AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದ ಗಲಾಟೆ ಹಿಂದೆ ಲೇಡಿ ಡಾನ್ ಕೈವಾಡ, 54 ಜನರ ಬಂಧನ

ಬೆಂಗಳೂರು: ನಿನ್ನೆ ಪಾದರಾಯನಪುರದಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲೆಂದು ಕರೆದೊಯ್ಯಲು ಅಧಿಕಾರಿಗಳು ಬಂದಾಗ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ವಿಡಿಯೋ ಆಧರಿಸಿ 54 ಜನರನ್ನ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಕೆಲವರು ಸಿಕ್ಕಿಲ್ಲ, ಅವರನ್ನೂ ಹುಡುಕುತ್ತಿದ್ದೇವೆ. ಗಲಾಟೆ ಸಂಬಂಧ ಒಟ್ಟು 5 ಪ್ರಕರಣ ದಾಖಲಾಗಿದೆ. ಆರೋಗ್ಯ ಇಲಾಖೆಯಿಂದ ಒಂದು ದೂರು ಕೊಟ್ಟಿದ್ದಾರೆ. ಇನ್ನುಳಿದ ನಾಲ್ಕು ಪ್ರಕರಣಗಳು ಪೊಲೀಸರು ದಾಖಲಿಸಿದ್ದಾರೆ. ಶಂಕಿತರನ್ನು ಶಿಫ್ಟ್ ಮಾಡುವ ವೇಳೆ ಗಲಾಟೆ ಆಗಿತ್ತು. ಇದು ಪೂರ್ವನಿಯೋಜಿತ ಕೃತ್ಯನಾ ಎಂಬ ಬಗ್ಗೆ ತನಿಖೆ […]

ಪಾದರಾಯನಪುರದ ಗಲಾಟೆ ಹಿಂದೆ ಲೇಡಿ ಡಾನ್ ಕೈವಾಡ, 54 ಜನರ ಬಂಧನ
ಸಾಧು ಶ್ರೀನಾಥ್​
|

Updated on: Apr 20, 2020 | 8:01 AM

Share

ಬೆಂಗಳೂರು: ನಿನ್ನೆ ಪಾದರಾಯನಪುರದಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲೆಂದು ಕರೆದೊಯ್ಯಲು ಅಧಿಕಾರಿಗಳು ಬಂದಾಗ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ವಿಡಿಯೋ ಆಧರಿಸಿ 54 ಜನರನ್ನ ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಕೆಲವರು ಸಿಕ್ಕಿಲ್ಲ, ಅವರನ್ನೂ ಹುಡುಕುತ್ತಿದ್ದೇವೆ. ಗಲಾಟೆ ಸಂಬಂಧ ಒಟ್ಟು 5 ಪ್ರಕರಣ ದಾಖಲಾಗಿದೆ. ಆರೋಗ್ಯ ಇಲಾಖೆಯಿಂದ ಒಂದು ದೂರು ಕೊಟ್ಟಿದ್ದಾರೆ. ಇನ್ನುಳಿದ ನಾಲ್ಕು ಪ್ರಕರಣಗಳು ಪೊಲೀಸರು ದಾಖಲಿಸಿದ್ದಾರೆ. ಶಂಕಿತರನ್ನು ಶಿಫ್ಟ್ ಮಾಡುವ ವೇಳೆ ಗಲಾಟೆ ಆಗಿತ್ತು. ಇದು ಪೂರ್ವನಿಯೋಜಿತ ಕೃತ್ಯನಾ ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ. ಬಂಧಿತರಾಗಿರುವ ಕೆಲವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಗಲಾಟೆ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ.

ಬಂಧಿತ ಲೇಡಿ ಡಾನ್ ಯಾರು? ನಿನ್ನೆ ನಡೆದ ಗಲಾಟೆಯಲ್ಲಿ ಓರ್ವ ಮಹಿಳೆಯ ಕೈವಾಡವಿದೆ. ಬಂಧಿತ ಮಹಿಳೆ ಪರೋಜಾ ಅಲಿಯಾಸ್ ಲೇಡಿ ಡಾನ್. ಈಕೆ ಗಾಂಜಾ ಮಾರಟ ಮಾಡುತ್ತಿದ್ದಳು. ಘಟನೆ ವೇಳೆ ಮುಂದೆಯೇ ನಿಂತು ಗಲಾಟೆ ಮಾಡಿಸಿದ್ದಳು. ಯುವಕರು ಜಮಾವಣೆಯಾಗುವಂತೆ ಪ್ರಚೋದಿಸಿದ್ದಳು. ಹುಡುಗರನ್ನು ಕರೆಸಿದ್ದಳು ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಫರೋಜಾ ಅಲಿಯಾಸ್ ಲೇಡಿ ಡಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಆಕೆ ನೀಡಿದ್ದ ಮಾಹಿತಿ ಆಧರಿಸಿ ಜೆ.ಜೆ.ನಗರ ಪೊಲೀಸರು 20 ಜನರನ್ನು ವಶಕ್ಕೆ ಪಡೆದಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ