ವಿಲ್ಸನ್ ಗಾರ್ಡನ್ ಇನ್ಸ್‌ಪೆಕ್ಟರ್ ಕೊರೊನಾಗೆ ಬಲಿ; ನಿವೃತ್ತಿಗೆ ಎರಡೇ ತಿಂಗಳಿತ್ತು

ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಪೊಲೀಸ್ ಇನ್ಸ್‌ಪೆಕ್ಟರೊಬ್ಬರು ಬಲಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿ ಇರುವ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆ ಇನ್ಸ್‌ಪೆಕ್ಟರ್ ಮೀರ್ ಗೌಸ್ ಅವರು ಕಳೆದೊಂದು ವಾರದಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬಹುಅಂಗಾಗ ಸಮಸ್ಯೆಯಿಂದಲೂ ಬಳಲುತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ನಿವೃತ್ತಿಯಾಗಲು ಕೇವಲ 2 ತಿಂಗಳು ಬಾಕಿ ಇತ್ತು. ಇನ್ಸ್‌ಪೆಕ್ಟರ್ ಮೀರ್ ಗೌಸ್ ಸಾವಿಗೆ ಕಂಬನಿ ಮಿಡಿದಿರುವ ವಿಲ್ಸನ್ […]

ವಿಲ್ಸನ್ ಗಾರ್ಡನ್ ಇನ್ಸ್‌ಪೆಕ್ಟರ್ ಕೊರೊನಾಗೆ ಬಲಿ; ನಿವೃತ್ತಿಗೆ ಎರಡೇ ತಿಂಗಳಿತ್ತು
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​

Updated on: Sep 15, 2020 | 4:36 PM

ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಪೊಲೀಸ್ ಇನ್ಸ್‌ಪೆಕ್ಟರೊಬ್ಬರು ಬಲಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿ ಇರುವ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆ ಇನ್ಸ್‌ಪೆಕ್ಟರ್ ಮೀರ್ ಗೌಸ್ ಅವರು ಕಳೆದೊಂದು ವಾರದಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬಹುಅಂಗಾಗ ಸಮಸ್ಯೆಯಿಂದಲೂ ಬಳಲುತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ನಿವೃತ್ತಿಯಾಗಲು ಕೇವಲ 2 ತಿಂಗಳು ಬಾಕಿ ಇತ್ತು. ಇನ್ಸ್‌ಪೆಕ್ಟರ್ ಮೀರ್ ಗೌಸ್ ಸಾವಿಗೆ ಕಂಬನಿ ಮಿಡಿದಿರುವ ವಿಲ್ಸನ್ ಗಾರ್ಡನ್ ಠಾಣೆ ಸಿಬ್ಬಂದಿ ಅತೀವ ಶೋಕ ವ್ಯಕ್ತಪಡಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us