Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔಷಧಿ ತಯಾರಿಕಾ ಘಟಕದ ತ್ಯಾಜ್ಯ ಸೀದಾ ಕೆರೆಗೆ: ಜೀವ ಸಂಕುಲಕ್ಕೆ ಎದುರಾಯ್ತು ಪ್ರಾಣ ಸಂಕಟ

ವಿನ್ ಟ್ಯಾಕ್ ಔಷಧಿ ತಯಾರಿಕಾ ಘಟಕದಿಂದ ಹೊರ ಬರುತ್ತಿರುವ ವಿಷಯುಕ್ತ ನೀರನ್ನು ಕುಡಿದು ಹಸು, ಕರು ಹಾಗೂ ಮೇಕೆ ಪ್ರಾಣ ಕಳೆದುಕೊಂಡಿವೆ. ಅಲ್ಲದೆ ಕೆರೆಯಲ್ಲಿ ಜಲ ಚರಗಳು ಸಾವನ್ನಪ್ಪಿವೆ.

ಔಷಧಿ ತಯಾರಿಕಾ ಘಟಕದ ತ್ಯಾಜ್ಯ ಸೀದಾ ಕೆರೆಗೆ: ಜೀವ ಸಂಕುಲಕ್ಕೆ ಎದುರಾಯ್ತು ಪ್ರಾಣ ಸಂಕಟ
ವಿನ್ ಟ್ಯಾಕ್ ಔಷಧಿ ತಯಾರಿಕಾ ಘಟಕದಿಂದ ವಿಷಯುಕ್ತ ಕಲುಷಿತ ನೀರು ಬಿಡುಗಡೆ
Follow us
ಆಯೇಷಾ ಬಾನು
| Updated By: Team Veegam

Updated on:Nov 26, 2020 | 4:04 PM

ನೆಲಮಂಗಲ: ಮೆಡಿಸಿನ್ ತಯಾರಿಸುವ ಪ್ರಸಿದ್ಧ ಕಂಪನಿಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯದಿಂದ ಇಡೀ ಹಳ್ಳಿಗೆ ಕಂಟಕ ಎದುರಾಗಿದೆ. ಪಶು ಪಕ್ಷಿ ಜೀವ ಸಂಕುಲ ಹಾಗೂ ಜಲಚರಗಳ ಪ್ರಾಣಕ್ಕೂ ಸಂಕಷ್ಟ ಎದುರಾಗಿದೆ.

ಕೆರೆಯಂಚಿನಲ್ಲಿರುವ ಬೃಹತ್ ಔಷಧಿ ತಯಾರಿಕಾ ಘಟಕದಿಂದ ಕೆರೆಗೆ ಪೈಪ್‌ಗಳ ಮೂಲಕ ಕಡು ಕಪ್ಪು ಬಣ್ಣದ ವಿಷಯುಕ್ತ ನೀರು, ಸಂಪೂರ್ಣ ಕಲುಷಿತವಾಗಿರುವ ನೀರು ದುಮ್ಮಿಕ್ಕುತ್ತಿದ್ದು ಈ ನೀರನ್ನು ಕುಡಿದು ಕರು, ಮೇಕೆ ಸತ್ತಿರುವ ಅಮಾನವೀಯ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹುರುಳಿಹಳ್ಳಿ ಗ್ರಾಮದ ಕೆರೆಯ ಹಂಚಿಗೆ ಹೊಂದಿಕೊಂಡಿರುವ ವಿನ್ ಟ್ಯಾಕ್ ಔಷಧಿ ತಯಾರಿಕಾ ಘಟಕದಿಂದ ಭಾರಿ ಪ್ರಮಾಣದ ವಿಷಯುಕ್ತ ಕಲುಷಿತ ನೀರು ದೊಡ್ಡ ದೊಡ್ಡ ಪೈಪ್‌ಗಳ ಮುಖಾಂತರ ರಾತ್ರಿ ವೇಳೆ ಕೆರೆಗೆ ಹರಿದು ಬಿಡಲಾಗುತ್ತಿದೆ.

ಕಂಪನಿಯ ವಿಷಯುಕ್ತ ನೀರು ಕುಡಿದು ಪ್ರಾಣಿಗಳ ಸಾವು: ಇನ್ನು ಇತ್ತೀಚೆಗೆ ಇದೇ ಕೆರೆಯ ನೀರು ಕುಡಿದು ಹಸು, ಕರು ಹಾಗೂ ಮೇಕೆ ಪ್ರಾಣ ಕಳೆದುಕೊಂಡಿವೆ. ಅಲ್ಲದೆ ಈ ಹಿಂದೆ ಕೆರೆಯಲ್ಲಿ ಭಾರಿ ಮೀನುಗಳಿದ್ದು ನೀರು ಕಲುಷಿತಗೊಂಡ ನಂತರ ಜಲಚರಗಳು ಸಾವನ್ನಪ್ಪಿ ಕೆರೆಯಂಗಳ ಬರಿದಾಗಿದೆ. ಸುತ್ತಮುತ್ತಲಿರುವ ಭೂಮಿಯಲ್ಲಿನ ಕೃಷಿ ಚಟುವಟಿಕೆಗಳಿಗೂ ಕಲುಷಿತ ನೀರಿನಿಂದ ಭಾರಿ ತೊದರೆಯಾಗುತ್ತಿದೆ.

ರೈತ ಬಿತ್ತ ಬೀಜ ಫಲ ಕೊಡುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ‌. ಔಷಧಿ ತಯಾರಿಕಾ ಘಟಕದ ವಿರುದ್ಧ ಬೂದಿಹಾಲ್ ಗ್ರಾಮ ಪಂಚಾಯ್ತಿಗೆ ಸ್ಥಳೀಯರು ದೂರು ನೀಡಿದ್ದು ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಅಲ್ಲದೆ ಈ ಬಗ್ಗೆ ವಿನ್ ಟ್ಯಾಕ್ ಆಡಳಿತ ಮಂಡಳಿಯವರನ್ನ ಪ್ರಶ್ನಿಸಿದರೆ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.

ಒಟ್ಟಾರೆ ಔಷದಿ ತಯಾರಿಕಾ ಘಟಕವೇ ಪಶು ಪಕ್ಷಿಗಳ ಆರೋಗ್ಯಕ್ಕೆ ಮಾರಕವಾಗಿದ್ದು, ಸಂಬಂಧಪಟ್ಟ ಇಲಾಖೆಯವರು ತುರ್ತು ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ. -ಮೂರ್ತಿ ಬಿ

Published On - 2:11 pm, Thu, 26 November 20

ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?