AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMPಗೆ ಹಣ ದಾಹ: ಟೆಸ್ಟ್ ಮಾಡಿಸದಿದ್ದರೂ ಕೊರೊನಾ ಪಾಸಿಟಿವ್ ಎಂದರು ..

ಬೆಂಗಳೂರು: ಮಹಾಮಾರಿ ಕೊರೊನಾಗೆ ಭಯ ಪಡುತ್ತಿರುವ ಜನರಿಗೆ BBMP ಮಾಡುತ್ತಿರುವ ಎಡವಟ್ಟಿನಿಂದ ಮತ್ತಷ್ಟು ಜೀವ ಭಯ ಶುರುವಾಗಿದೆ. BBMP ಜನರ ಜೀವನದ ಜೊತೆ ಆಟವಾಡುತ್ತಿದೆ. ಕೊರೊನಾ ಟೆಸ್ಟಿಂಗ್ ವಿಚಾರದಲ್ಲಿ ಮತ್ತೆ ಮತ್ತೆ ಎಡವಟ್ಟು ಮಾಡುತ್ತಿದೆ. BBMPಯವರು ಟೆಸ್ಟಿಂಗ್ ಮಾಡಿಸದೆ ಕೊರೊನಾ ಪಾಸಿಟಿವ್​ ಎಂದು ಕರೆ ಮಾಡಿದ್ದಾರಂತೆ. ಹೌದು ಬೊಮ್ಮನಹಳ್ಳಿಯ ವಾಣಿ, ವಿದ್ಯಾ, ರಂಜಿತಾ ಎಂಬ ಮೂವರು ಮಹಿಳೆಯರಿಗೆ BBMP ಕರೆ ಮಾಡಿ ಕೊರೊನಾ ಪಾಸಿಟಿವ್​ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಸೆ. 24ರಂದು ಬನಶಂಕರಿಗೆ ಹೋಗಿದ್ದ ವಾಣಿ, […]

BBMPಗೆ ಹಣ ದಾಹ: ಟೆಸ್ಟ್ ಮಾಡಿಸದಿದ್ದರೂ ಕೊರೊನಾ ಪಾಸಿಟಿವ್ ಎಂದರು ..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 01, 2020 | 5:05 PM

Share

ಬೆಂಗಳೂರು: ಮಹಾಮಾರಿ ಕೊರೊನಾಗೆ ಭಯ ಪಡುತ್ತಿರುವ ಜನರಿಗೆ BBMP ಮಾಡುತ್ತಿರುವ ಎಡವಟ್ಟಿನಿಂದ ಮತ್ತಷ್ಟು ಜೀವ ಭಯ ಶುರುವಾಗಿದೆ. BBMP ಜನರ ಜೀವನದ ಜೊತೆ ಆಟವಾಡುತ್ತಿದೆ. ಕೊರೊನಾ ಟೆಸ್ಟಿಂಗ್ ವಿಚಾರದಲ್ಲಿ ಮತ್ತೆ ಮತ್ತೆ ಎಡವಟ್ಟು ಮಾಡುತ್ತಿದೆ.

BBMPಯವರು ಟೆಸ್ಟಿಂಗ್ ಮಾಡಿಸದೆ ಕೊರೊನಾ ಪಾಸಿಟಿವ್​ ಎಂದು ಕರೆ ಮಾಡಿದ್ದಾರಂತೆ. ಹೌದು ಬೊಮ್ಮನಹಳ್ಳಿಯ ವಾಣಿ, ವಿದ್ಯಾ, ರಂಜಿತಾ ಎಂಬ ಮೂವರು ಮಹಿಳೆಯರಿಗೆ BBMP ಕರೆ ಮಾಡಿ ಕೊರೊನಾ ಪಾಸಿಟಿವ್​ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಸೆ. 24ರಂದು ಬನಶಂಕರಿಗೆ ಹೋಗಿದ್ದ ವಾಣಿ, ವಿದ್ಯಾ, ರಂಜಿತಾ ಬನಶಂಕರಿ ಮೆಟ್ರೋ ನಿಲ್ದಾಣದ ಬಳಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಲು BBMP ಯವರು ಮನವಿ ಮಾಡಿದ್ದಾರೆ. ಆದರೆ ವಾಣಿ, ವಿದ್ಯಾ, ರಂಜಿತಾ ಟೆಸ್ಟಿಂಗ್​ಗೆ ನಿರಾಕರಿಸಿದ್ದಾರೆ. ಕೊನೆಗೆ ನಿಮ್ಮ ಮೊಬೈಲ್ ನಂಬರ್ ಕೊಡಿ ಎಂದು ಮನವಿ ಮಾಡಿದ್ದಾರೆ.

ಬಳಿಕ ಮೊಬೈಲ್​ಗೆ ಬಂದ ಓಟಿಪಿಯನ್ನೂ ಪಡೆದಿದ್ದಾರೆ. ನಂತರ ಸೆಪ್ಟೆಂಬರ್ 26 ರಂದು ಪಾಸಿಟಿವ್ ಬಂದಿದೆ ಎಂದು ಕರೆ ಮಾಡಿದ್ದಾರೆ. ಟೆಸ್ಟ್ ಮಾಡಿಸದೆ ಪಾಸಿಟಿವ್ ಹೇಗೆ ಬಂತೆಂಬ ಪ್ರಶ್ನೆ ಈ ಮೂವರೂ ಮಹಿಳೆಯರಿಗೆ ಕಾಡುತ್ತಿದೆ. ಹಾಗಾದ್ರೆ ಪಾಸಿಟಿವ್ ಲೆಕ್ಕ ತೋರಿಸಿ ಹಣ ನುಂಗುವ ಪ್ಲ್ಯಾನ್​? ಮಾಡಲಾಗುತ್ತಿದೆಯಾ. ಈ ರೀತಿ ಅದೆಷ್ಟು ಮಂದಿಗೆ ಸುಳ್ಳು ಹೇಳಿ ಚಿಕಿತ್ಸೆ ನೆಪದಲ್ಲಿ ಹಣ ಕೀಳುತ್ತಿದ್ದಾರೆ ಎಂಬ ಅನುಮಾನಗಳು ಬರುತ್ತಿವೆ. ಸರ್ಕಾರವೇ ಹೀಗೆ ಸುಲಿಗೆ ಮಾಡಲು ನಿಂತರೆ ಬಡ ಜನ ಎಲ್ಲಿಗೆ ಹೋಗಬೇಕು. ರಾಜ್ಯ ಸರ್ಕಾರ ಈಗಲಾದರೂ ಈ ಬಗ್ಗೆ ಗಮನ ಹರಿಸಿ ಜನರನ್ನು ಕಾಪಾಡಬೇಕಿದೆ.

Follow Us
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು