AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದರಂಗಿ ಅಳಿಸಿಲ್ಲ.. ಮದುವೆಯ ಕನಸು ನನಸಾಗಿಲ್ಲ.. 2 ದಿನದ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಚಿರನಿದ್ರೆಗೆ ಜಾರಿದ್ದಾಳೆ

ಆಕೆ ಸುಂದರ ಚೆಲುವೆ.. ಎಂಬಿಎ ಓದಿಕೊಂಡಿದ್ದ ಆಕೆ, ಜೀವನದಲ್ಲಿ ಸಾವಿರಾರು ಕನಸು ಹೊತ್ತು ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ಲು. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರೆಬೇಕಿದ್ದ ಆ ಯುವತಿ ಅನುಮಾನಾಸ್ಪದವಾಗಿ ಸಾವಿನ ಮನೆ ಸೇರಿದ್ದಾಳೆ.

ಮದರಂಗಿ ಅಳಿಸಿಲ್ಲ.. ಮದುವೆಯ ಕನಸು ನನಸಾಗಿಲ್ಲ.. 2 ದಿನದ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಚಿರನಿದ್ರೆಗೆ ಜಾರಿದ್ದಾಳೆ
ಆಯೇಷಾ ಬಾನು
|

Updated on:Nov 29, 2020 | 11:09 AM

Share

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಕದುರುಗೆರೆ ನಿವಾಸಿಯಾದ 23 ವರ್ಷದ ರೇಖಾ, ಸಾವಿರಾರು ಕನಸುಗಳನ್ನ ಹೊತ್ತಿದ್ಲು. ವೈವಾಹಿಕ ಜೀವನಕ್ಕೆ ಕಾಲಿಟ್ಟು ಹೊಸ ಜೀವನವನ್ನ ಕಟ್ಟಿಕೊಳ್ಳುವ ಕನಸು ಹೊತ್ತಿಕೊಂಡಿದ್ದ ಈ ಯುವತಿಯ ಬದುಕಿನಲ್ಲಿ ವಿಧಿ ಆಟವಾಡಿದೆ. ಹೊಸಬಾಳಿನ ಹೊಸ್ತಿಲು ತುಳಿಯ ಬೇಕಿದ್ದ ಈಕೆ ಸಾವಿನ ಮನೆಯ ಹೊಸ್ತಿಲು ತುಳಿದಿದ್ದಾಳೆ.

ಹೊಸ ಕನಸು ಕಂಡ ಯುವತಿ ಬಾಳಲ್ಲಿ ವಿಧಿಯಾಟ! ನೂತನ ಜೀವನಕ್ಕೆ ಹೆಜ್ಜೆ ಇಡಲು ಸಿದ್ದವಾಗಿದ್ದ ಈ ರೇಖಾಳಿಗೆ ಎರಡು ದಿನಗಳ ಹಿಂದೆ ನೆಲಮಂಗಲದ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು. ನಿಶ್ಚಿತಾರ್ಥದ ನಂತರ ಇಬ್ಬರು ಅನ್ಯೋನ್ಯವಾಗಿಯೇ ಮಾತನಾಡುತ್ತಿದ್ದರು. ಆದ್ರೆ ಅದೇನಾಯ್ತೋ ಏನೋ ನಿನ್ನೆ ಮಧ್ಯಾಹ್ನನದ ವೇಳೆಗೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿಕೊಂಡು ಈ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನು ಆತ್ಮಹತ್ಯೆ ಹಿಂದೆ ಹಲವು ಅನುಮಾನಗಳು ಸೃಷ್ಟಿಯಾಗಿವೆ. ಹುಡುಗ ಹುಡುಗಿಯ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಪ್ರಕರಣದ ಸತ್ಯಾಸತ್ಯೆಗೆ ಮುಚ್ಚಿಹಾಕಲು ರಾಜಕೀಯ ಮುಖಂಡರ ಪ್ರಭಾವ ಬಳಸಿದ್ದಾರೆ ಎನ್ನಲಾಗಿದೆ. ಆದ್ರೆ ಹೊಟ್ಟೆ ನೋವಿನಿಂದ ನೇಣಿಗೆ ಶರಣಾಗಿದ್ದಾಳೆಂದು ಯುವತಿಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಒಟ್ಟಾರೆ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಆದ್ರೆ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಸೂಸೈಡ್ ಮಾಡ್ಕೊಂಡಿದ್ದು ಯಾಕೆ ಅನ್ನೋ ಪ್ರಶ್ನೆ ಎಲ್ಲರನ್ನ ಕಾಡುತ್ತಿದೆ. ಇದಕ್ಕೆ ತನಿಖೆ ನಂತರವೇ ಉತ್ತರ ಸಿಗಬೇಕಿದೆ.

Published On - 7:25 am, Sun, 29 November 20

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ