ಮಸ್ಕಿ ಉಪಚುನಾವಣೆಯಲ್ಲಿ ಗೆಲುವು ಖಂಡಿತ, ಗೆದ್ದ ನಂತರ ಸಚಿವನಾಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪ್ ಗೌಡ

ಕಾಂಗ್ರೆಸ್​ನವರಿಗೆ ನಾನು ಬಿಜೆಪಿ ಸೇರಿದ ಮೇಲೆ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ‌ಬಸವನಗೌಡ ತುರವಿಹಾಳರನ್ನು ಹೈಜಾಕ್ ಮಾಡಿದ್ದಾರೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಹೇಳಿದ್ದಾರೆ.

ಮಸ್ಕಿ ಉಪಚುನಾವಣೆಯಲ್ಲಿ ಗೆಲುವು ಖಂಡಿತ, ಗೆದ್ದ ನಂತರ ಸಚಿವನಾಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪ್ ಗೌಡ
ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್

Updated on: Jan 19, 2021 | 3:40 PM

ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ರಚನೆ ವೇಳೆ ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮುನಿರತ್ನಗೂ ಸಚಿವ ಸ್ಥಾನ ನೀಡಬೇಕಾಗಿತ್ತು. ಮಸ್ಕಿ ಉಪಚುನಾವಣೆಯಲ್ಲಿ ನಾನು ಗೆಲುವು ಸಾಧಿಸುತ್ತೇನೆ. ನಾನು ಗೆದ್ದ ಬಳಿಕ ಬಳಿಕ ಮಂತ್ರಿಯಾಗುತ್ತೇನೆಂಬ ವಿಶ್ವಾಸವಿದೆ.

ಕಾಂಗ್ರೆಸ್​ನವರಿಗೆ ನಾನು ಬಿಜೆಪಿ ಸೇರಿದ ಮೇಲೆ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ‌ಬಸವನಗೌಡ ತುರವಿಹಾಳರನ್ನು ಹೈಜಾಕ್ ಮಾಡಿದ್ದಾರೆ. ತುರವಿಹಾಳಗೆ ನಿಗಮ ಮಂಡಳಿ ನೀಡಿದರೂ ಅವರು ಪಕ್ಷದಲ್ಲಿ ಉಳಿಯಲಿಲ್ಲ. ಅವರು ಶಾಸಕನಾಗಬಹುದು ಅನ್ನೋ ಆಸೆಯಿಂದ ಕಾಂಗ್ರೆಸ್ ಹೋಗಿದ್ದಾರೆ ಎಂದು ಪ್ರತಾಪ್ ಗೌಡ ಹೇಳಿದರು.

ಪ್ರತಾಪ್ ಗೌಡ ಪಾಟೀಲ್ ಒಬ್ಬ​ ಚೆಂಗುಲಿ ಕುದುರೆ ಎಂದು ಗೊತ್ತಿರಲಿಲ್ಲ -ಸಿದ್ದು ವ್ಯಂಗ್ಯ

 

Published On - 3:34 pm, Tue, 19 January 21

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
Follow Us