AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಧಲೆಗೆ ತುತ್ತಾಗಿದ್ದ ವಿಸ್ಟ್ರಾನ್ ಕಂಪನಿ, ಶೀಘ್ರದಲ್ಲೇ ಕೆಲಸ ಪುನರಾರಂಭ

ಕಾರ್ಮಿಕರ ದಾಂದಲೆಗೆ ತುತ್ತಾಗಿದ್ದ ವಿಸ್ಟ್ರಾನ್ ಕಂಪನಿ ಶೀಘ್ರದಲ್ಲೇ ಕೆಲಸ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೆಲ ಕಿಡಿಗೇಡಿಗಳು ಮಾಡಿದ ತಪ್ಪಿನಿಂದ ಕೆಲಸವಿಲ್ಲದೇ ಕಂಗಲಾಗಿದ್ದ ಅದೆಷ್ಟೋ ಕಾರ್ಮಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ದಾಂಧಲೆಗೆ ತುತ್ತಾಗಿದ್ದ ವಿಸ್ಟ್ರಾನ್ ಕಂಪನಿ, ಶೀಘ್ರದಲ್ಲೇ ಕೆಲಸ ಪುನರಾರಂಭ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 17, 2020 | 11:31 AM

Share

ಕೋಲಾರ: ಸುನಾಮಿಯಂತೆ ನುಗ್ಗಿ ಕಂಪನಿಯಲ್ಲಿದ್ದ ವಸ್ತುಗಳನ್ನೆಲ್ಲಾ ಧ್ವಂಸ ಮಾಡಿದ್ರು. ಕಣ್ಣಿಗೆ ಕಾಣಿಸಿದ ಕಾರು, ಲ್ಯಾಪ್‌ಟ್ಯಾಪ್ ಸೇರಿದಂತೆ ಇನ್ನಿತರೆ ವಸ್ತುಗಳನ್ನೆಲ್ಲಾ ಪುಡಿಗಟ್ಟಿದ್ರು. ಕಳೆದ 4 ತಿಂಗಳಿನಿಂದ ವೇತನ ಕೊಡ್ತಿಲ್ಲ. ಮನವಿ ಮಾಡಿದ್ರು ರೆಸ್ಪಾನ್ಸ್ ಮಾಡ್ತಿಲ್ಲ ಅಂತಾ ಕಳೆದ ವಾರ ಕೋಲಾರ ತಾಲೂಕಿನ ನರಸಾಪುರದ ಬಳಿಯಿರುವ ವಿಸ್ಟ್ರಾನ್ ಕಂಪನಿಗೆ ಸಾವಿರಾರು ಕಾರ್ಮಿಕರು ನುಗ್ಗಿದ್ರು.

ನೋಡ ನೋಡ್ತಿದ್ದಂತೆ ಇಡೀ ಕಂಪನಿಯಲ್ಲಿ ಸಿಕ್ಕಸಿಕ್ಕಿದ್ದನ್ನೆಲ್ಲಾ ಧ್ವಂಸ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಹುಡುಕಿ ಹುಡುಕಿ ಕೆಲ ಕಾರ್ಮಿಕರನ್ನ ಬಂಧಿಸಿದ್ರು. ಬಳಿಕ ಅದೆಷ್ಟೋ ಮಂದಿ ಕೆಲಸವಿಲ್ಲದೇ ಚಿಂತೆಗೊಳಗಾಗಿದ್ರು.

ಇಷ್ಟೆಲ್ಲಾ ಬೆಳವಣಿಗೆ ನಂತರ ಇದೀಗ ಕಂಪನಿ ಶೀಘ್ರದಲ್ಲೇ ಕಾರ್ಯಾರಂಭ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ, ಜೊತೆಗೆ ದಾಂದಲೆ ವೇಳೆ ಸರ್ಕಾರ ನೀಡಿದ ನೆರವಿಗೆ ಅಭಿನಂಧನೆ ಸಲ್ಲಿಸಿರುವ ಕಂಪನಿ, ಪೊಲೀಸರ ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದೆ. ಈ ಮಧ್ಯೆ ತೈವಾನ್​ನಿಂದ ತಂಡವೊಂದು ಕಂಪನಿಗೆ ಭೇಟಿ ನೀಡಿ ನಷ್ಟವಾಗಿರುವ ಕುರಿತು ಮಾಹಿತಿ ಪಡೆದಿದೆ. ಇನ್ನು ಕೆಲಸ ಕಳೆದುಕೊಂಡಿದ್ದ ಕೆಲವು ಕಾರ್ಮಿಕರು ಗೇಟ್​ಬಳಿ ನಿಂತು ಕೆಲಸಕ್ಕಾಗಿ ಎದುರು ನೋಡುತ್ತಿದ್ದಾರೆ.

161 ಜನರ ಬಂಧನ: ಗಲಾಟೆ ಕೇಸ್‌ಗೆ ಸಂಬಂಧಿಸಿದಂತೆ ಈಗಾಗಲೇ 161 ಜನರನ್ನು ಬಂಧಿಸಿರುವ ಪೊಲೀಸರು ತನಿಖೆ ಶುರುಮಾಡಿದ್ದಾರೆ. ಬಂಧಿತರು ದಾಂದಲೆ ವೇಳೆ ಕಳುವು ಮಾಡಿದ ಮೊಬೈಲ್ ಫೋನ್, ಲ್ಯಾಪ್ ಟ್ಯಾಪ್‌ಗಳಿಗಾಗಿ ಕಂಪನಿ ಬಳಿಯ ನೀಲಗಿರಿ ತೋಪಿನಲ್ಲಿ ಆರೋಪಿಗಳೊಂದಿಗೆ ಹುಡುಕಾಟ ನಡೆಸಿದ್ರು. ಕೆಲ ಮೊಬೈಲ್​ ಫೋನ್​ ಹಾಗೂ ಲ್ಯಾಪ್​ಟ್ಯಾಪ್​ಗಳು ಸಿಕ್ಕಿವೆ ಎನ್ನಲಾಗಿದೆ. ಇನ್ನು ಪ್ರತಿಭಟನೆಗೆ ಕರೆ ನೀಡಿದ್ದ ಎಸ್​ಎಫ್​ಐ ಸಂಘಟನೆ ತಾಲೂಕು ಅಧ್ಯಕ್ಷ ಶ್ರೀಕಾಂತ್​ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದೇ ವೇಳೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ವರ್ತೂರ್​ ಪ್ರಕಾಶ್​ ಕಂಪನಿಯಲ್ಲಿ ದಾಂದಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಮಾಯಕರು ಬಲಿಯಾಗಬಾರದು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಒಟ್ನಲ್ಲಿ ವಿಸ್ಟ್ರಾನ್ ಕಂಪನಿ ಶೀಘ್ರದಲ್ಲೇ ಕೆಲಸ ಆರಂಭಿಸುವುದಾಗಿ ಹೇಳುವ ಮೂಲಕ ಕಾರ್ಮಿಕರಲ್ಲಿ ಆಶಾಭಾವನೆ ಮೂಡಿಸಿದೆ. ಕೆಲಸವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದ ಸಾವಿರಾರ ಕಾರ್ಮಿಕರ ಆತಂಕ ದೂರವಾಗಿದೆ.

Published On - 6:56 am, Thu, 17 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!