AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳ ಕಮಾಲ್.. ತಮ್ಮ ಪ್ರತಿಭೆಯಿಂದ ಜನರಿಗೆ ಥ್ರಿಲ್​ಕೊಟ್ಟ ಮಹಿಳಾ ಮಣಿಗಳು

ಮೋಟಾರ್ ರೇಸಿಂಗ್ ಅಂದ್ರೇನೇ ಹಾಗೆ.. ಅಲ್ಲಿ ಥ್ರಿಲ್ ಇರುತ್ತೆ.. ಮೈ ಜುಮ್ಮೆನ್ನಿಸೋ ರೋಚಕತೆ ಇರುತ್ತೆ.. ಹೀಗಂತಾ ಬರೀ ಪುರುಷರು ಮಾತ್ರ ರೇಸಿಂಗ್ ಮಜಾ ಮಾಡ್ತಾರೆ ಅನ್ಕೋಬೇಡಿ. ಲೇಡಿ ಡ್ರೈವರ್​ಗಳು ಸಹ ತಮ್ಮ ಕೈ ಚಳಕ ತೋರಿಸ್ತಾರೆ.

ಮೋಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳ ಕಮಾಲ್.. ತಮ್ಮ ಪ್ರತಿಭೆಯಿಂದ ಜನರಿಗೆ ಥ್ರಿಲ್​ಕೊಟ್ಟ ಮಹಿಳಾ ಮಣಿಗಳು
ಮೋಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳ ಕಮಾಲ್
ಆಯೇಷಾ ಬಾನು
|

Updated on: Mar 22, 2021 | 8:38 AM

Share

ಹಾಸನ: ಜಿಲ್ಲೆಯ ಸಕಲೇಶಪುರದಲ್ಲಿ ನಡೆದ ಮೊಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳು ಕಮಾಲ್ ಮಾಡಿದ್ದಾರೆ. ಸಕಲೇಶಪುರದಲ್ಲಿ ನಡೆದ ರಾಜ್ಯಮಟ್ಟದ ಕಾರ್ ಱಲಿಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಸ್ಪರ್ಧಿಗಳು ತಮ್ಮ ಪ್ರತಿಭೆ ಅನಾವರಣಗೊಳಿಸಿದ್ರು.

ಕೊಡಗಿನ ಬೆಡಗಿಯರಾದ ಮೀನಾ, ನಿರ್ಮಲಾ, ಸಕಲೇಶಪುರದ ಜಾಸ್ಮಿನ್ ಮೊಟಾರ್ ರೇಸ್​ ಮೂಲಕ ಜನರನ್ನು ಸಖತ್ ರಂಜಿಸಿದ್ರು. ಡರ್ಟ್​ ಟ್ರ್ಯಾಕ್​ನಲ್ಲಿ ಕೊಡಗಿನ ಮೀನಾ ಮಿಂಚಿನ ವೇಗದಲ್ಲಿ ಕಾರು ಚಲಾಯಿಸಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ರೆ. ನಿರ್ಮಲಾ ಕೂಡ ತಮ್ಮ ಚಾಣಾಕ್ಷತೆಯಿಂದ ಕಮಾಲ್ ಮಾಡಿದ್ರು. ಮಾಮೂಲಿಯಾಗಿ ರೇಸ್ ನೋಡಿ ಖುಷಿ ಪಡ್ತಿದ್ದ ಮಹಿಳಾ ಮಣಿಗಳು ತಾವೇ ಖುದ್ದಾಗಿ ರೇಸಿಗಿಳಿದು ಗಮನಸೆಳೆದ್ರು.

ಮೋಟಾರ್ ಸ್ಪೋರ್ಟ್ಸ್​​ಗೆ ಉತ್ತೇಜನ ನೀಡೋ ಸಲುವಾಗಿ ಸಕಲೇಶಪುರದ ಮಲ್ನಾಡ್ ಬಾಯ್ಸ್ ಸಂಸ್ಥೆಯಿಂದ ಆಯೋಜನೆಗೊಂಡಿದ್ದ ಕಾರ್ ಱಲಿಯಲ್ಲಿ ಮೊದಲಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಆಯೋಜನೆ ಮಾಡಿದ್ರು. ಡರ್ಟ್ ಟ್ರ್ಯಾಕ್​ನಲ್ಲಿ ರೇಸರ್​ಗಳು ಮಿಂಚಿನ ವೇಗದಲ್ಲಿ ಕಾರು ಚಲಾಯಿಸಿದ್ರು. ಱಲಿಗೆ ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ 90 ಸ್ಪರ್ಧಿಗಳು ಆಗಮಿಸಿದ್ರು. ಕಳೆದ ಒಂದು ವರ್ಷ ಕೊರೊನಾ ಭೀತಿಯಿಂದ ಮನರಂಜನೆಯಿಲ್ಲದೆ ಮಂಕಾಗಿದ್ದ ಜನರಿಗೆ ಮೋಟಾರ್ ರೇಸ್ ರೋಮಾಂಚನಕಾರಿ ಅನುಭವ ನೀಡಿದೆ.

ಇದನ್ನೂ ಓದಿ: ರಾಕೆಟ್ ವೇಗದಲ್ಲಿ ಮಿಂಚಿ ಮಾಯವಾಗುವ ಕಾರುಗಳು: ರೋಚಕತೆ ಸೃಷ್ಟಿಸಿದ ಹೊಯ್ಸಳರ ನಾಡಿನ ಮೋಟಾರ್ ಸ್ಪೋರ್ಟ್ಸ್!

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ