AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೆಂಥಾ ಕ್ರೌರ್ಯ ? ಚಿಕಿತ್ಸೆ ಸಿಗದೆ ವಿಕ್ಟೋರಿಯಾ ಆಸ್ಪತ್ರೆ ಗೇಟ್ ಬಳಿಯೇ ಪ್ರಾಣ ಬಿಟ್ಟ ಮಹಿಳೆ

ಬೆಂಗಳೂರು: ಬೆಂಗಳೂರಿನಲ್ಲಿ ವೈದ್ಯರ ಅಮಾನವೀಯ ವರ್ತನೆಗೆ ಮತ್ತೊಂದು ಬಲಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಗೇಟ್ ಬಳಿಯೇ ಮಹಿಳೆಯೊಬ್ಬಳು ನರಳಿ ನರಳಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಬೆಂಗಳೂರಿನ 60 ವರ್ಷದ ಮಹಿಳೆಯೊಬ್ಬಳು ಉಸಿರಾಟದ ತೊಂದರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಬೆಡ್ ಇಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನ ದಾಖಲಿಸಿಕೊಂಡಿಲ್ಲ. ಪರಿಣಾಮ ಆಸ್ಪತ್ರೆ ಗೇಟ್ ಬಳಿಯೇ ನರಳುತ್ತಿದ್ದ ಮಹಿಳೆ ಚಿಕಿತ್ಸೆ ಸಿಗದೆ ಬೆಳಗಿನ ಜಾವ 4ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಆಘಾತಕಾರಿಯಂದ್ರೆ ಬದುಕಿದ್ದಾಗ […]

ಇದೆಂಥಾ ಕ್ರೌರ್ಯ ? ಚಿಕಿತ್ಸೆ ಸಿಗದೆ ವಿಕ್ಟೋರಿಯಾ ಆಸ್ಪತ್ರೆ ಗೇಟ್ ಬಳಿಯೇ ಪ್ರಾಣ ಬಿಟ್ಟ ಮಹಿಳೆ
Guru
| Edited By: |

Updated on:Jul 12, 2020 | 2:02 PM

Share

ಬೆಂಗಳೂರು: ಬೆಂಗಳೂರಿನಲ್ಲಿ ವೈದ್ಯರ ಅಮಾನವೀಯ ವರ್ತನೆಗೆ ಮತ್ತೊಂದು ಬಲಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಗೇಟ್ ಬಳಿಯೇ ಮಹಿಳೆಯೊಬ್ಬಳು ನರಳಿ ನರಳಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಬೆಂಗಳೂರಿನ 60 ವರ್ಷದ ಮಹಿಳೆಯೊಬ್ಬಳು ಉಸಿರಾಟದ ತೊಂದರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಬೆಡ್ ಇಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನ ದಾಖಲಿಸಿಕೊಂಡಿಲ್ಲ. ಪರಿಣಾಮ ಆಸ್ಪತ್ರೆ ಗೇಟ್ ಬಳಿಯೇ ನರಳುತ್ತಿದ್ದ ಮಹಿಳೆ ಚಿಕಿತ್ಸೆ ಸಿಗದೆ ಬೆಳಗಿನ ಜಾವ 4ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ.

ಆಘಾತಕಾರಿಯಂದ್ರೆ ಬದುಕಿದ್ದಾಗ ಚಿಕಿತ್ಸೆ ನೀಡದೆ ಆಸ್ಪತ್ರೆ ಒಳಗೂ ಬಿಟ್ಟುಕೊಳ್ಳದೆ ಇದ್ದ ವೈದ್ಯಕೀಯ ಸಿಬ್ಬಂದಿ, ಮಹಿಳೆ ಸತ್ತ ಮೇಲೆ ಆಕೆಯ ಶವವನ್ನ ಪಡೆದು ಕೋವಿಡ್ ಟೆಸ್ಟ್‌ಗೆ ರವಾನಿಸಿದ್ದಾರೆ.

ಇದಕ್ಕೂ ಮೊದಲು ಮಹಿಳೆ ಉಸಿರಾಟದ ತೊಂದರೆಯಂದು ಖಾಸಗಿ ಆಸ್ಪತ್ರೆಗೆ ಚೆಕ್ ಅಪ್​ಗಾಗಿ ಹೋದಾಗ ಕೋವಿಡ್ ಶಂಕೆ ಕಂಡು ಬಂದಿತ್ತು. ಆಗ ಖಾಸಗಿ ಆಸ್ಪತ್ರೆ ವೈದ್ಯರು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಎಂದು ಕಳಿಸಿದ್ರು. ಮಹಿಳೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆ, ಕಿಮ್ಸ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗೆ ಹೋದರೂ ಬೆಡ್ ಇಲ್ಲ ,ವೆಂಟಿಲೇಟರ್ ಇಲ್ಲ ಎಂದು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿವೆ.

ಬೆಳಗಿನ ಜಾವ 2 ಗಂಟೆಯಿಂದ ಆಂಬುಲೆನ್ಸ್​ನಲ್ಲಿ ಆಸ್ಪತ್ರೆಗಾಗಿ ಅಲೆಯುತ್ತಿದ್ದ ಮಹಿಳೆ ಕೊನೆಗೆ ಚಿಕಿತ್ಸೆ ಸಿಗದೆ ವಿಕ್ಟೋರಿಯಾ ಆಸ್ಪತ್ರೆಯ ಗೇಟ್ ಮುಂದೆ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ.

Published On - 10:35 am, Sun, 12 July 20

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ