AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದುವೆಯಾದ ಗಂಡ ನಾಪತ್ತೆ: ಅನಾಥ ಪ್ರಜ್ಞೆ ಅನುಭವಿಸುತ್ತಿರುವ ಪತ್ನಿ

ಫೇಸ್​ಬುಕ್​ನಲ್ಲಿ ಪರಿಚಿತನಾಗಿದ್ದ ಸುಳ್ಯದ ಇಬ್ರಾಹಿಂ ಖಲೀಲ್ ಎಂಬಾತನನ್ನು ಪ್ರೀತಿಸಿದ್ದ ಶಾಂತಿ, ಮೊದಲ ಪತಿಯನ್ನು ತೊರೆದಿದ್ದರು. ಮದುವೆಗೂ ಮುನ್ನ ಇಸ್ಲಾಂಗೆ ಮತಾಂತರವಾಗಿ, ಜೂಬಿ ಆಸಿಯಾ ಎಂದು ಹೆಸರು ಬದಲಿಸಿಕೊಂಡರು. 2017ರಲ್ಲಿ ಮುಸ್ಲಿಂ ಸಂಪ್ರದಾಯದಂತೆ ನಿಖಾ ಆಗಿದ್ದರು.

ಪ್ರೀತಿಸಿ ಮದುವೆಯಾದ ಗಂಡ ನಾಪತ್ತೆ: ಅನಾಥ ಪ್ರಜ್ಞೆ ಅನುಭವಿಸುತ್ತಿರುವ ಪತ್ನಿ
ಇಬ್ರಾಹಿಂ ಖಲೀಲ್ - ಆಸಿಯಾ
guruganesh bhat
| Edited By: |

Updated on:Nov 26, 2020 | 4:09 PM

Share

ದಕ್ಷಿಣ ಕನ್ನಡ: ಪ್ರೀತಿಸಿ ಮದುವೆಯಾಗಿದ್ದ ಗಂಡ ಕೈಬಿಟ್ಟ ಕಾರಣ ಕೇರಳ ರಾಜ್ಯದ ಕಣ್ಣೂರು ಮೂಲದ ಯುವತಿ ಅಕ್ಷರಶಃ ಅನಾಥ ಪ್ರಜ್ಞೆ ಅನುಭವಿಸುತ್ತಿದ್ದಾರೆ. ಇತ್ತ ಗಂಡನ ಮನೆಯಿಂದ ಹೊರದೂಡಿಸಿಕೊಂಡು, ಅತ್ತ ತವರು ಮನೆಗೂ ಹೋಗಲು ಸಾಧ್ಯವಾಗದೆ ಸುಳ್ಯ ಪಟ್ಟಣದ ಲಾಡ್ಜ್​ನಲ್ಲಿ ದಿನದೂಡುತ್ತಿದ್ದಾರೆ.

ಫೇಸ್​ಬುಕ್​ನಲ್ಲಿ ಪರಿಚಿತನಾಗಿದ್ದ ಸುಳ್ಯದ ಇಬ್ರಾಹಿಂ ಖಲೀಲ್ ಎಂಬಾತನನ್ನು ಪ್ರೀತಿಸಿದ್ದ ಶಾಂತಿ, ಮೊದಲ ಪತಿಯನ್ನು ತೊರೆದಿದ್ದರು. ಮದುವೆಗೂ ಮುನ್ನ ಇಸ್ಲಾಂಗೆ ಮತಾಂತರವಾಗಿ, ಜೂಬಿ ಆಸಿಯಾ ಎಂದು ಹೆಸರು ಬದಲಿಸಿಕೊಂಡರು. 2017ರಲ್ಲಿ ಮುಸ್ಲಿಂ ಸಂಪ್ರದಾಯದಂತೆ ನಿಖಾ ಆಗಿದ್ದರು.

ಮದುವೆಯಾದ ಮೂರು ವರ್ಷಗಳ ನಂತರ ಇಬ್ರಾಹಿಂ ಏಕಾಏಕಿ ಮನೆಯಿಂದ ನಾಪತ್ತೆಯಾದ. ಅನಂತರ ಇಬ್ರಾಹಿಂ ಮನೆಯವರು ಆಸಿಯಾಳನ್ನು ಮನೆಯಿಂದ ಹೊರಗೆ ಹಾಕಿದರು. ಅತ್ತ ಆಸಿಯಾ ತವರಿಗೂ ಹೋಗಲು ಆಗದೆ, ಇತ್ತ ಅತ್ತೆ ಮನೆಯಲ್ಲೂ ಬದುಕಲು ಅವಕಾಶ ಸಿಗದೆ ಅಸಿಯಾ ಇದೀಗ ಅಸಹಾಯಕ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಇಬ್ರಾಹಿಂನನ್ನು ಹುಡುಕಿಕೊಡುವಂತೆ ಮುಸ್ಲಿಂ ನಾಯಕರಲ್ಲಿ ವಿನಂತಿಸಿದರೂ ಪ್ರಯೋಜನವಾಗಿಲ್ಲ. ಕೊನೇ ಪ್ರಯತ್ನವೆಂಬಂತೆ ಈಗ ಮಾನವ ಹಕ್ಕು ಸಂಘಟನೆಯ ಮೊರೆಹೋಗಿದ್ದೇನೆ. ಶುಕ್ರವಾರದವರೆಗೆ ಕಾಯುತ್ತೇನೆ. ಗಂಡನ ಸುಳಿವು ಸಿಗದಿದ್ದರೆ ಆತ್ಮಹತ್ಯೆಯ ಹಾದಿ ಹಿಡಿಯುತ್ತೇನೆ ಎಂದು ಅಸಿಯಾ ಟಿವಿ9 ಪ್ರತಿನಿಧಿ ಎದುರು ಅಳಲು ತೋಡಿಕೊಂಡರು.

Published On - 12:09 pm, Thu, 26 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ