AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ. […]

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?
KUSHAL V
| Edited By: |

Updated on:Jul 09, 2020 | 7:20 PM

Share

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.

ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ.

ತದನಂತರ ಬಾಣಂತಿ ಮತ್ತು ಮಗುವಿಗೆ ಕ್ಲೀನಿಂಗ್ ಮಾಡಿಸಲು ಮಹೇಶ್​ ಲಕ್ಕುಂಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಲ್ಲಿಯೂ ನಿರ್ಲಕ್ಷ್ಯ ತೋರಿರುವ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಗೆ ವಾಹನದಿಂದ ಆಸ್ಪತ್ರೆ ತಲುಪಲು ವೀಲ್​ಚೇರ್​ ಸಹ ನೀಡಲಿಲ್ಲವಂತೆ. ಹೀಗಾಗಿ, ಬಾಣಂತಿ ಆಸ್ಪತ್ರೆಯ ವಾರ್ಡ್​ಗೆ ನಡೆದುಕೊಂಡೇ ಬಂದಿದ್ದಾರೆ. ಇದನ್ನು ಕಂಡ ಸೋಮವ್ವಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 6:22 pm, Thu, 9 July 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ