AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಳ ಒಳ್ಳೇಯವ್ರು ನಮ್ ಮಿಸ್.. ಸಂಪ್ರದಾಯಸ್ಥ ಕುಟುಂಬದ ಈ ಮಹಿಳೆ ಸ್ಲಂ ಮಕ್ಕಳಿಗೆ ಜ್ಞಾನ ದೇವತೆ!

ಉಡುಪಿ: ಸ್ಲಮ್ ಮಕ್ಳು ಆಂದ್ರೆ ಸಿರಿವಂತರಿಗೆ ಏನೋ ತಾತ್ಸಾರ. ಆದ್ರೆ ಉಡುಪಿಯ ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬವೊಂದು ಕಳೆದ 14 ವರ್ಷಗಳಿಂದ ಸ್ಲಮ್ ಮಕ್ಕಳಿಗೆ ಉಚಿತ ಶಿಕ್ಷಣ, ಬಟ್ಟೆ ಬರೆ ನೀಡುವುದರ ಜೊತೆಗೆ ಅವರ ಆರೈಕೆ ಮಾಡುತ್ತಿದೆ. ಸದ್ಯ ಕೊರೊನಾ ಕಾರಣದಿಂದ ಶಾಲೆಗೆ ಹೋಗದ ಸ್ಲಮ್ ಮಕ್ಕಳಿಗೆ ಇವರ ಮನೆಯೇ ಪಾಠ ಶಾಲೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಗಾದೆ ಮಾತಿನಂತೆ ಇಲ್ಲೊಬ್ಬ ಮಹಿಳೆ ಮಕ್ಕಳಿಗೆ ಶಿಕ್ಷಣ ದಾನ ಮಾಡ್ತಿದ್ದಾರೆ. ರೂಪಾ ಬಲ್ಲಾಳ್, ಉಡುಪಿ ಸಂಪ್ರದಾಯಸ್ಥ ಬ್ರಾಹ್ಮಣ […]

ಬಹಳ ಒಳ್ಳೇಯವ್ರು ನಮ್ ಮಿಸ್.. ಸಂಪ್ರದಾಯಸ್ಥ ಕುಟುಂಬದ ಈ ಮಹಿಳೆ ಸ್ಲಂ ಮಕ್ಕಳಿಗೆ ಜ್ಞಾನ ದೇವತೆ!
ಆಯೇಷಾ ಬಾನು
ಆಯೇಷಾ ಬಾನು|

Updated on:Nov 11, 2020 | 4:41 PM

Share

ಉಡುಪಿ: ಸ್ಲಮ್ ಮಕ್ಳು ಆಂದ್ರೆ ಸಿರಿವಂತರಿಗೆ ಏನೋ ತಾತ್ಸಾರ. ಆದ್ರೆ ಉಡುಪಿಯ ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬವೊಂದು ಕಳೆದ 14 ವರ್ಷಗಳಿಂದ ಸ್ಲಮ್ ಮಕ್ಕಳಿಗೆ ಉಚಿತ ಶಿಕ್ಷಣ, ಬಟ್ಟೆ ಬರೆ ನೀಡುವುದರ ಜೊತೆಗೆ ಅವರ ಆರೈಕೆ ಮಾಡುತ್ತಿದೆ. ಸದ್ಯ ಕೊರೊನಾ ಕಾರಣದಿಂದ ಶಾಲೆಗೆ ಹೋಗದ ಸ್ಲಮ್ ಮಕ್ಕಳಿಗೆ ಇವರ ಮನೆಯೇ ಪಾಠ ಶಾಲೆ.

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಗಾದೆ ಮಾತಿನಂತೆ ಇಲ್ಲೊಬ್ಬ ಮಹಿಳೆ ಮಕ್ಕಳಿಗೆ ಶಿಕ್ಷಣ ದಾನ ಮಾಡ್ತಿದ್ದಾರೆ. ರೂಪಾ ಬಲ್ಲಾಳ್, ಉಡುಪಿ ಸಂಪ್ರದಾಯಸ್ಥ ಬ್ರಾಹ್ಮಣ ಮನೆತನದವರು. ಈಕೆ ವೃತ್ತಿಯಲ್ಲಿ ಯೋಗ ಥೆರಪಿಸ್ಟ್. ಇವರಿಗೆ ಬಡ ಮಕ್ಕಳನ್ನು ಕಂಡರೆ ಅಪಾರವಾದ ಪ್ರೀತಿ. ಅಂದಹಾಗೆ ಇವರು ಸ್ಲಮ್‌ನಲ್ಲಿರುವ ಬಡ ಮಕ್ಕಳನ್ನು ತಮ್ಮ ಮನೆಗೆ ಕರೆತಂದು ಉಚಿತವಾಗಿ ಪಾಠದ ವ್ಯವಸ್ಥೆ ಮಾಡಿದ್ದಾರೆ.

ಉಡುಪಿಯಲ್ಲಿ ಬಿಜಾಪುರ, ಬಾಗಲಕೋಟೆ, ರಾಯಚೂರು, ಬಳ್ಳಾರಿ, ದಾವಣಗೆರೆ, ಕೊಪ್ಪಳ ಸಹಿತ ಅನೇಕ ಜಿಲ್ಲೆಗಳ ವಲಸೆ ಕಾರ್ಮಿಕರು ನೆಲೆಸಿದ್ದಾರೆ. ಈ ಕಾರ್ಮಿಕರ ಮಕ್ಕಳನ್ನು ಕರೆತಂದು ಪತಿ ನಾಗರಾಜ್ ಸಹಕಾರದೊಂದಿಗೆ ರೂಪ ಬಲ್ಲಾಳ್ ಈ ಒಂದು ಸಾಮಾಜಿಕ ಕಾರ್ಯ ನಡೆಸುತ್ತಿದ್ದಾರೆ.

ಕೊರೊನಾ ಕಾರಣದಿಂದ ಶಾಲೆ ಇಲ್ಲ. ಹೀಗಾಗಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೂ ತಮ್ಮ ಮನೆಯ ಮಹಡಿ ಮೇಲೆ ಮಕ್ಕಳಿಗೆ ಪಾಠ ಹೇಳಿಕೊಡುತ್ತಾರೆ. ಮಕ್ಕಳ ಹ್ಯಾಂಡ್ ರೈಟಿಂಗ್ ತಿದ್ದುತ್ತಾರೆ. ಕನ್ನಡ, ಇಂಗ್ಲಿಷ್ ಸೇರಿದಂತೆ ಎಲ್ಲಾ ವಿಷಯಗಳ ಪಾಠ ಮಾಡುತ್ತಾರೆ.

ಎಲ್ಲದಕ್ಕಿಂತ ಹೆಚ್ಚಾಗಿ ಮಕ್ಕಳಿಗೆ ಸಂಸ್ಕಾರದ ಬಗ್ಗೆ ಹೇಳಿ ಕೊಡುತ್ತಾರೆ. ಐದನೇ ತರಗತಿ ಬಳಿಕ ಅನೇಕ ಮಕ್ಕಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗೆ ಸೇರಿಸಿದ್ದಾರೆ. ಮಕ್ಕಳ ಪ್ರತಿಭೆ ಗುರುತಿಸಿ ಅವರನ್ನು ಭರತನಾಟ್ಯ, ಡ್ಯಾನ್ಸ್ ಕ್ಲಾಸ್‌ಗಳಿಗೂ ಸೇರಿಸಿದ್ದಾರೆ. ಎಲ್ಲಾ ಖರ್ಚುವೆಚ್ಚವೂ ಇವರದ್ದೇ.

ಹೀಗೆ ರೂಪಾ ಬಲ್ಲಾಳ್ ನೂರಾರು ಮಕ್ಕಳಿಗೆ ಪಾಠ ಹೇಳಿಕೊಟ್ಟಿದ್ದಾರೆ. ಅವರನ್ನು ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸಲು ಪ್ರಯತ್ನಪಟ್ಟಿದ್ದಾರೆ. ರೂಪಾ ಅವರದ್ದು highly qualified ಕುಟುಂಬ. ಇವರ ಇಬ್ಬರು ಮಕ್ಕಳೂ ವೈದ್ಯರು. ಒಬ್ಬರು ಅಮೆರಿಕದಲ್ಲಿದ್ರೆ, ಇನ್ನೊಬ್ಬರು ಮಣಿಪಾಲದಲ್ಲಿ ಎಂಡಿ ಆಗಿದ್ದಾರೆ. ಇಂಥ ಹಿನ್ನೆಲೆಯುಳ್ಳ ರೂಪ ಬಲ್ಲಾಳ್ ಕೊಳೆಗೇರಿ ಮಕ್ಕಳ ಆರೈಕೆಯಲ್ಲಿ ತೊಡಗಿರುವುದು ನಿಜಕ್ಕೂ ಶ್ಲಾಘನೀಯ.

Published On - 4:39 pm, Wed, 11 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!