AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯ ಜೀವ ಉಳಿಸಿದ್ದೇ.. ಆ ಒಂದು WhatsApp ವಿಡಿಯೋ ಕಾಲ್​!

ಹಾವೇರಿ: ಕೊರೊನಾ ಮಹಾಮಾರಿ ತಂದೊಡ್ಡಿರುವ ಸಂಕಷ್ಟದಲ್ಲಿ ಅತಿ ಹೆಚ್ಚು ತೊಂದರೆ ಅನುಭವಿಸುತ್ತಿರುವವರಲ್ಲಿ ಗರ್ಭಿಣಿಯರು ಸಹ ಒಬ್ಬರು. ಸೋಂಕಿನ ಭೀತಿಯಿಂದ ಆಸ್ಪತ್ರೆಗೆ ಹೋಗಲು ಹಲವು ಗರ್ಭಿಣಿಯರು ಹಿಂಜರಿಯುತ್ತಿದ್ದಾರೆ. ಈ ನಡುವೆ, ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ವಿಡಿಯೋ ಕಾಲ್​ ಮೂಲಕ ವೈದ್ಯರು ನೆರೆಮನೆಯ ಮಹಿಳೆಯರ ಸಹಾಯದಿಂದ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ಅಂದ ಹಾಗೆ, ಈ ಅದ್ಭುತ ಘಟನೆ ನಡೆದಿರೋದು ಜಿಲ್ಲೆಯ ಹಾನಗಲ್ ಪಟ್ಟಣದ ವೈದ್ಯರ ಓಣಿಯಲ್ಲಿ. ಅದು ಸಂಡೇ ಲಾಕ್​ಡೌನ್ ಸಮಯ. ಮಧ್ಯಾಹ್ನ ಎರಡೂವರೆ ಗಂಟೆಯ ಸಮಯ. […]

ಗರ್ಭಿಣಿಯ ಜೀವ ಉಳಿಸಿದ್ದೇ.. ಆ ಒಂದು WhatsApp ವಿಡಿಯೋ ಕಾಲ್​!
KUSHAL V
| Edited By: |

Updated on:Jul 30, 2020 | 3:14 PM

Share

ಹಾವೇರಿ: ಕೊರೊನಾ ಮಹಾಮಾರಿ ತಂದೊಡ್ಡಿರುವ ಸಂಕಷ್ಟದಲ್ಲಿ ಅತಿ ಹೆಚ್ಚು ತೊಂದರೆ ಅನುಭವಿಸುತ್ತಿರುವವರಲ್ಲಿ ಗರ್ಭಿಣಿಯರು ಸಹ ಒಬ್ಬರು. ಸೋಂಕಿನ ಭೀತಿಯಿಂದ ಆಸ್ಪತ್ರೆಗೆ ಹೋಗಲು ಹಲವು ಗರ್ಭಿಣಿಯರು ಹಿಂಜರಿಯುತ್ತಿದ್ದಾರೆ.

ಈ ನಡುವೆ, ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ವಿಡಿಯೋ ಕಾಲ್​ ಮೂಲಕ ವೈದ್ಯರು ನೆರೆಮನೆಯ ಮಹಿಳೆಯರ ಸಹಾಯದಿಂದ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ಅಂದ ಹಾಗೆ, ಈ ಅದ್ಭುತ ಘಟನೆ ನಡೆದಿರೋದು ಜಿಲ್ಲೆಯ ಹಾನಗಲ್ ಪಟ್ಟಣದ ವೈದ್ಯರ ಓಣಿಯಲ್ಲಿ.

ಅದು ಸಂಡೇ ಲಾಕ್​ಡೌನ್ ಸಮಯ. ಮಧ್ಯಾಹ್ನ ಎರಡೂವರೆ ಗಂಟೆಯ ಸಮಯ. ವೈದ್ಯರ ಓಣಿ ನಿವಾಸಿಯಾಗಿದ್ದ ತುಂಬು ಗರ್ಭಿಣಿ ವಾಸವಿ ಪತ್ತೇಪೂರಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಗರ್ಭಿಣಿಯ ಚೀರಾಟ ಕೇಳಿ ನೆರೆಮನೆಯ ಮಹಿಳೆಯರು ಆಕೆಯ ಬಳಿ ಜಮಾಯಿಸಿದ್ದರು. ತಾಲೂಕು ಆಸ್ಪತ್ರೆ ಸೇರಿದಂತೆ ಹಲವಾರು ಖಾಸಗಿ ಆಸ್ಪತ್ರೆಯವರನ್ನು ಸಹ ಸಂಪರ್ಕಿಸಲು ಪ್ರಯತ್ನಪಟ್ಟರು. ಆದರೆ, ಸಂಡೇ ಲಾಕ್​ಡೌನ್ ಆಗಿದ್ದರಿಂದ ಯಾರೂ ಸರಿಯಾಗಿ ಸ್ಪಂದಿಸಲಿಲ್ಲ.

ಗರ್ಭಿಣಿಯ ನೆರವಿಗೆ ಬಂದ ಡಾ. ಪ್ರಿಯಾಂಕಾ! ಕೊನೆಗೆ, ತಾವೇ ಹೆರಿಗೆ ಮಾಡಿಸುವ ತೀರ್ಮಾನ ಮಾಡಿದರು. ಆಗ ಅವರ ನೆರವಿಗೆ ಬಂದಿದ್ದು ಪಟ್ಟಣದ ನಿವಾಸಿ ಹಾಗೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿರೋ ವೈದ್ಯೆ ಡಾ‌. ಪ್ರಿಯಾಂಕಾ. WhatsApp ವಿಡಿಯೋ ಕಾಲ್ ಮೂಲಕ ಮಹಿಳೆಯರಿಗೆ ಸಲಹೆ ನೀಡಿದ ಡಾ. ಪ್ರಿಯಾಂಕಾರ ನೆರವಿನಿಂದ ಮಹಿಳೆಯರು ವಾಸವಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದರು. ನಂತರ ತಾಯಿ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ವಾಸವಿಗೆ ಗಂಡು ಮಗು ಜನಿಸಿದ್ದು, ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಒಟ್ನಲ್ಲಿ, ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯ ನೆರವಿಗೆ ಧಾವಿಸಿದ ಮಾನಿನಿಯರು ಹಾಗೂ ವೈದ್ಯೆ ಡಾ. ಪ್ರಿಯಾಂಕಾರ ನಿಸ್ವಾರ್ಥ ಕಾರ್ಯಕ್ಕೆ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ. -ಪ್ರಭುಗೌಡ.ಎನ್.ಪಾಟೀಲ

Published On - 6:39 pm, Tue, 28 July 20

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್