AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದರಂಗಿ ಅಳಿಸಿಲ್ಲ.. ಮದುವೆಯ ಕನಸು ನನಸಾಗಿಲ್ಲ.. 2 ದಿನದ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಚಿರನಿದ್ರೆಗೆ ಜಾರಿದ್ದಾಳೆ

ಆಕೆ ಸುಂದರ ಚೆಲುವೆ.. ಎಂಬಿಎ ಓದಿಕೊಂಡಿದ್ದ ಆಕೆ, ಜೀವನದಲ್ಲಿ ಸಾವಿರಾರು ಕನಸು ಹೊತ್ತು ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ಲು. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರೆಬೇಕಿದ್ದ ಆ ಯುವತಿ ಅನುಮಾನಾಸ್ಪದವಾಗಿ ಸಾವಿನ ಮನೆ ಸೇರಿದ್ದಾಳೆ.

ಮದರಂಗಿ ಅಳಿಸಿಲ್ಲ.. ಮದುವೆಯ ಕನಸು ನನಸಾಗಿಲ್ಲ.. 2 ದಿನದ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಚಿರನಿದ್ರೆಗೆ ಜಾರಿದ್ದಾಳೆ
ಆಯೇಷಾ ಬಾನು
|

Updated on:Nov 29, 2020 | 11:09 AM

Share

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಕದುರುಗೆರೆ ನಿವಾಸಿಯಾದ 23 ವರ್ಷದ ರೇಖಾ, ಸಾವಿರಾರು ಕನಸುಗಳನ್ನ ಹೊತ್ತಿದ್ಲು. ವೈವಾಹಿಕ ಜೀವನಕ್ಕೆ ಕಾಲಿಟ್ಟು ಹೊಸ ಜೀವನವನ್ನ ಕಟ್ಟಿಕೊಳ್ಳುವ ಕನಸು ಹೊತ್ತಿಕೊಂಡಿದ್ದ ಈ ಯುವತಿಯ ಬದುಕಿನಲ್ಲಿ ವಿಧಿ ಆಟವಾಡಿದೆ. ಹೊಸಬಾಳಿನ ಹೊಸ್ತಿಲು ತುಳಿಯ ಬೇಕಿದ್ದ ಈಕೆ ಸಾವಿನ ಮನೆಯ ಹೊಸ್ತಿಲು ತುಳಿದಿದ್ದಾಳೆ.

ಹೊಸ ಕನಸು ಕಂಡ ಯುವತಿ ಬಾಳಲ್ಲಿ ವಿಧಿಯಾಟ! ನೂತನ ಜೀವನಕ್ಕೆ ಹೆಜ್ಜೆ ಇಡಲು ಸಿದ್ದವಾಗಿದ್ದ ಈ ರೇಖಾಳಿಗೆ ಎರಡು ದಿನಗಳ ಹಿಂದೆ ನೆಲಮಂಗಲದ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು. ನಿಶ್ಚಿತಾರ್ಥದ ನಂತರ ಇಬ್ಬರು ಅನ್ಯೋನ್ಯವಾಗಿಯೇ ಮಾತನಾಡುತ್ತಿದ್ದರು. ಆದ್ರೆ ಅದೇನಾಯ್ತೋ ಏನೋ ನಿನ್ನೆ ಮಧ್ಯಾಹ್ನನದ ವೇಳೆಗೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿಕೊಂಡು ಈ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನು ಆತ್ಮಹತ್ಯೆ ಹಿಂದೆ ಹಲವು ಅನುಮಾನಗಳು ಸೃಷ್ಟಿಯಾಗಿವೆ. ಹುಡುಗ ಹುಡುಗಿಯ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಪ್ರಕರಣದ ಸತ್ಯಾಸತ್ಯೆಗೆ ಮುಚ್ಚಿಹಾಕಲು ರಾಜಕೀಯ ಮುಖಂಡರ ಪ್ರಭಾವ ಬಳಸಿದ್ದಾರೆ ಎನ್ನಲಾಗಿದೆ. ಆದ್ರೆ ಹೊಟ್ಟೆ ನೋವಿನಿಂದ ನೇಣಿಗೆ ಶರಣಾಗಿದ್ದಾಳೆಂದು ಯುವತಿಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಒಟ್ಟಾರೆ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಆದ್ರೆ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಸೂಸೈಡ್ ಮಾಡ್ಕೊಂಡಿದ್ದು ಯಾಕೆ ಅನ್ನೋ ಪ್ರಶ್ನೆ ಎಲ್ಲರನ್ನ ಕಾಡುತ್ತಿದೆ. ಇದಕ್ಕೆ ತನಿಖೆ ನಂತರವೇ ಉತ್ತರ ಸಿಗಬೇಕಿದೆ.

Published On - 7:25 am, Sun, 29 November 20

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?