AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ. […]

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?
Follow us
KUSHAL V
| Updated By:

Updated on:Jul 09, 2020 | 7:20 PM

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.

ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ.

ತದನಂತರ ಬಾಣಂತಿ ಮತ್ತು ಮಗುವಿಗೆ ಕ್ಲೀನಿಂಗ್ ಮಾಡಿಸಲು ಮಹೇಶ್​ ಲಕ್ಕುಂಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಲ್ಲಿಯೂ ನಿರ್ಲಕ್ಷ್ಯ ತೋರಿರುವ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಗೆ ವಾಹನದಿಂದ ಆಸ್ಪತ್ರೆ ತಲುಪಲು ವೀಲ್​ಚೇರ್​ ಸಹ ನೀಡಲಿಲ್ಲವಂತೆ. ಹೀಗಾಗಿ, ಬಾಣಂತಿ ಆಸ್ಪತ್ರೆಯ ವಾರ್ಡ್​ಗೆ ನಡೆದುಕೊಂಡೇ ಬಂದಿದ್ದಾರೆ. ಇದನ್ನು ಕಂಡ ಸೋಮವ್ವಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 6:22 pm, Thu, 9 July 20

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?