AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔಷಧಿ ತಯಾರಿಕಾ ಘಟಕದ ತ್ಯಾಜ್ಯ ಸೀದಾ ಕೆರೆಗೆ: ಜೀವ ಸಂಕುಲಕ್ಕೆ ಎದುರಾಯ್ತು ಪ್ರಾಣ ಸಂಕಟ

ವಿನ್ ಟ್ಯಾಕ್ ಔಷಧಿ ತಯಾರಿಕಾ ಘಟಕದಿಂದ ಹೊರ ಬರುತ್ತಿರುವ ವಿಷಯುಕ್ತ ನೀರನ್ನು ಕುಡಿದು ಹಸು, ಕರು ಹಾಗೂ ಮೇಕೆ ಪ್ರಾಣ ಕಳೆದುಕೊಂಡಿವೆ. ಅಲ್ಲದೆ ಕೆರೆಯಲ್ಲಿ ಜಲ ಚರಗಳು ಸಾವನ್ನಪ್ಪಿವೆ.

ಔಷಧಿ ತಯಾರಿಕಾ ಘಟಕದ ತ್ಯಾಜ್ಯ ಸೀದಾ ಕೆರೆಗೆ: ಜೀವ ಸಂಕುಲಕ್ಕೆ ಎದುರಾಯ್ತು ಪ್ರಾಣ ಸಂಕಟ
ವಿನ್ ಟ್ಯಾಕ್ ಔಷಧಿ ತಯಾರಿಕಾ ಘಟಕದಿಂದ ವಿಷಯುಕ್ತ ಕಲುಷಿತ ನೀರು ಬಿಡುಗಡೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Nov 26, 2020 | 4:04 PM

Share

ನೆಲಮಂಗಲ: ಮೆಡಿಸಿನ್ ತಯಾರಿಸುವ ಪ್ರಸಿದ್ಧ ಕಂಪನಿಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯದಿಂದ ಇಡೀ ಹಳ್ಳಿಗೆ ಕಂಟಕ ಎದುರಾಗಿದೆ. ಪಶು ಪಕ್ಷಿ ಜೀವ ಸಂಕುಲ ಹಾಗೂ ಜಲಚರಗಳ ಪ್ರಾಣಕ್ಕೂ ಸಂಕಷ್ಟ ಎದುರಾಗಿದೆ.

ಕೆರೆಯಂಚಿನಲ್ಲಿರುವ ಬೃಹತ್ ಔಷಧಿ ತಯಾರಿಕಾ ಘಟಕದಿಂದ ಕೆರೆಗೆ ಪೈಪ್‌ಗಳ ಮೂಲಕ ಕಡು ಕಪ್ಪು ಬಣ್ಣದ ವಿಷಯುಕ್ತ ನೀರು, ಸಂಪೂರ್ಣ ಕಲುಷಿತವಾಗಿರುವ ನೀರು ದುಮ್ಮಿಕ್ಕುತ್ತಿದ್ದು ಈ ನೀರನ್ನು ಕುಡಿದು ಕರು, ಮೇಕೆ ಸತ್ತಿರುವ ಅಮಾನವೀಯ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹುರುಳಿಹಳ್ಳಿ ಗ್ರಾಮದ ಕೆರೆಯ ಹಂಚಿಗೆ ಹೊಂದಿಕೊಂಡಿರುವ ವಿನ್ ಟ್ಯಾಕ್ ಔಷಧಿ ತಯಾರಿಕಾ ಘಟಕದಿಂದ ಭಾರಿ ಪ್ರಮಾಣದ ವಿಷಯುಕ್ತ ಕಲುಷಿತ ನೀರು ದೊಡ್ಡ ದೊಡ್ಡ ಪೈಪ್‌ಗಳ ಮುಖಾಂತರ ರಾತ್ರಿ ವೇಳೆ ಕೆರೆಗೆ ಹರಿದು ಬಿಡಲಾಗುತ್ತಿದೆ.

ಕಂಪನಿಯ ವಿಷಯುಕ್ತ ನೀರು ಕುಡಿದು ಪ್ರಾಣಿಗಳ ಸಾವು: ಇನ್ನು ಇತ್ತೀಚೆಗೆ ಇದೇ ಕೆರೆಯ ನೀರು ಕುಡಿದು ಹಸು, ಕರು ಹಾಗೂ ಮೇಕೆ ಪ್ರಾಣ ಕಳೆದುಕೊಂಡಿವೆ. ಅಲ್ಲದೆ ಈ ಹಿಂದೆ ಕೆರೆಯಲ್ಲಿ ಭಾರಿ ಮೀನುಗಳಿದ್ದು ನೀರು ಕಲುಷಿತಗೊಂಡ ನಂತರ ಜಲಚರಗಳು ಸಾವನ್ನಪ್ಪಿ ಕೆರೆಯಂಗಳ ಬರಿದಾಗಿದೆ. ಸುತ್ತಮುತ್ತಲಿರುವ ಭೂಮಿಯಲ್ಲಿನ ಕೃಷಿ ಚಟುವಟಿಕೆಗಳಿಗೂ ಕಲುಷಿತ ನೀರಿನಿಂದ ಭಾರಿ ತೊದರೆಯಾಗುತ್ತಿದೆ.

ರೈತ ಬಿತ್ತ ಬೀಜ ಫಲ ಕೊಡುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ‌. ಔಷಧಿ ತಯಾರಿಕಾ ಘಟಕದ ವಿರುದ್ಧ ಬೂದಿಹಾಲ್ ಗ್ರಾಮ ಪಂಚಾಯ್ತಿಗೆ ಸ್ಥಳೀಯರು ದೂರು ನೀಡಿದ್ದು ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಅಲ್ಲದೆ ಈ ಬಗ್ಗೆ ವಿನ್ ಟ್ಯಾಕ್ ಆಡಳಿತ ಮಂಡಳಿಯವರನ್ನ ಪ್ರಶ್ನಿಸಿದರೆ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.

ಒಟ್ಟಾರೆ ಔಷದಿ ತಯಾರಿಕಾ ಘಟಕವೇ ಪಶು ಪಕ್ಷಿಗಳ ಆರೋಗ್ಯಕ್ಕೆ ಮಾರಕವಾಗಿದ್ದು, ಸಂಬಂಧಪಟ್ಟ ಇಲಾಖೆಯವರು ತುರ್ತು ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ. -ಮೂರ್ತಿ ಬಿ

Published On - 2:11 pm, Thu, 26 November 20

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ