AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದ ಗಲಾಟೆ ಹಿಂದೆ ಲೇಡಿ ಡಾನ್ ಕೈವಾಡ, 54 ಜನರ ಬಂಧನ

ಬೆಂಗಳೂರು: ನಿನ್ನೆ ಪಾದರಾಯನಪುರದಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲೆಂದು ಕರೆದೊಯ್ಯಲು ಅಧಿಕಾರಿಗಳು ಬಂದಾಗ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ವಿಡಿಯೋ ಆಧರಿಸಿ 54 ಜನರನ್ನ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಕೆಲವರು ಸಿಕ್ಕಿಲ್ಲ, ಅವರನ್ನೂ ಹುಡುಕುತ್ತಿದ್ದೇವೆ. ಗಲಾಟೆ ಸಂಬಂಧ ಒಟ್ಟು 5 ಪ್ರಕರಣ ದಾಖಲಾಗಿದೆ. ಆರೋಗ್ಯ ಇಲಾಖೆಯಿಂದ ಒಂದು ದೂರು ಕೊಟ್ಟಿದ್ದಾರೆ. ಇನ್ನುಳಿದ ನಾಲ್ಕು ಪ್ರಕರಣಗಳು ಪೊಲೀಸರು ದಾಖಲಿಸಿದ್ದಾರೆ. ಶಂಕಿತರನ್ನು ಶಿಫ್ಟ್ ಮಾಡುವ ವೇಳೆ ಗಲಾಟೆ ಆಗಿತ್ತು. ಇದು ಪೂರ್ವನಿಯೋಜಿತ ಕೃತ್ಯನಾ ಎಂಬ ಬಗ್ಗೆ ತನಿಖೆ […]

ಪಾದರಾಯನಪುರದ ಗಲಾಟೆ ಹಿಂದೆ ಲೇಡಿ ಡಾನ್ ಕೈವಾಡ, 54 ಜನರ ಬಂಧನ
ಸಾಧು ಶ್ರೀನಾಥ್​
|

Updated on: Apr 20, 2020 | 8:01 AM

Share

ಬೆಂಗಳೂರು: ನಿನ್ನೆ ಪಾದರಾಯನಪುರದಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲೆಂದು ಕರೆದೊಯ್ಯಲು ಅಧಿಕಾರಿಗಳು ಬಂದಾಗ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ವಿಡಿಯೋ ಆಧರಿಸಿ 54 ಜನರನ್ನ ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಕೆಲವರು ಸಿಕ್ಕಿಲ್ಲ, ಅವರನ್ನೂ ಹುಡುಕುತ್ತಿದ್ದೇವೆ. ಗಲಾಟೆ ಸಂಬಂಧ ಒಟ್ಟು 5 ಪ್ರಕರಣ ದಾಖಲಾಗಿದೆ. ಆರೋಗ್ಯ ಇಲಾಖೆಯಿಂದ ಒಂದು ದೂರು ಕೊಟ್ಟಿದ್ದಾರೆ. ಇನ್ನುಳಿದ ನಾಲ್ಕು ಪ್ರಕರಣಗಳು ಪೊಲೀಸರು ದಾಖಲಿಸಿದ್ದಾರೆ. ಶಂಕಿತರನ್ನು ಶಿಫ್ಟ್ ಮಾಡುವ ವೇಳೆ ಗಲಾಟೆ ಆಗಿತ್ತು. ಇದು ಪೂರ್ವನಿಯೋಜಿತ ಕೃತ್ಯನಾ ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ. ಬಂಧಿತರಾಗಿರುವ ಕೆಲವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಗಲಾಟೆ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ.

ಬಂಧಿತ ಲೇಡಿ ಡಾನ್ ಯಾರು? ನಿನ್ನೆ ನಡೆದ ಗಲಾಟೆಯಲ್ಲಿ ಓರ್ವ ಮಹಿಳೆಯ ಕೈವಾಡವಿದೆ. ಬಂಧಿತ ಮಹಿಳೆ ಪರೋಜಾ ಅಲಿಯಾಸ್ ಲೇಡಿ ಡಾನ್. ಈಕೆ ಗಾಂಜಾ ಮಾರಟ ಮಾಡುತ್ತಿದ್ದಳು. ಘಟನೆ ವೇಳೆ ಮುಂದೆಯೇ ನಿಂತು ಗಲಾಟೆ ಮಾಡಿಸಿದ್ದಳು. ಯುವಕರು ಜಮಾವಣೆಯಾಗುವಂತೆ ಪ್ರಚೋದಿಸಿದ್ದಳು. ಹುಡುಗರನ್ನು ಕರೆಸಿದ್ದಳು ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಫರೋಜಾ ಅಲಿಯಾಸ್ ಲೇಡಿ ಡಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಆಕೆ ನೀಡಿದ್ದ ಮಾಹಿತಿ ಆಧರಿಸಿ ಜೆ.ಜೆ.ನಗರ ಪೊಲೀಸರು 20 ಜನರನ್ನು ವಶಕ್ಕೆ ಪಡೆದಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ