ಲೋನ್​ ಕಟ್ಟಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ವೋಟ್​ ಹಾಕಿದ್ದೇವೆ. ಹಾಗಾಗಿ ಲೋನ್ ಕಟ್ಟಲ್ಲ ಎಂದು ಮಹಿಳೆಯರು ಪಟ್ಟು ಹಿಡಿದಿದ್ದಾರೆ.

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us