AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೆಂಥಾ ಕ್ರೌರ್ಯ ? ಚಿಕಿತ್ಸೆ ಸಿಗದೆ ವಿಕ್ಟೋರಿಯಾ ಆಸ್ಪತ್ರೆ ಗೇಟ್ ಬಳಿಯೇ ಪ್ರಾಣ ಬಿಟ್ಟ ಮಹಿಳೆ

ಬೆಂಗಳೂರು: ಬೆಂಗಳೂರಿನಲ್ಲಿ ವೈದ್ಯರ ಅಮಾನವೀಯ ವರ್ತನೆಗೆ ಮತ್ತೊಂದು ಬಲಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಗೇಟ್ ಬಳಿಯೇ ಮಹಿಳೆಯೊಬ್ಬಳು ನರಳಿ ನರಳಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಬೆಂಗಳೂರಿನ 60 ವರ್ಷದ ಮಹಿಳೆಯೊಬ್ಬಳು ಉಸಿರಾಟದ ತೊಂದರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಬೆಡ್ ಇಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನ ದಾಖಲಿಸಿಕೊಂಡಿಲ್ಲ. ಪರಿಣಾಮ ಆಸ್ಪತ್ರೆ ಗೇಟ್ ಬಳಿಯೇ ನರಳುತ್ತಿದ್ದ ಮಹಿಳೆ ಚಿಕಿತ್ಸೆ ಸಿಗದೆ ಬೆಳಗಿನ ಜಾವ 4ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಆಘಾತಕಾರಿಯಂದ್ರೆ ಬದುಕಿದ್ದಾಗ […]

ಇದೆಂಥಾ ಕ್ರೌರ್ಯ ? ಚಿಕಿತ್ಸೆ ಸಿಗದೆ ವಿಕ್ಟೋರಿಯಾ ಆಸ್ಪತ್ರೆ ಗೇಟ್ ಬಳಿಯೇ ಪ್ರಾಣ ಬಿಟ್ಟ ಮಹಿಳೆ
Guru
| Edited By: |

Updated on:Jul 12, 2020 | 2:02 PM

Share

ಬೆಂಗಳೂರು: ಬೆಂಗಳೂರಿನಲ್ಲಿ ವೈದ್ಯರ ಅಮಾನವೀಯ ವರ್ತನೆಗೆ ಮತ್ತೊಂದು ಬಲಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಗೇಟ್ ಬಳಿಯೇ ಮಹಿಳೆಯೊಬ್ಬಳು ನರಳಿ ನರಳಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಬೆಂಗಳೂರಿನ 60 ವರ್ಷದ ಮಹಿಳೆಯೊಬ್ಬಳು ಉಸಿರಾಟದ ತೊಂದರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಬೆಡ್ ಇಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನ ದಾಖಲಿಸಿಕೊಂಡಿಲ್ಲ. ಪರಿಣಾಮ ಆಸ್ಪತ್ರೆ ಗೇಟ್ ಬಳಿಯೇ ನರಳುತ್ತಿದ್ದ ಮಹಿಳೆ ಚಿಕಿತ್ಸೆ ಸಿಗದೆ ಬೆಳಗಿನ ಜಾವ 4ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ.

ಆಘಾತಕಾರಿಯಂದ್ರೆ ಬದುಕಿದ್ದಾಗ ಚಿಕಿತ್ಸೆ ನೀಡದೆ ಆಸ್ಪತ್ರೆ ಒಳಗೂ ಬಿಟ್ಟುಕೊಳ್ಳದೆ ಇದ್ದ ವೈದ್ಯಕೀಯ ಸಿಬ್ಬಂದಿ, ಮಹಿಳೆ ಸತ್ತ ಮೇಲೆ ಆಕೆಯ ಶವವನ್ನ ಪಡೆದು ಕೋವಿಡ್ ಟೆಸ್ಟ್‌ಗೆ ರವಾನಿಸಿದ್ದಾರೆ.

ಇದಕ್ಕೂ ಮೊದಲು ಮಹಿಳೆ ಉಸಿರಾಟದ ತೊಂದರೆಯಂದು ಖಾಸಗಿ ಆಸ್ಪತ್ರೆಗೆ ಚೆಕ್ ಅಪ್​ಗಾಗಿ ಹೋದಾಗ ಕೋವಿಡ್ ಶಂಕೆ ಕಂಡು ಬಂದಿತ್ತು. ಆಗ ಖಾಸಗಿ ಆಸ್ಪತ್ರೆ ವೈದ್ಯರು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಎಂದು ಕಳಿಸಿದ್ರು. ಮಹಿಳೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆ, ಕಿಮ್ಸ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗೆ ಹೋದರೂ ಬೆಡ್ ಇಲ್ಲ ,ವೆಂಟಿಲೇಟರ್ ಇಲ್ಲ ಎಂದು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿವೆ.

ಬೆಳಗಿನ ಜಾವ 2 ಗಂಟೆಯಿಂದ ಆಂಬುಲೆನ್ಸ್​ನಲ್ಲಿ ಆಸ್ಪತ್ರೆಗಾಗಿ ಅಲೆಯುತ್ತಿದ್ದ ಮಹಿಳೆ ಕೊನೆಗೆ ಚಿಕಿತ್ಸೆ ಸಿಗದೆ ವಿಕ್ಟೋರಿಯಾ ಆಸ್ಪತ್ರೆಯ ಗೇಟ್ ಮುಂದೆ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ.

Published On - 10:35 am, Sun, 12 July 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!