AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ. […]

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?
KUSHAL V
| Edited By: |

Updated on:Jul 09, 2020 | 7:20 PM

Share

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.

ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ.

ತದನಂತರ ಬಾಣಂತಿ ಮತ್ತು ಮಗುವಿಗೆ ಕ್ಲೀನಿಂಗ್ ಮಾಡಿಸಲು ಮಹೇಶ್​ ಲಕ್ಕುಂಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಲ್ಲಿಯೂ ನಿರ್ಲಕ್ಷ್ಯ ತೋರಿರುವ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಗೆ ವಾಹನದಿಂದ ಆಸ್ಪತ್ರೆ ತಲುಪಲು ವೀಲ್​ಚೇರ್​ ಸಹ ನೀಡಲಿಲ್ಲವಂತೆ. ಹೀಗಾಗಿ, ಬಾಣಂತಿ ಆಸ್ಪತ್ರೆಯ ವಾರ್ಡ್​ಗೆ ನಡೆದುಕೊಂಡೇ ಬಂದಿದ್ದಾರೆ. ಇದನ್ನು ಕಂಡ ಸೋಮವ್ವಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 6:22 pm, Thu, 9 July 20

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ