AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಜಾನೆಗೆ ನಾವು ಹಣ ತುಂಬುತ್ತೇವೆ, ಆದರೆ ಮೊದ್ಲು ಮದ್ಯ ನಿಷೇಧಿಸಿ’

ಧಾರವಾಡದ ಮಹಿಳಾ ಲೋಕ ರಾಜ್ಯ ಸರ್ಕಾರಕ್ಕೆ ಬೊಂಬಾಟ್ ಸರ್ಕಾರಿ ಸವಾಲ್ ಎಸೆದಿದೆ. ಇದುವರೆಗೂ ಯಾರೂ ಹೀಗೆ ಛಲ/ಹಠಕ್ಕೆ ಬಿದ್ದು ಸರ್ಕಾರಕ್ಕೆ ಸವಾಲ್ ಹಾಕಿರಲಿಲ್ಲ. ಏನಾಯಿತೆಂದ್ರೆ ಒಂದೂವರೆ ತಿಂಗಳ ಲಾಕ್ ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿತ್ತು. ಈ ವೇಳೆ ಲಕ್ಷಾಂತರ ‌ಮದ್ಯ ವ್ಯಸನಿಗಳು ಚಟದಿಂದ ಮುಕ್ತರಾಗಿ, ತಾವು ಕೂಡ ಮದ್ಯವಿಲ್ಲದೇ ಬದುಕಬಹುದು ಅನ್ನೋದನ್ನು ಮನಗಂಡಿದ್ದರು. ಇದರಿಂದಾಗಿ ಅವರವರ ಮನೆಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಿತ್ತು. ಈ ದಿನಗಳಲ್ಲಿ ಮಹಿಳೆಯರು, ಮಕ್ಕಳು ಹಿಂಸೆಯಲ್ಲದ ದಿನಗಳನ್ನು ಕಾಣಲು ಸಾಧ್ಯವಾಗಿತ್ತು. ಆದರೆ […]

‘ಖಜಾನೆಗೆ ನಾವು ಹಣ ತುಂಬುತ್ತೇವೆ, ಆದರೆ ಮೊದ್ಲು ಮದ್ಯ ನಿಷೇಧಿಸಿ’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 22, 2020 | 4:10 PM

Share

ಧಾರವಾಡದ ಮಹಿಳಾ ಲೋಕ ರಾಜ್ಯ ಸರ್ಕಾರಕ್ಕೆ ಬೊಂಬಾಟ್ ಸರ್ಕಾರಿ ಸವಾಲ್ ಎಸೆದಿದೆ. ಇದುವರೆಗೂ ಯಾರೂ ಹೀಗೆ ಛಲ/ಹಠಕ್ಕೆ ಬಿದ್ದು ಸರ್ಕಾರಕ್ಕೆ ಸವಾಲ್ ಹಾಕಿರಲಿಲ್ಲ. ಏನಾಯಿತೆಂದ್ರೆ ಒಂದೂವರೆ ತಿಂಗಳ ಲಾಕ್ ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿತ್ತು. ಈ ವೇಳೆ ಲಕ್ಷಾಂತರ ‌ಮದ್ಯ ವ್ಯಸನಿಗಳು ಚಟದಿಂದ ಮುಕ್ತರಾಗಿ, ತಾವು ಕೂಡ ಮದ್ಯವಿಲ್ಲದೇ ಬದುಕಬಹುದು ಅನ್ನೋದನ್ನು ಮನಗಂಡಿದ್ದರು. ಇದರಿಂದಾಗಿ ಅವರವರ ಮನೆಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಿತ್ತು. ಈ ದಿನಗಳಲ್ಲಿ ಮಹಿಳೆಯರು, ಮಕ್ಕಳು ಹಿಂಸೆಯಲ್ಲದ ದಿನಗಳನ್ನು ಕಾಣಲು ಸಾಧ್ಯವಾಗಿತ್ತು.

ಆದರೆ ಸರಕಾರ ಮತ್ತೆ ಮದ್ಯ ಮಾರಾಟಕ್ಕೆ ಅನುಮತಿ ನೀಡುತ್ತಿದ್ದಂತೆಯೇ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಏಕೆಂದರೆ ಎಷ್ಟೋ ಮದ್ಯವ್ಯಸನಿಗಳು ಈ ದುಶ್ಚಟದಿಂದ ದೂರವಾಗಿ ನೆಮ್ಮದಿಯ ಬದುಕನ್ನು ಕಂಡುಕೊಂಡಾಗ ಮತ್ತೆ ಮದ್ಯ ಮಾರಾಟ ಆರಂಭವಾದರೆ ಮತ್ತೆ ಅವರು ದುಶ್ಚಟದ ದಾಸರಾಗುತ್ತಾರೆ ಅನ್ನೋದೇ ಈ ವಿರೋಧಕ್ಕೆ ಕಾರಣವಾಗಿತ್ತು. ಆದರೆ ಸರಕಾರ ಇದ್ಯಾವುದರ ಬಗ್ಗೆ ತಲೆನಕೆಡಿಸಿಕೊಳ್ಳದೇ ಮತ್ತೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿತು.

ಆದಾಯದ ನೆಪ ಹೇಳಿ ಹೀಗೆ ಮದ್ಯ ಮಾರಾಟ ಆರಂಭಿಸಿದ ಸರಕಾರದ ವಿರುದ್ಧ ಇದೀಗ ಧಾರವಾಡದಲ್ಲಿ ಹೊಸ ಬಗೆಯ ಅಭಿಯಾನ ಆರಂಭವಾಗಿದೆ. ಒಂದೆಡೆ ಉದ್ಯೋಗ ಇಲ್ಲ, ಕೂಲಿ ಇಲ್ಲ, ಕೈಯಲ್ಲಿ ಹಣ ಇಲ್ಲ. ಮದ್ಯ ವ್ಯಸನಿಗಳು ಮನೆಯಲ್ಲಿದ್ದ ಅಳಿದುಳಿದ ಸಾಮಾನುಗಳನ್ನೆಲ್ಲ ಮದ್ಯದ ಅಂಗಡಿಗಳಿಗೆ ಅಡವು ಇಡುತ್ತಿದ್ದಾರೆ.

ಆಹಾರ ಭದ್ರತೆಗಾಗಿ‌ ನೀಡಿದ ಆಹಾರ ಧಾನ್ಯ, ಜೀವನ ನಿರ್ವಹಣೆಗಾಗಿ ಜನ ಧನ್- ಕಾರ್ಮಿಕ ಕಾರ್ಡುಗಳಿಗೆ ಜಮಾ ಆದ ಹಣವೆಲ್ಲ ಮದ್ಯದ ಅಂಗಡಿಗಳ ಮೂಲಕ ಸರಕಾರದ ಖಜಾನೆ ಸೇರುತ್ತಿದೆ ಅಂತಾ ಆರೋಪಿಸಿರೋ ಧಾರವಾಡದ ಮದ್ಯ ನಿಷೇಧ ಆಂದೋಲನ ಸದಸ್ಯರು ಸರಕಾರಕ್ಕೆ ಮದ್ಯದ ಬದಲು ತಾವೇ ಆದಾಯವನ್ನು ತಂದು ಕೊಡುತ್ತೇವೆ ಅಂತಾ ವಿನೂತನವಗಾಗಿ ಪ್ರತಿಭಟನೆ ನಡೆಸಿದರು.

ಆದಾಯಕ್ಕಾಗಿ ಬಾಯ್ಬಿಡುತ್ತಿರುವ ಸರಕಾರಕ್ಕೆ ನಾವೇ ಹಣ ಕಟ್ಟುತ್ತೇವೆ. ಆದ್ರೆ..

ಧಾರವಾಡ ನಗರದ ಮುರಘಾಮಠ ಹತ್ತಿರದ‌ ಪೋಸ್ಟ್ ಆಫೀಸ್‌ ಬಳಿ ವಿನೂತನ ಪ್ರತಿಭಟನೆ ನಡೆಸಿದ ಸದಸ್ಯರು, ರಾಜ್ಯ ಸರಕಾರಕ್ಕೆ ಹಣ ತುಂಬೋ ಮೂಲಕ ವಿನೂತನವಾಗಿ ಪ್ರತಿಭಟಿಸಿದರು. “ಆದಾಯಕ್ಕಾಗಿ ಹಾತೊರೆಯುತ್ತಿರುವ ಸರಕಾರದ ಖಜಾನೆಗೆ ನಾವು ಹಣ ತುಂಬುತ್ತೇವೆ. ಆದರೆ ಮದ್ಯ ನಿಷೇಧ ಮಾಡಿ ನಮಗೆ ಬದುಕಲು ಅವಕಾಶ ಮಾಡಿಕೊಡಿ” ಎಂದು ಸರಕಾರಕ್ಕೆ ಸಂದೇಶ ರವಾನೆ ಮಾಡಿದರು.

ಮಹಿಳೆಯರು ಮುಖ್ಯಮಂತ್ರಿಗಳಿಗೆ 10, 20 ರೂಪಾಯಿಗಳನ್ನು ಮನಿ‌ ಆರ್ಡರ್ ಮಾಡಿ, ಗಮನ ಸೆಳೆದರು. ಈ ಅಂದೋಲನದಲ್ಲಿ ಬಸವರಾಜ ಜಾಧವ, ಗೌರಮ್ಮ ನಾಡಗೌಡರ, ಮಾದೇವಿ ಬ್ಯಾಳಿ, ಶಶಿಕಲಾ ಚಿಕ್ಕಮಠ, ಶಾರದಾ ಬಳ್ಳೊರ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು -ನರಸಿಂಹಮೂರ್ತಿ ಪ್ಯಾಟಿ.

Published On - 4:08 pm, Fri, 22 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ