ಹಸುಗೂಸನ್ನ ನೀರಿನಲ್ಲಿ ಮುಳುಗಿಸಿ ಮಹಿಳೆ ನೇಣಿಗೆ ಶರಣು, ಎಲ್ಲಿ?

ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ಒಬ್ಬ ಮಹಿಳೆ ತನ್ನ ಹಸುಗೂಸನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ತಾನೂ ಕೂಡ ನೇಣಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋನಪೂರ ಪೇಟೆಯ 7ನೇ ವಾರ್ಡನಲ್ಲಿ ಈ ಘಟನೆ ಸಂಭವಿಸಿದ್ದು, ಹರನಹಳ್ಳಿ ಜಾನಕಿ ನೇಣಿಗೆ ಶರಣಾಗಿರುವ ಮಹಿಳೆ ಎಂಬುದು ತಿಳಿದುಬಂದಿದೆ. ಮೃತ ಜಾನಕಿ ತನ್ನ ಐದು ವರ್ಷದ ಮಗು ರಾಘವೇಂದ್ರನನ್ನು ನೀರಿನಲ್ಲಿ ಮುಳುಗಿಸಿ ಕೊಂದು, ನಂತರ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ […]

ಹಸುಗೂಸನ್ನ ನೀರಿನಲ್ಲಿ ಮುಳುಗಿಸಿ ಮಹಿಳೆ ನೇಣಿಗೆ ಶರಣು, ಎಲ್ಲಿ?
ಸಾಧು ಶ್ರೀನಾಥ್​

Updated on: Aug 07, 2020 | 1:33 PM

ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ಒಬ್ಬ ಮಹಿಳೆ ತನ್ನ ಹಸುಗೂಸನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ತಾನೂ ಕೂಡ ನೇಣಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋನಪೂರ ಪೇಟೆಯ 7ನೇ ವಾರ್ಡನಲ್ಲಿ ಈ ಘಟನೆ ಸಂಭವಿಸಿದ್ದು, ಹರನಹಳ್ಳಿ ಜಾನಕಿ ನೇಣಿಗೆ ಶರಣಾಗಿರುವ ಮಹಿಳೆ ಎಂಬುದು ತಿಳಿದುಬಂದಿದೆ.

ಮೃತ ಜಾನಕಿ ತನ್ನ ಐದು ವರ್ಷದ ಮಗು ರಾಘವೇಂದ್ರನನ್ನು ನೀರಿನಲ್ಲಿ ಮುಳುಗಿಸಿ ಕೊಂದು, ನಂತರ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಮನಕುಲಕುವ ಘಟನೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದೆಂದು ಶಂಕಿಸಲಾಗಿದೆ. ಸದ್ಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us