AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶವ ಬೇಕು ಅಂದರೆ 4 ಲಕ್ಷ ಬಿಲ್ ಕಟ್ಟಬೇಕಂತೆ, ತಾಯಿ ಶವ ಪಡೆಯಲು ಮಗನ ಕಣ್ಣೀರು.

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ಖಾಸಗಿ ಆಸ್ಪತ್ರೆಗಳ ಅಮಾನವೀಯ ವರ್ತನೆ ಮುಂದುವರೆದಿದ್ದು, ಮೃತ ತಾಯಿಯ ಶವ ಪಡೆಯಲು ಆಸ್ಪತ್ರೆ ಮುಂದೆ ಮಗ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ತಿಂಗಳು ಅಂದ್ರೆ ಜುಲೈ 22ನೇ ತಾರೀಕಿನಂದು ಮಹಿಳೆಯೊಬ್ಬರು ಗ್ಯಾಸ್ಟ್ರಿಕ್ ಮತ್ತು ಥೈರಾಯಿಡ್ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಕೆಯ ಮಗ ನಾಲ್ಕೈದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಯಾವುದೇ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಹೀಗಾಗಿ ಆಸ್ಪತ್ರೆಯಲ್ಲಿ ಬೆಡ್ ಬೇಕು ಅಂದರೆ 20 ಸಾವಿರ ರುಪಾಯಿ ಹಣ ಕೊಡಬೇಕು ಅಂತ […]

ಶವ ಬೇಕು ಅಂದರೆ 4 ಲಕ್ಷ ಬಿಲ್ ಕಟ್ಟಬೇಕಂತೆ, ತಾಯಿ ಶವ ಪಡೆಯಲು ಮಗನ ಕಣ್ಣೀರು.
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Aug 02, 2020 | 1:21 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ಖಾಸಗಿ ಆಸ್ಪತ್ರೆಗಳ ಅಮಾನವೀಯ ವರ್ತನೆ ಮುಂದುವರೆದಿದ್ದು, ಮೃತ ತಾಯಿಯ ಶವ ಪಡೆಯಲು ಆಸ್ಪತ್ರೆ ಮುಂದೆ ಮಗ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಳೆದ ತಿಂಗಳು ಅಂದ್ರೆ ಜುಲೈ 22ನೇ ತಾರೀಕಿನಂದು ಮಹಿಳೆಯೊಬ್ಬರು ಗ್ಯಾಸ್ಟ್ರಿಕ್ ಮತ್ತು ಥೈರಾಯಿಡ್ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಕೆಯ ಮಗ ನಾಲ್ಕೈದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಯಾವುದೇ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಹೀಗಾಗಿ ಆಸ್ಪತ್ರೆಯಲ್ಲಿ ಬೆಡ್ ಬೇಕು ಅಂದರೆ 20 ಸಾವಿರ ರುಪಾಯಿ ಹಣ ಕೊಡಬೇಕು ಅಂತ ಬ್ರೋಕರ್​ರೊಬ್ಬ ಹಣವನ್ನು ಪಡೆದುಕೊಂಡಿದ್ದಾನೆ. ಕೊನೆಗೆ ಕೋಣನಕುಂಟೆಯ ಕ್ಯೂರ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಿದ್ದಾರೆ.

27 ನೇ ತಾರೀಖಿನಂದು ಖಾಸಗಿ ಲ್ಯಾಬ್ ನಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದೇವೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಆದರೆ ಲ್ಯಾಬ್ ಎಲ್ಲಿದೆ ಎಂದು ಮಹಿಳೆಯ ಮಗ ಹುಡುಕಿಕೊಂಡು ಹೋಗಿದ್ದಾರೆ. ಅಲ್ಲಿ ಆ ಹೆಸರಿನ ಯಾವುದೇ ಲ್ಯಾಬ್ ಇರದಿದ್ದನ್ನು ಕಂಡ ಮಗ ಬಿಬಿಎಂಪಿ ಆಫೀಸಿಗೆ ಹೋಗಿ ಇದರ ಬಗ್ಗೆ ವಿಚಾರಣೆ ಮಾಡಿದ್ದಾರೆ. ಆದರೆ ಬಿಬಿಎಂಪಿ ಸಿಬ್ಬಂದಿಗಳು ನಿಮ್ಮ ತಾಯಿ ಯಾವುದೇ ರಿಪೋರ್ಟ್ ಬಂದಿಲ್ಲವೆಂದು ವಾಪಸ್ ಕಳಿಸಿದ್ದಾರೆ.

ಈಗ 29 ನೇ ತಾರೀಖಿನಂದು ಬೊಮ್ಮನಹಳ್ಳಿಯ ಬಿಬಿಎಂಪಿ ಆಫೀಸಿಗೆ ಹೋಗಿ ರಿಪೋರ್ಟ್ ಚೆಕ್ ಮಾಡಿಸಿದಾಗ ಮಹಿಳೆಗೆ ಕೊರೊನಾ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಆದರೆ ಇಂದು ಬೆಳಿಗ್ಗೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಆಸ್ಪತ್ರೆಯ ಸಿಬ್ಬಂದಿಗಳು ಉಳಿದ ಬಿಲ್ ಪಾವತಿ ಮಾಡದಿದ್ದರೆ ಮಹಿಳೆಯ ಶವವನ್ನು ಕೊಡುವುದಿಲ್ಲವೆಂದಿದ್ದಾರೆ.

ಈಗಾಗಲೇ 3 ಲಕ್ಷ ಹಣವನ್ನು ಪಾವತಿಸಿರುವ ಮಹಿಳೆಯ ಮಗ, ಉಳಿದ ಹಣವನ್ನು ಕಟ್ಟಲಾಗದೆ ಆಸ್ಪತ್ರೆ ಮುಂದೆ ಕಣ್ಣೀರಿಟ್ಟ ದೃಶ್ಯ ಅಲ್ಲಿದ್ದವರ ಮನಕಲಕುವಂತಿತ್ತು.

Published On - 1:09 pm, Sun, 2 August 20

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ