AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸು ವಹಿವಾಟು, ಅಕ್ರಮ ಸಂಬಂಧ ಶಂಕೆ: ಮಹಿಳೆಯ ಕೊಲೆಗೈದು ಅವಿವಾಹಿತ ಆತ್ಮಹತ್ಯೆ

ದಕ್ಷಿಣ ಕನ್ನಡ: ಜಿಲ್ಲೆಯ ಸುರತ್ಕಲ್ ಬಳಿ ಮಹಿಳೆಯೊಬ್ಬಳನ್ನು ಹತ್ಯೆಗೈದು ನಂತರ ಅವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಹಣಕಾಸು ವಹಿವಾಟು ಹಾಗೂ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸುರತ್ಕಲ್ ಬಳಿಯ ಮುಕ್ಕದ ಬಾಡಿಗೆ ಮನೆಯಲ್ಲಿ ಕೃತ್ಯ ‌ನಡೆದಿದೆ. ರೇಖಾ ಭಂಡಾರಿ(36) ಎಂಬುವವರನ್ನು ಕೊಲೆಗೈದು ವಸಂತ್ (42) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸಂತ್ ಸುರತ್ಕಲ್ ಪೇಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದ. ಮೃತ ಮಹಿಳೆ ರೇಖಾ ಕಾಟಿಪಳ್ಳ ನಿವಾಸಿ ಅಶೋಕ್ ಭಂಡಾರಿ ಪತ್ನಿ. ರೇಖಾಳ […]

ಹಣಕಾಸು ವಹಿವಾಟು, ಅಕ್ರಮ ಸಂಬಂಧ ಶಂಕೆ: ಮಹಿಳೆಯ ಕೊಲೆಗೈದು ಅವಿವಾಹಿತ ಆತ್ಮಹತ್ಯೆ
KUSHAL V
| Edited By: |

Updated on: Nov 19, 2020 | 2:26 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಸುರತ್ಕಲ್ ಬಳಿ ಮಹಿಳೆಯೊಬ್ಬಳನ್ನು ಹತ್ಯೆಗೈದು ನಂತರ ಅವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಹಣಕಾಸು ವಹಿವಾಟು ಹಾಗೂ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸುರತ್ಕಲ್ ಬಳಿಯ ಮುಕ್ಕದ ಬಾಡಿಗೆ ಮನೆಯಲ್ಲಿ ಕೃತ್ಯ ‌ನಡೆದಿದೆ. ರೇಖಾ ಭಂಡಾರಿ(36) ಎಂಬುವವರನ್ನು ಕೊಲೆಗೈದು ವಸಂತ್ (42) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸಂತ್ ಸುರತ್ಕಲ್ ಪೇಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದ. ಮೃತ ಮಹಿಳೆ ರೇಖಾ ಕಾಟಿಪಳ್ಳ ನಿವಾಸಿ ಅಶೋಕ್ ಭಂಡಾರಿ ಪತ್ನಿ.

ರೇಖಾಳ ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ವಸಂತ್ 11 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ. ರೇಖಾ ತನ್ನ ಮಗಳನ್ನು ಮನೆಗೆ ಬಿಟ್ಟು ನ.17ರಂದು ವಸಂತ್ ಜೊತೆ ಬಂದಿದ್ದಳು. ಈ ವೇಳೆ ವಸಂತ್​ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ರೇಖಾ ಮತ್ತು ವಸಂತನಿಗೆ ಹತ್ತು ವರ್ಷಗಳಿಂದ ಪರಿಚಯವಿತ್ತು ಎಂದು ಹೇಳಲಾಗಿದೆ. ಬಹಳಷ್ಟು ಸಾಲ ಮಾಡಿಕೊಂಡಿದ್ದ ವಸಂತ್ ರೇಖಾಳಿಂದ ಹಣ ಪಡೆದಿದ್ದನು ಎಂದು ಹೇಳಲಾಗಿದೆ. ಹಾಗಾಗಿ, ಹಣ ವಾಪಸ್ ಕೇಳಿದ ಕಾರಣಕ್ಕೆ ರೇಖಾಳ ಹತ್ಯೆಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ