AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡನ ಕೆಸರಿನಾಟಕ್ಕೆ ಗೃಹಿಣಿ ಬಲಿ

ಧಾರವಾಡ: ಬಿಜೆಪಿ‌ ಮುಖಂಡನೊಬ್ಬನ ಎರಡನೇ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಸ್ವಾಗತ ಕಾಲೋನಿಯಲ್ಲಿ ನಡೆದಿದೆ. ಅನಿತಾ ರೇವಣಕರ್ ನೇಣಿಗೆ ಶರಣಾದ ಮಹಿಳೆ. ಹಣದಾಸೆಗೆ ಬಿಜೆಪಿ‌ ಮುಖಂಡ ಬಸವರಾಜ್ ಕೆಲಗಾರ ಅನಿತಾರನ್ನ ಮದುವೆಯಾಗಿ ನಂತರ ಆಕೆಗೆ ಕೈಕೊಟ್ಟಿದ್ದಕ್ಕೆ ಮಹಿಳೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಬಿಜೆಪಿ‌ ಮುಖಂಡ ಬಸವರಾಜ್ ಕೆಲಗಾರ ವಿಧವೆಯಾಗಿದ್ದ ಅನಿತಾಳಿಗೆ ಬಾಳು ಕೊಡುವ ನೆಪದಲ್ಲಿ ಆಕೆಯನ್ನು ವರಿಸಿದ್ದನಂತೆ. ತನ್ನ ಮೊದಲ ಪತ್ನಿ ಮತ್ತು ಮಕ್ಕಳು ಇನ್ನೂ ಬದುಕಿದ್ದರೂ ಬಸವರಾಜ್ ಅನಿತಾಳನ್ನು […]

ಬಿಜೆಪಿ ಮುಖಂಡನ ಕೆಸರಿನಾಟಕ್ಕೆ ಗೃಹಿಣಿ ಬಲಿ
ಆಯೇಷಾ ಬಾನು
|

Updated on:Sep 26, 2020 | 3:56 PM

Share

ಧಾರವಾಡ: ಬಿಜೆಪಿ‌ ಮುಖಂಡನೊಬ್ಬನ ಎರಡನೇ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಸ್ವಾಗತ ಕಾಲೋನಿಯಲ್ಲಿ ನಡೆದಿದೆ. ಅನಿತಾ ರೇವಣಕರ್ ನೇಣಿಗೆ ಶರಣಾದ ಮಹಿಳೆ. ಹಣದಾಸೆಗೆ ಬಿಜೆಪಿ‌ ಮುಖಂಡ ಬಸವರಾಜ್ ಕೆಲಗಾರ ಅನಿತಾರನ್ನ ಮದುವೆಯಾಗಿ ನಂತರ ಆಕೆಗೆ ಕೈಕೊಟ್ಟಿದ್ದಕ್ಕೆ ಮಹಿಳೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಬಿಜೆಪಿ‌ ಮುಖಂಡ ಬಸವರಾಜ್ ಕೆಲಗಾರ ವಿಧವೆಯಾಗಿದ್ದ ಅನಿತಾಳಿಗೆ ಬಾಳು ಕೊಡುವ ನೆಪದಲ್ಲಿ ಆಕೆಯನ್ನು ವರಿಸಿದ್ದನಂತೆ. ತನ್ನ ಮೊದಲ ಪತ್ನಿ ಮತ್ತು ಮಕ್ಕಳು ಇನ್ನೂ ಬದುಕಿದ್ದರೂ ಬಸವರಾಜ್ ಅನಿತಾಳನ್ನು ಮದುವೆಯಾಗಿದ್ದ. ಆದರೆ, ಆಕೆಯನ್ನು ಪ್ರೀತಿಸಿ ಮದುವೆಯಾದ ನಂತರ ಅನಿತಾಳಿಗೆ ಬಿಜೆಪಿ ಮುಖಂಡ ವಂಚಿಸಿದ್ದಾನೆ ಎಂದು ಹೇಳಲಾಗಿದೆ. ಅನಿತಾ ಕೈಯಲ್ಲಿದ್ದ ಹಣವೆಲ್ಲಾ ಖಾಲಿಯಾದ ಬಳಿಕ ಆಕೆಯನ್ನು ತೊರೆದಿದ್ದಾನೆ ಎಂದು ಹೇಳಲಾಗಿದೆ.

ಇದಲ್ಲದೆ, ಅನಿತಾ ತನ್ನ ಹಣ ವಾಪಸ್​ ಕೇಳಿದಕ್ಕೆ ಬಸವರಾಜ್ ಆಕೆಯನ್ನು​ ಮನಬಂದಂತೆ ಥಳಿಸಿದ್ದನಂತೆ. ಕಳೆದ ಕೆಲವು ದಿನಗಳ ಹಿಂದೆ ನಡುರಸ್ತೆಯಲ್ಲಿ ಹೋಗುತ್ತಿದ್ದ ಅನಿತಾ ಹಾಗೂ ಆಕೆಯ ಮಕ್ಕಳ ಮೇಲೆ ಬಿಜೆಪಿ ಮುಖಂಡ ಬಸವರಾಜ್ ಕೆಲಗಾರ ಹಲ್ಲೆ ನಡೆಸಿದ್ದಾನೆ. ಇದರಿಂದ ಮನನೊಂದು ಅನಿತಾ ನೇಣಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಇದೀಗ, ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ‌ ಬಸವರಾಜ್ ವಿರುದ್ಧ ದೂರು ದಾಖಲಾಗಿದೆ.

Published On - 3:52 pm, Sat, 26 September 20

Follow Us
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!