ಸಿಎಂ BSY ತವರೂರಲ್ಲಿ ಭೀಕರ ಅಪಘಾತ: ಹಬ್ಬಕ್ಕೆ ಸಾಮಗ್ರಿ ಕೊಳ್ಳಲು ಬಂದ ಮಹಿಳೆ ಸ್ಥಳದಲ್ಲೇ ಸಾವು
ಮಂಡ್ಯ: ಹಬ್ಬಕ್ಕೆ ಸಾಮಗ್ರಿ ಕೊಳ್ಳಲು ಬಂದಿದ್ದ ಮಹಿಳೆ ಮೇಲೆ ಕಲ್ಲು ಸಾಗಿಸೋ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ KR ಪೇಟೆ ತಾಲೂಕಿನಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪರ ತವರೂರಾದ ಬೂಕನಕೆರೆಯಲ್ಲಿ ನಡೆದಿದೆ. KR ಪೇಟೆ ತಾಲೂಕಿನ ಚೋಕನಹಳ್ಳಿ ಗ್ರಾಮದ ಜ್ಯೋತಿ ಮೃತ ಮಹಿಳೆ ಎಂದು ತಿಳಿದುಬಂದಿದೆ. ಜ್ಯೋತಿ ಇಂದು ಮಧ್ಯಾಹ್ನ ಹಬ್ಬದ ಸಾಮಗ್ರಿಗಳನ್ನು ಖರೀದಿಸಲು ಚೋಕನಹಳ್ಳಿಯಿಂದ ಬೂಕನಕೆರೆಗೆ ಬಂದಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. […]

ಮಂಡ್ಯ: ಹಬ್ಬಕ್ಕೆ ಸಾಮಗ್ರಿ ಕೊಳ್ಳಲು ಬಂದಿದ್ದ ಮಹಿಳೆ ಮೇಲೆ ಕಲ್ಲು ಸಾಗಿಸೋ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ KR ಪೇಟೆ ತಾಲೂಕಿನಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪರ ತವರೂರಾದ ಬೂಕನಕೆರೆಯಲ್ಲಿ ನಡೆದಿದೆ.
KR ಪೇಟೆ ತಾಲೂಕಿನ ಚೋಕನಹಳ್ಳಿ ಗ್ರಾಮದ ಜ್ಯೋತಿ ಮೃತ ಮಹಿಳೆ ಎಂದು ತಿಳಿದುಬಂದಿದೆ. ಜ್ಯೋತಿ ಇಂದು ಮಧ್ಯಾಹ್ನ ಹಬ್ಬದ ಸಾಮಗ್ರಿಗಳನ್ನು ಖರೀದಿಸಲು ಚೋಕನಹಳ್ಳಿಯಿಂದ ಬೂಕನಕೆರೆಗೆ ಬಂದಿದ್ದ ವೇಳೆ ಅವಘಡ ಸಂಭವಿಸಿದೆ.
ಘಟನೆ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ KR ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಕೇಸ್ ದಾಖಲಾಗಿದೆ.
Published On - 5:10 pm, Wed, 23 September 20



