AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಹಾಗಿರಲಿ, ಆಸ್ಪತ್ರೆ ಬಾಗಿಲನ್ನೂ ತೆರೆಯದೆ ಸಿಬ್ಬಂದಿ ಅಸಡ್ಡೆ: ಆಸ್ಪತ್ರೆ ಹೊರಗಡೆಯೇ ಮಗುವಿಗೆ ಜನ್ಮ ನೀಡಿದ ತಾಯಿ

ಹೆರಿಕೆ ನೋವು ಕಾಣಿಸಿಕೊಂಡಿದ್ದಕ್ಕೆ ಆಸ್ಪತ್ರೆಗೆ ದಾಖಲಾಗಲು ಬಂದ ಮಹಿಳೆಗೆ ಆಸ್ಪತ್ರೆ ಬಾಗಿಲು ತೆರೆಯದೆ ಸಿಬ್ಬಂದಿ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ.

ಚಿಕಿತ್ಸೆ ಹಾಗಿರಲಿ, ಆಸ್ಪತ್ರೆ ಬಾಗಿಲನ್ನೂ ತೆರೆಯದೆ ಸಿಬ್ಬಂದಿ ಅಸಡ್ಡೆ: ಆಸ್ಪತ್ರೆ ಹೊರಗಡೆಯೇ ಮಗುವಿಗೆ ಜನ್ಮ ನೀಡಿದ ತಾಯಿ
ಸಮುದಾಯ ಆರೋಗ್ಯ ಕೇಂದ್ರ
ಆಯೇಷಾ ಬಾನು
| Updated By: shruti hegde|

Updated on:Mar 03, 2021 | 10:17 AM

Share

ಕೊಪ್ಪಳ: ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಆಸ್ಪತ್ರೆ ಮುಂದೆಯೇ ತಾಯಿಯೊಬ್ಬರು ಮಗುವಿಗೆ ಜನ್ಮ ನೀಡಿದ ಮನ ಕಲಕುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ಬಳಿ ನಡೆದಿದೆ. ಹೆರಿಗೆ ನೋವು ಕಾಣಿಸಿಕೊಂಡಿದ್ದಕ್ಕೆ ಆಸ್ಪತ್ರೆಗೆ ದಾಖಲಾಗಲು ಬಂದ ಮಹಿಳೆಗೆ ಚಿಕಿತ್ಸೆ ಹಾಗಿರಲಿ, ಆಸ್ಪತ್ರೆಯ ಬಾಗಿಲು ಸಹ ತೆರೆಯದೆ ಸಿಬ್ಬಂದಿ ಅಸಡ್ಡೆ ತೋರಿದ್ದಾರೆ ಎಂದು ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ.

ಕನಕಗಿರಿ ತಾಲೂಕಿನ ಗೌರಿಪುರದ ಬೃಂದಾ ಎಂಬ ಮಹಿಳೆ ಹೆರಿಗೆ ನೋವಿನಿಂದ ಬೆಳಗಿನ ಜಾವ 6 ಗಂಟೆಗೆ ಆಸ್ಪತ್ರೆಗೆ ಬಂದಿದ್ದಾರೆ. ಆದ್ರೆ ಸಿಬ್ಬಂದಿ ಆಸ್ಪತ್ರೆ ಬಾಗಿಲು ತೆರೆಯದೆ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ ಯಾವೊಬ್ಬ ವೈದ್ಯ ಸಹ ಮಹಿಳೆಗೆ ಚಿಕಿತ್ಸೆ ನೀಡಲು ಮುಂದಾಗಿಲ್ಲ.

ಅದಾದ ಬಳಿಕ ಆಸ್ಪತ್ರೆಯ ಮುಂಭಾಗದಲ್ಲೇ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಗರ್ಭಿಣಿ ಜೊತೆ ಬಂದಿದ್ದ ಹಿರಿಯ ಮಹಿಳೆಯರೇ ಹೆರಿಗೆ ಮಾಡಿಸಿದ್ದು ಸದ್ಯ ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆಯ ಬೇಜವಾಬ್ದಾರಿತನಕ್ಕೆ ಕುಟುಂಬಸ್ಥರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಇಷ್ಟೆಲ್ಲ ಆದ ಬಳಿಕ ಆಸ್ಪತ್ರೆ ಸಿಬ್ಬಂದಿ ತಾಯಿ-ಮಗುವನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿದ್ದಾರೆ.  ಆದರೆ, ನೈಟ್ ಶಿಫ್ಟ್​ನಲ್ಲಿರುವ ವೈದ್ಯರನ್ನು ಅಮಾನತು ಮಾಡಿ, ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ DHO ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Woman give birth to baby outside of the hospital

ಆಸ್ಪತ್ರೆ ಸಿಬ್ಬಂದಿ ಜೊತೆ ಮಹಿಳೆ ಕುಟುಂಬಸ್ಥರ ಆಕ್ರೋಶ

ಇದನ್ನೂ ಓದಿ: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಬಲಿಯಾದ ಅಮಾಯಕ: ವೈದ್ಯರ ನಿರ್ಲಕ್ಷ್ಯಕ್ಕೆ ಸಂಬಂಧಿಕರ ಆಕ್ರೋಶ

Published On - 1:00 pm, Tue, 2 March 21

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ