AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಾಶಯವೇ ಇದ್ದರೂ ಕುಡಿಯೋಕೆ ನೀರಿಲ್ಲ: ತುಂಗಾ ತಟದಲ್ಲಿ ‘ಭದ್ರೆಯರ’ ಆಕ್ರೋಶ

ಬಳ್ಳಾರಿ: ಕೈಯಲ್ಲಿ ಖಾಲಿ ಕೊಡ.. ಕಣ್ಣಲ್ಲಿ ಬೆಂಕಿ ಕಿಡಿ.. ಎಲ್ಲರಿಗೂ ಆಕ್ರೋಶ ಉಕ್ಕಿ ಬರ್ತಿದೆ. ರೋಷಾವೇಶ ಹೊರ ಹಾಕ್ತಿದ್ದಾರೆ, ಸರ್ಕಾರದ ವಿರುದ್ಧ ಧಿಕ್ಕಾರದ ಕಹಳೆ ಮೊಳಗಿಸಿದ್ದಾರೆ. ಒಂದು ದಿನ ಊಟ ಇಲ್ಲ ಅಂದ್ರೂ ಪರವಾಗಿಲ್ಲ. ಕೈಯಲ್ಲಿ ಕಾಸಿಲ್ಲ ಅಂದ್ರೂ ಅಡ್ಜಸ್ಟ್ ಮಾಡಿಕೊಳ್ಳಬಹುದು. ಆದ್ರೆ, ತುಂಗಾಭದ್ರ ಜಲಾಶಯ ಊರಿನ ಪಕ್ಕದಲ್ಲೇ ಇದ್ರು ಕುಡಿಯಲು ನೀರಿಲ್ಲ ಅಂದ್ರೆ ಹೇಗ್ ಆಗ್ಬೇಡ ಹೇಳಿ. ಕೈಯಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ: ಹೀಗಾಗಿಯೇ ಹೊಸಪೇಟೆ ತಾಲೂಕು ಬೈಲುವದ್ದಿಗೇರಿ ಗ್ರಾಮದ ಜನ ಕೈಯಲ್ಲಿ ಖಾಲಿ […]

ಜಲಾಶಯವೇ ಇದ್ದರೂ ಕುಡಿಯೋಕೆ ನೀರಿಲ್ಲ: ತುಂಗಾ ತಟದಲ್ಲಿ ‘ಭದ್ರೆಯರ’ ಆಕ್ರೋಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 22, 2020 | 11:20 AM

Share

ಬಳ್ಳಾರಿ: ಕೈಯಲ್ಲಿ ಖಾಲಿ ಕೊಡ.. ಕಣ್ಣಲ್ಲಿ ಬೆಂಕಿ ಕಿಡಿ.. ಎಲ್ಲರಿಗೂ ಆಕ್ರೋಶ ಉಕ್ಕಿ ಬರ್ತಿದೆ. ರೋಷಾವೇಶ ಹೊರ ಹಾಕ್ತಿದ್ದಾರೆ, ಸರ್ಕಾರದ ವಿರುದ್ಧ ಧಿಕ್ಕಾರದ ಕಹಳೆ ಮೊಳಗಿಸಿದ್ದಾರೆ. ಒಂದು ದಿನ ಊಟ ಇಲ್ಲ ಅಂದ್ರೂ ಪರವಾಗಿಲ್ಲ. ಕೈಯಲ್ಲಿ ಕಾಸಿಲ್ಲ ಅಂದ್ರೂ ಅಡ್ಜಸ್ಟ್ ಮಾಡಿಕೊಳ್ಳಬಹುದು. ಆದ್ರೆ, ತುಂಗಾಭದ್ರ ಜಲಾಶಯ ಊರಿನ ಪಕ್ಕದಲ್ಲೇ ಇದ್ರು ಕುಡಿಯಲು ನೀರಿಲ್ಲ ಅಂದ್ರೆ ಹೇಗ್ ಆಗ್ಬೇಡ ಹೇಳಿ.

ಕೈಯಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ: ಹೀಗಾಗಿಯೇ ಹೊಸಪೇಟೆ ತಾಲೂಕು ಬೈಲುವದ್ದಿಗೇರಿ ಗ್ರಾಮದ ಜನ ಕೈಯಲ್ಲಿ ಖಾಲಿ ಕೊಡ ಹಿಡ್ಕೊಂಡು ರೋಡಿಗೆ ಇಳಿದಿದ್ರು. ನಮಗೆ ಕುಡಿಯಲು ನೀರು ಕೊಡಿ ಅಂತಾ ಆಗ್ರಹಿಸಿದ್ರು. ನಾಲ್ಕು ಗ್ರಾಮಗಳಿಗೂ ಆಧಾರವಾಗಿದ್ದು ಕೆರೆಯೂ ಬಾಡಿ ಹೋಗಿದೆ. ಜಲಾಶಯದಿಂದ್ಲೂ ನೀರು ಹರಿಸ್ತಿಲ್ಲ. ಹೀಗಾಗಿ ಗ್ರಾಮದ ಮುಂದೆ ಹಾದು ಹೋಗಿರುವ ಜಿಂದಾಲ್ ಪೈಪ್ ಲೈನ್ ಮೂಲಕ, ಕೆರೆಗೆ ನೀರು ಹರಿಸಿ ಅಂತಾ ಜನ ಮನವಿ ಮಾಡ್ತಿದ್ದಾರೆ. ಇತ್ತ, ಸ್ಥಳಕ್ಕೆ ಜಿಂದಾಲ್ ಕಂಪನಿ ಅಧಿಕಾರಿಗಳು ಹಾಗೂ ಹೊಸಪೇಟೆಯ ಉಪ ತಹಶೀಲ್ದಾರ್ ಭೇಟಿ ನೀಡಿದ್ರು. ಈ ವೇಳೆ ಸಮಸ್ಯೆಗೆ ಪರಿಹಾರ ಹುಡುಕುತ್ತೇವೆ ಅಂತಾ ಭರವಸೆ ಕೊಟ್ರು.

ಸದ್ಯ, ಟಿ.ಬಿ ಡ್ಯಾಂ ನೀರನ್ನು ಜಿಂದಾಲ್ ಕಂಪನಿ ಪೈಪ್ ಲೈನ್ ಮೂಲಕ ಬೈಲುವದ್ದಿಗೇರಿ ಗ್ರಾಮಕ್ಕೆ ನೀರು ಬಿಡಬಹುದು. ಆದ್ರೆ, ಒಂದು ಗ್ರಾಮಕ್ಕೆ ನೀರು ಹರಿಸಿದ್ರೆ, ಬೇರೆಲ್ಲಾ ಗ್ರಾಮಗಳು ಬೇಡಿಕೆ ಇಡುತ್ತವೆ ಎಂಬ ಭಯ ಜಿಂದಾಲ್​ಗೆ ಆವರಿಸಿದೆ. ಹೀಗಿರುವಾಗ ಇಲ್ಲಿನ ನೀರಿನ ಸಮಸ್ಯೆಗೆ ಅಧಿಕಾರಿಗಳು ಹೇಗ್ ಬ್ರೇಕ್ ಕೊಡ್ತಾರೆ ಅನ್ನೋ ಕುತೂಹಲ ಕೆರಳಿಸಿದೆ.

Published On - 8:31 pm, Tue, 21 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​