ಕೊರೊನಾ ಪಾಸಿಟಿವ್ ದೃಢಪಟ್ಟಾಗ ಆ ಮಹಿಳೆ ಮಾಡಿದ್ದೇನು?

ಮಂಡ್ಯ: ತನಗೆ ಕೊರೊನಾ ಪಾಸಿಟಿವ್ ಬಂದಿದೆ ಅನ್ನೊ ವಿಚಾರ ತಿಳಿಯುತ್ತಲೇ 35 ವರ್ಷದ ಮಹಿಳೆಯೊಬ್ಬರು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಹಿಳೆ, ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆ‌ ನಿವಾಸಿ. ನಾಗಮಂಗಲ ತಾಲೂಕಿನ ಬೋಗಾದಿ ಗ್ರಾಮದ ಬಸವನಗುಡಿ ಬಳಿಯ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆ, ಫೈನಾನ್ಸ್ ಕಂಪನಿಯೊಂದರಲ್ಲಿ ಹಣ ಸಂಗ್ರಹ ಕೆಲಸ ಮಾಡ್ತಿದ್ದರು. ಕಳೆದ ಬುಧವಾರದಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ವೈದ್ಯರು ವಿಚಾರ ತಿಳಿಸುತ್ತಿದ್ದಂತೆ ಮನೆಗೆ ಬಾರದೆ ನಾಲೆಗೆ ಹಾರಿ […]

ಕೊರೊನಾ ಪಾಸಿಟಿವ್ ದೃಢಪಟ್ಟಾಗ ಆ ಮಹಿಳೆ ಮಾಡಿದ್ದೇನು?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​

Updated on: Aug 07, 2020 | 11:09 AM

ಮಂಡ್ಯ: ತನಗೆ ಕೊರೊನಾ ಪಾಸಿಟಿವ್ ಬಂದಿದೆ ಅನ್ನೊ ವಿಚಾರ ತಿಳಿಯುತ್ತಲೇ 35 ವರ್ಷದ ಮಹಿಳೆಯೊಬ್ಬರು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಹಿಳೆ, ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆ‌ ನಿವಾಸಿ. ನಾಗಮಂಗಲ ತಾಲೂಕಿನ ಬೋಗಾದಿ ಗ್ರಾಮದ ಬಸವನಗುಡಿ ಬಳಿಯ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಮಹಿಳೆ, ಫೈನಾನ್ಸ್ ಕಂಪನಿಯೊಂದರಲ್ಲಿ ಹಣ ಸಂಗ್ರಹ ಕೆಲಸ ಮಾಡ್ತಿದ್ದರು. ಕಳೆದ ಬುಧವಾರದಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ವೈದ್ಯರು ವಿಚಾರ ತಿಳಿಸುತ್ತಿದ್ದಂತೆ ಮನೆಗೆ ಬಾರದೆ ನಾಲೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 11:01 am, Fri, 7 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us